ಜುಬೈರ್ ಆಲ್ಟ್ ನ್ಯೂಸ್ ಗೆ ಪಾಕಿಸ್ತಾನ, ಸಿರಿಯಾದಿಂದ ದೇಣಿಗೆ: ಜಾಮೀನು ಅರ್ಜಿ ವಜಾ
ಪಾಕಿಸ್ತಾನ, ಸಿರಿಯಾದಿಂದ ದೇಣಿಗೆ ಬಂದಿದ್ದು, ಇದರ ಮೂಲವನ್ನು ಪರಿಗಣಿಸಬೇಕಾಗಿದೆ.
Team Udayavani, Jul 2, 2022, 2:59 PM IST
ನವದೆಹಲಿ: ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಜಾಮೀನು ಅರ್ಜಿಯನ್ನು ವಜಾಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿರುವ ದೆಹಲಿ ಪೊಲೀಸರು, ಜುಬೈರ್ ಕಂಪನಿ ಪಾಕಿಸ್ತಾನ, ಸಿರಿಯಾ ಮತ್ತು ಇತರ ಗಲ್ಫ್ ದೇಶಗಳಿಂದ ದೇಣಿಗೆ ಪಡೆದಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ನೂಪುರ್ ಹೇಳಿಕೆಗೆ ಬೆಂಬಲ:ಮಹಾರಾಷ್ಟ್ರದಲ್ಲೂ ವ್ಯಕ್ತಿಯ ಹತ್ಯೆ: ತಡವಾಗಿ ಬೆಳಕಿಗೆ ಬಂದ ಪ್ರಕರಣ
ಆಲ್ಟ್ ನ್ಯೂಸ್ ನ ಮೂಲ ಕಂಪನಿಯಾದ ಪ್ರಾವ್ಡಾ ಮೀಡಿಯಾಕ್ಕೂ ಜುಬೈರ್ ನಿರ್ದೇಶಕನಾಗಿದ್ದು, ಈ ಕಂಪನಿ ಎರಡು ಲಕ್ಷಕ್ಕೂ ಅಧಿಕ ಮೊತ್ತದ ಹಣವನ್ನು ವಿವಿಧ ವಹಿವಾಟಿನ ಮೂಲಕ ಪಡೆಯಲಾಗಿದ್ದು, ಇದರ ಐಪಿ ವಿಳಾಸ ವಿದೇಶಗಳದ್ದಾಗಿದೆ ಎಂದು ದೆಹಲಿ ಪೊಲೀಸರ ಪರ ವಕೀಲರು ಚೀಫ್ ಮೆಟ್ರೋಪಾಲಿಟಿಯನ್ ಮ್ಯಾಜಿಸ್ಟ್ರೇಟ್ ಗೆ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.
ಪಾಕಿಸ್ತಾನ, ಸಿರಿಯಾದಿಂದ ದೇಣಿಗೆ ಬಂದಿದ್ದು, ಇದರ ಮೂಲವನ್ನು ಪರಿಗಣಿಸಬೇಕಾಗಿದೆ. ಇದೊಂದು ಕೇವಲ ಸಾಧಾರಣ ಟ್ವೀಟ್ ಗೆ ಸಂಬಂಧಪಟ್ಟ ಪ್ರಕರಣವಲ್ಲ. ಪಾವ್ಡಾ ಮೀಡಿಯಾ ಡೈರೆಕ್ಟರ್ ಆರೋಪಿ ಜುಬೈರ್, ತುಂಬಾ ಚಾಣಕ್ಷತನದಿಂದ ಎಲ್ಲವನ್ನೂ ಡಿಲೀಟ್ ಮಾಡುತ್ತಿರುವುದಾಗಿ ದೆಹಲಿ ಪೊಲೀಸರು ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.
14 ದಿನಗಳ ನ್ಯಾಯಾಂಗ ಬಂಧನ:
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಜಾಮೀನು ಅರ್ಜಿಯನ್ನು ದೆಹಲಿಯ ಪಟಿಯಾಲಾ ಹೈಕೋರ್ಟ್ ವಾದ, ಪ್ರತಿವಾದ ಆಲಿಸಿದ ನಂತರ ವಜಾಗೊಳಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!