ಇಂದಿನಿಂದ ಸದನ ಸಮರ: ಕೈ-ಕಮಲ ಜಗಳದಲ್ಲಿ ದೂರ ನಿಲ್ಲಲಿದೆಯೇ ಜೆಡಿಎಸ್‌?

ಮೊದಲ ದಿನ ಸಚಿವ ಕತ್ತಿ ನಿಧನಕ್ಕೆ ಗೌರವಕ್ಕೆ ಮಾತ್ರ ಸೀಮಿತ

Team Udayavani, Sep 12, 2022, 7:10 AM IST

ಇಂದಿನಿಂದ ಸದನ ಸಮರ: ಕೈ-ಕಮಲ ಜಗಳದಲ್ಲಿ ದೂರ ನಿಲ್ಲಲಿದೆಯೇ ಜೆಡಿಎಸ್‌?

ಬೆಂಗಳೂರು: ರಾಜ್ಯ ವಿಧಾನಮಂಡಲದ 10 ದಿನಗಳ ಮಳೆಗಾಲದ ಅಧಿವೇಶನ ಸೋಮವಾರ ಆರಂಭವಾಗಲಿದೆ. ಆಡಳಿತ ಮತ್ತು ಪ್ರತಿಪಕ್ಷಗಳ “ಹಗರಣ’ ಆರೋಪ-ಪ್ರತ್ಯಾರೋಪಗಳಿಗೆ ಉಭಯ ಸದನಗಳು ಸಾಕ್ಷಿಯಾಗಲಿವೆ.

ನಿಗದಿಯಂತೆ ಬೆಳಗ್ಗೆ 11 ಗಂಟೆಗೆ ಉಭಯ ಸದನಗಳ ಕಲಾಪ ಆರಂಭಗೊಳ್ಳಲಿದ್ದು, ಅರಣ್ಯ ಸಚಿವರಾಗಿದ್ದ ಹಾಗೂ ವಿಧಾನಸಭೆಯ ಹಿರಿಯ ಸದಸ್ಯರಾಗಿದ್ದ ಉಮೇಶ್‌ ಕತ್ತಿಯವರ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಮೊದಲ ದಿನದ ಕಲಾಪ ಸಂತಾಪಕ್ಕೆ ಸೀಮಿತವಾಗಲಿದೆ.

ಮಂಗಳವಾರದಿಂದ ಅಧಿಕೃತ ಕಾರ್ಯಕಲಾಪಗಳು ನಡೆಯಲಿವೆ.ಪಿಎಸ್‌ಐ ನೇಮಕಾತಿ ಹಗರಣ, 40 ಪರ್ಸೆಂಟ್‌ ಕಮಿಷನ್‌, ಬೆಂಗಳೂರು ಮಳೆ-ಪ್ರವಾಹ, ರಾಜ್ಯದಲ್ಲಿನ ಪ್ರವಾಹ ಇತ್ಯಾದಿ ವಿಷಯಗಳು ಸದ್ದು ಮಾಡುವ ಸಾಧ್ಯತೆಯಿದ್ದು, ಶನಿವಾರ ನಡೆದ ಜನಸ್ಪಂದನೆ ಸಮಾವೇಶದಲ್ಲಿ ಅರ್ಕಾವತಿ “ರೀಡು’ ಹಗರಣ ಸೇರಿದಂತೆ ಸಿದ್ದರಾಮಯ್ಯ ಸರ್ಕಾರದಲ್ಲಿನ ಹಗರಣಗಳನ್ನು ದಾಖಲೆ ಸಮೇತ ಬಹಿರಂಗಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿರುವುದು “ಸದನ ಕದನ’ದ ಮುನ್ಸೂಚನೆ ಕೊಟ್ಟಂತಾಗಿದೆ.

ಸಾಮಾನ್ಯವಾಗಿ ವಿಧಾನಮಂಡಲದ ಅಧಿವೇಶನವೆಂದರೆ ಆಡಳಿತ ಪಕ್ಷವನ್ನು ಕಟಕಟೆಯಲ್ಲಿ ನಿಲ್ಲಿಸುವುದಕ್ಕೆ ಪ್ರತಿಪಕ್ಷಗಳಿಗೆ ಇರುವ ಪ್ರಮುಖ ಅಸ್ತ್ರ ಹಾಗೂ ಶಾಸನಾತ್ಮಕ ವೇದಿಕೆ. ಸಹಜವಾಗಿ ಆಡಳಿತ ಪಕ್ಷದ ವೈಫ‌ಲ್ಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಸವಾರಿ ಮಾಡಲು ಪ್ರತಿಪಕ್ಷಗಳು ತಮ್ಮದೇ ಆದ ತಂತ್ರಗಳನ್ನು ಹೆಣೆದಿದ್ದರೆ, ಅವುಗಳಿಗೆ ತಿರುಗೇಟು ನೀಡಲು ಆಡಳಿತ ಪಕ್ಷ ದಾಖಲೆಗಳ “ಗುರಾಣಿ’ ಸಿದ್ಧಪಡಿಸಿಕೊಂಡಿದೆ. 10 ದಿನಗಳ ಈ ಅಧಿವೇಶನದಲ್ಲಿ ಆರೋಪ-ಪ್ರತ್ಯಾರೋಪ, ಗದ್ದಲ, ಧರಣಿ, ಸಭಾತ್ಯಾಗ, ಸುಗಮ ಕಲಾಪಕ್ಕೆ ಸ್ಪೀಕರ್‌ ಹಾಗೂ ಸಭಾಪತಿಗಳಿಂದ ಸಂಧಾನದ ಪ್ರಹಸನಗಳು ನಡೆಯುವುದರಲ್ಲಿ ಅನುಮಾನಗಳಿಲ್ಲ.

ಪಿಎಸ್‌ಐ ನೇಮಕಾತಿ ಹಗರಣ, 40 ಪರ್ಸೆಂಟ್‌ ಕಮಿಷನ್‌, ಬೆಂಗಳೂರು ಮಳೆ- ಪ್ರವಾಹ, ರಾಜ್ಯದ ಪ್ರವಾಹ ಮುಂತಾದ ವಿಷಯಗಳನ್ನು ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿ ಪಕ್ಷವನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ಕಾರ್ಯತಂತ್ರ ರೂಪಿಸಿದ್ದರೆ, ಪ್ರತಿಪಕ್ಷಗಳ ಆರೋಪಗಳಿಗೆ ದಾಖಲೆ ಸಮೇತ ತಿರುಗೇಟು ನೀಡುವುದರ ಜೊತೆಗೆ ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ನಡೆದ ಅರ್ಕಾವತಿ ಹಗರಣ, ಪಾವಗಡ ಸೋಲಾರ್‌ ಘಟಕ ಸ್ಥಾಪನೆಯಲ್ಲಿ ನಡೆದ ಅವ್ಯವಹಾರ, ದಿಂಬು-ಹಾಸಿಗೆ ಹಗರಣ ಮತ್ತಿತರ ಪ್ರಕರಣಗಳನ್ನು ಮರು ತನಿಖೆಗೆ ವಹಿಸಲು ಬಿಜೆಪಿ ಪ್ರತಿತಂತ್ರ ಹೆಣೆದಿದ್ದು, ಆ ಮೂಲಕ ಪ್ರತಿಪಕ್ಷವನ್ನು ಕಟ್ಟಿ ಹಾಕಲು ಸನ್ನದ್ದವಾಗಿದೆ. ವಿಶೇಷವಾಗಿ ಅರ್ಕಾವತಿ ಡಿನೋಟಿಫಿಕೇಷನ್‌ ಹಾಗೂ ಪಾವಗಡ ಸೋಲಾರ್‌ ವಿದ್ಯುತ್‌ ಘಟಕ ಪ್ರಕರಣಗಳನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಅವರಿಬ್ಬರ ಬಾಯಿ ಮುಚ್ಚಿಸಲು ಬಿಜೆಪಿ ಯೋಜನೆ ಹಾಕಿಕೊಂಡಿದೆ.

ಎಸಿಬಿ ಕೆಸರೆರಚಾಟ ಸಾಧ್ಯತೆ:
ಸಿದ್ದರಾಮಯ್ಯ ಸರ್ಕಾರದಲ್ಲಿ ಅಸ್ತಿತ್ವಕ್ಕೆ ತರಲಾಗಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ರಚನೆಯನ್ನು ರದ್ದುಪಡಿಸಿ ಹೈಕೋರ್ಟ್‌ ನೀಡಿರುವ ಆದೇಶ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಇನ್ನೊಂದು ಅಸ್ತ್ರ ಸಿಕ್ಕಂತಾಗಿದೆ. ಅಧಿಕಾರಕ್ಕೆ ಬಂದ 48 ಗಂಟೆಗಳಲ್ಲಿ ಎಸಿಬಿ ರದ್ದುಪಡಿಸಿ ಲೋಕಾಯುಕ್ತಕ್ಕೆ ಇನ್ನಷ್ಟು ಬಲ ನೀಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದು ಅನುಷ್ಠಾನಕ್ಕೆ ತರಲು ಬಿಜೆಪಿ ಆಗಿಲ್ಲ. ಹೈಕೋರ್ಟ್‌ ಎಸಿಬಿಯನ್ನು ರದ್ದುಪಡಿಸಿತು ಎಂಬ ತಿರುಗೇಟು ಕಾಂಗ್ರೆಸ್‌ ಬಳಿ ಇದೆ. ಒಟ್ಟಿನಲ್ಲಿ ಎಸಿಬಿ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಕೆಸರೇರಚಾಟ ನಡೆಯುವ ಸಾಧ್ಯತೆಯೂ ಇದೆ.

ಜೆಡಿಎಸ್‌ ನಡೆ ಏನಿರಲಿದೆ:
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ, ಬೆಂಗಳೂರಿನ ಮಳೆ ಅನಾಹುತ, ರಾಜ್ಯದ ಪ್ರವಾಹ ಪರಿಸ್ಥಿತಿ ಇತ್ಯಾದಿ ವಿಷಯಗಳು ಅಧಿವೇಶನದಲ್ಲಿ ಜೆಡಿಎಸ್‌ ಅಸ್ತ್ರಗಳಾಗಿವೆ. ಎಲ್ಲಾ ವಿಚಾರಗಳನ್ನು ಸದನದಲ್ಲಿ ಮಾತನಾಡುತ್ತೇನೆ ಎಂದು ಇತ್ತಿಚಿಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ನಡುವೆ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ನಡುವಿನ ಕಚ್ಚಾಟಗಳ ಅಷ್ಟೊಂದು ಪ್ರತಿಕ್ರಿಯೆ ನೀಡದ ಕುಮಾರಸ್ವಾಮಿ ಒಂದಿಷ್ಟು ಅಂತರ ಕಾಯ್ದುಕೊಂಡಂತಿದೆ. ಹಾಗಾಗಿ, ಅಧಿವೇಶನದಲ್ಲಿ ಜೆಡಿಎಸ್‌ ನಡೆ ಹೇಗಿರಲಿದೆ ಎಂದು ಕಾದು ನೋಡಬೇಕಿದೆ.

ಸಂಭಾವ್ಯ ಚರ್ಚಾ ವಿಷಯಗಳು
ಪ್ರವಾಹ, ಪಿಎಸ್‌ಐ ನೇಮಕಾತಿ ಹಗರಣ, 40 ಪರ್ಸಂಟ್‌ ಕಮಿಷನ್‌, ಉಪನ್ಯಾಸಕರ ನೇಮಕಾತಿ ಹಗರಣ, ರಾಜ್ಯದ ಕಾನೂನು ಸುವ್ಯವಸ್ಥೆ, ಬಿಬಿಎಂಪಿ ಹಾಗೂ ತಾ.ಪಂ. ಜಿ.ಪಂ ಚುನಾವಣೆ, ಲೋಕಾಯುಕ್ತ ಬಲಪಡಿಸುವಿಕೆ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ, ಸಿದ್ದರಾಮೋತ್ಸವ, ಬಿಜೆಪಿಯ ಜನಸ್ಪಂದನಾ ಸಮಾವೇಶ, ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆ, ಜೆಡಿಎಸ್‌ನ ಜಲಧಾರೆ, ಸಚಿವ-ಶಾಸಕರ ವಿರುದ್ಧದ ಆರೋಪಗಳು

ಏಳು ವಿಧೇಯಕಗಳ ಮಂಡನೆ?
ತಾ.ಪಂ ಹಾಗೂ ಜಿ.ಪಂ ಕ್ಷೇತ್ರಗಳಿಗೆ ಜನಸಂಖ್ಯೆ ನಿಗದಿಗೆ ಸಂಬಂಧಿಸಿದ “ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ (ತಿದ್ದುಪಡಿ) ಆಧ್ಯಾದೇಶ-2022′ ಸೇರಿದಂತೆ ಏಳಕ್ಕೂ ಹೆಚ್ಚು ವಿಧೇಯಕಗಳು ಅಧಿವೇಶನದಲ್ಲಿ ಮಂಡಣೆಯಾಗಲಿವೆ ಎಂದು ವಿಧಾನಸಭೆ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.