ಮುಂಗಾರು ಅವಧಿ ಅಂತ್ಯ: ಶೇ.29 ಹೆಚ್ಚು ಮಳೆ: ಹವಾಮಾನ ಇಲಾಖೆ
Team Udayavani, Oct 2, 2022, 10:33 PM IST
ಬೆಂಗಳೂರು: ಜೂನ್ನಿಂದ ಸೆಪ್ಟಂಬರ್ವರೆಗಿನ ಮುಂಗಾರು ಮಳೆಯ ಅವಧಿ ಮುಗಿದಿದ್ದು, ಈ ಬಾರಿ ವಾಡಿಕೆಗಿಂತ ಶೇ. 29 ಅಧಿಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಾಡಿಕೆಯಂತೆ ನಾಲ್ಕು ತಿಂಗಳಲ್ಲಿ 831.8 ಮಿ.ಮೀ. ವಾಡಿಕೆ ಮಳೆಯಾಗಲಿದೆ. ಈ ಬಾರಿ 1075.2 ಮಿ.ಮೀ. ಮಳೆಯಾಗಿದ್ದು, ಶೇ.29 ಹೆಚ್ಚಾಗಿದೆ.
ಸಾಮಾನ್ಯವಾಗಿ ಸೆಪ್ಟಂಬರ್ ತಿಂಗಳವರೆಗೆ ನೈಋತ್ಯ ಮುಂಗಾರು ಮಳೆಯಾಗಲಿದೆ ಎಂದು ಅಂದಾಜಿಸುತ್ತೇವೆ. ಆದರೆ ಮುಂಗಾರು ಮಾರುತಗಳು ಎಲ್ಲಿಯವರೆಗೆ ಬೀಸುತ್ತವೆಯೇ ಅಲ್ಲಿಯವರೆಗೂ ಮುಂಗಾರು ಮಳೆಯೆಂದೇ ಪರಿಗಣಿಸಲಾಗುತ್ತದೆ. ಈ ಬಾರಿ ಕೇರಳದಿಂದ ಆರಂಭವಾಗಿರುವ ನೈಋತ್ಯ ಮುಂಗಾರು ಸದ್ಯ ಗುಜರಾತ್ನಲ್ಲಿದ್ದು, ಇನ್ನೂ ಒಂದು ವಾರ ಕಾಲ ಉತ್ತರ ಭಾರತದಲ್ಲಿ ಮಳೆಯಾಗಲಿದೆ. ಅನಂತರ ಮುಂಗಾರು ಪೂರ್ಣವಾಗುತ್ತದೆ. ಅದಾದ ಬಳಿಕ ಈಶಾನ್ಯ ಮುಂಗಾರು ಮಾರುತಗಳು (ಹಿಂಗಾರು) ಆರಂಭಗೊಳ್ಳಲಿವೆ ಎಂದು ಬೆಂಗಳೂರು ಹವಾಮಾನ ಕೇದ್ರದ ಆಡಳಿತಾಧಿಕಾರಿ ಸದಾನಂದ ಅಡಿಗ ತಿಳಿಸಿದ್ದಾರೆ.
ಈ ಬಾರಿಯ ಆಗಸ್ಟ್ ಮತ್ತು ಸೆಪ್ಟಂಬರ್ನಲ್ಲಿ ಬೆಂಗಳೂರಿನಲ್ಲಿ 15 ವರ್ಷಗಳ ಬಳಿಕ ದಾಖಲೆಯ ಮಳೆಯಾಗಿದೆ. ಹಿಂದೆಂದೂ ಕಾಣದಂಥ ಪ್ರವಾಹ ಉಂಟಾಗಿತ್ತು. ಹಿಂದಿನ ವರ್ಷಗಳಲ್ಲಿ ಬಯಲು ಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರಿನಲ್ಲಿ ಕೊರತೆ ಮಳೆಯಾಗಿತ್ತು. ಈ ಬಾರಿ ಉತ್ತಮ ಮಳೆಯಾಗಿದೆ.
ಉತ್ತರ ಒಳನಾಡು ಜಿಲ್ಲೆಗಳು ಸೇರಿ ಯಾವುದೇ ಜಿಲ್ಲೆಗಳಲ್ಲಿ ಈ ವರ್ಷ ವಾಡಿಕೆಗಿಂತ ಎಲ್ಲಿಯೂ ಮಳೆಯಾಗದಿರುವುದು ಗಮನಾರ್ಹ ಅಂಶವಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್