ಭಜನಾ ಪದಗಳ ಮೋಡಿಗಾರ್ತಿ ಹಳ್ಳೂರಿನ ರುಕ್ಮಿಣಿ
Team Udayavani, Dec 1, 2020, 3:35 PM IST
ಮೂಡಲಗಿ : ಹಳ್ಳೂರ ಗ್ರಾಮದ ಬಾಲಕಿ ರುಕ್ಮಿಣಿಗೆ ಚಿಕ್ಕ ವಯಸ್ಸಿನಲ್ಲಿಯೇ ಸಂಗೀತ ಶಾರದೆ ಒಲಿತಿದ್ದು, ಒಂದಲ್ಲ, ಎರಡಲ್ಲ ಸಾವಿರಾರು ಭಜನಾಪದಗಳ ಭಂಡಾರವೇ ಇದೆ ಎಂದರೂ ತಪ್ಪಾಗದು. ಇಪ್ಪತಾಲ್ಕು ಗಂಟೆಗಳ ಕಾಲವೂ ಹಾಡುವಷ್ಟು
ಹಾಡುಗಳು ಆಕೆಯ ಕಂಠಸಿರಿಯಲ್ಲಿ ಅಡಗಿವೆ.
ಹಳ್ಳೂರ ಗ್ರಾಮದ ಶಂಕರ ಅಟಮಟ್ಟಿ , ಲಕ್ಕವ್ವಾ ಬಡ ದಂಪತಿಯ ಪುತ್ರಿ ರುಕ್ಮಿಣಿ ನಾಲ್ಕನೇ ತರಗತಿಯಿಂದಲೇ ಭಜನಾಪದ
ಹಾಡುಗಳ ಮೂಲಕವೇ ಸಮಾಜದಲ್ಲಿರುವ ಮೌಡ್ಯಗಳನ್ನು ಅಳಿಸುವ ಕಾಯಕ ಮಾಡುತ್ತಿದ್ದಾಳೆ.
ಗ್ರಾಮದವರೇ ಆದ ರಾಜ್ಯ ಪ್ರಶಸ್ತಿ ಪುರಸ್ಕೃತ ಪರಯ್ಯ ಮಠಮತಿ ರುಕ್ಮಿಣಿಗೆ ಸಂಗೀತ ಕಲಿಸುತ್ತಿದ್ದು, ರುಕ್ಮಿಣಿ ಸಾವಿರಾರು ಭಜನಾಪದ ಹಾಡುವ ಮೂಲಕ ಭಜನಾಪದ ಹಾಡುಗಳ ಮೋಡಿಗಾರ್ತಿಯಾಗಿದ್ದಾಳೆ. ರುಕ್ಮಿಣಿಯು ಜಾತ್ರೆ, ಸಾಂಸ್ಕೃತಿಕ
ಕಾರ್ಯಕ್ರಮಗಳಲ್ಲಿ, ಶ್ರಾವಣ ಮಾಸದಲ್ಲಿ ಮತ್ತು ಗ್ರಾಮದ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಮಾತ್ರವಲ್ಲದೇ ಧಾರವಾಡ, ಬಾಗಲಕೋಟ, ವಿಜಯಪುರ, ಹಾವೇರಿ ಜಿಲ್ಲೆಗಳು ಮತ್ತು ಮಹಾರಾಷ್ಟ್ರ ರಾಜ್ಯ ಸೇರಿದಂತೆ ಸುಮಾರು ನಾಲ್ಕುನೂರು ಪ್ರದರ್ಶನ ನೀಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಇವಳಿಗೆ ಪ್ರಶಸ್ತಿ ನೀಡಿ ಗೌರವಿಸಿವೆ.
ಇದನ್ನೂ ಓದಿ:ತೆಲಂಗಾಣ ಕೋಟೆಗೆ ಬಿಜೆಪಿ ಲಗ್ಗೆ ಇಟ್ಟಿದ್ದು ಹೇಗೆ? ದಿಢೀರ್ ಬೆಳವಣಿಗೆಗೆ ಕಾರಣವೇನು…
ಭಜನಾಪದಗಳಲ್ಲದೇ ಅನಿಷ್ಠ, ಮೂಢನನಂಬಿಕೆಗಳ ಕುರಿತು ಜಾಗೃತಿ ಮೂಡಿಸುವ ಸಾಕಷ್ಟು ಹಾಡುಗಳನ್ನು ರುಕ್ಮಿಣಿ
ಹಾಡಿದ್ದಾಳೆ. ತನ್ನದು ಅನಕ್ಷರಸ್ಥ ಕುಟುಂಬ ಆಗಿದ್ದರೂ ಈಗಿನ ಮಕ್ಕಳು ಸಾಕ್ಷರರಾಗಬೇಕು ಎನ್ನುವ ಮನೋಭಾವದಿಂದ ಸಾಕ್ಷರತೆ ಕುರಿತು ಅರಿವು ಮೂಡಿಸುವ ಹಾಡುಗಳನ್ನೂ ಹಾಡುತ್ತಿರುವುದು ಅವಳ ಸಾಮಾಜಿಕ ಕಳಕಳಿ ತೋರಿಸುತ್ತದೆ.
ಕಾರ್ಯಕ್ರಮಗಳಿಂದ ಬರುವ ಅಲ್ಪಸ್ವಲ್ಪ ಸಹಾಯಧನದಿಂದ ಕುಟುಂಬದ ಜವಾಬ್ದಾರಿಗೂ ಕೈ ಜೋಡಿಸಿದ್ದಾಳೆ. ಪತ್ರಾಸ್ ಶೆಡ್ಡಿನಲ್ಲಿ ವಾಸ ಮಾಡುತ್ತಿರುವ ರುಕ್ಮಿಣಿಯ ತಂದೆ-ತಾಯಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುವುದರ ಜೊತೆಗೆ ಮಗಳು ತಮ್ಮಂತೆ ಅನಕ್ಷರಸ್ಥೆ ಆಗಬಾರದು ಎಂಬ ಕಾಳಜಿಯಿಂದ ಶಾಲೆ ಕಲಿಸುತ್ತಿದ್ದಾರೆ. ರುಕ್ಮಿಣಿ ಈ ವರ್ಷ ಹತ್ತನೇ ತರಗತಿ ಕಲಿಯುತ್ತಿದ್ದಾಳೆ.
– ಕೆ.ಬಿ.ಗಿರೆಣ್ಣವರ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್
ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್
ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ : ಬೀಳಗಿಯ ಓರ್ವ ವಶಕ್ಕೆ
ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯಸ್ವಾಮಿ ದರ್ಶನ ಪಡೆದ ಶಾಸಕ ಯತ್ನಾಳ್
ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ
MUST WATCH
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ
ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,
ಹೊಸ ಸೇರ್ಪಡೆ
ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್
ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್
ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು
ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ
ಮತದಾರರ ಕೈ ಸೇರಲಿದೆ ಡಿಜಿಟಲ್ ಓಟರ್ ಕಾರ್ಡ್