ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲೇ ಕಡಲಾಮೆಯ 70 ಕ್ಕೂ ಹೆಚ್ಚು ಮೊಟ್ಟೆಗಳು ಪತ್ತೆ


Team Udayavani, Jan 13, 2022, 10:45 AM IST

3sea

ಅಂಕೋಲಾ: ಬೃಹದಾಕಾರದ ಕಡಲಾಮೆಗಳ 70 ಕ್ಕೂ ಹೆಚ್ಚು ಮೊಟ್ಟೆಗಳು ಅಂಕೋಲಾ ತಾಲೂಕಿನ ಬಾವಿಕೇರಿ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.

ಅಳಿವಿನಂಚಿನಲ್ಲಿರುವ ಬೃಹದಾಕಾರದ ಕಡಲಾಮೆಯ ಮೊಟ್ಟೆಗಳನ್ನು ಕಡಲತೀರದಲ್ಲಿ ರಕ್ಷಣೆ ಮಾಡಲಾಗಿದ್ದು, ಅರಣ್ಯ ಇಲಾಖೆಯ ಅಂಕೋಲಾ ವಲಯ   ಹಾಗೂ ಕೋಸ್ಟಲ್ ಮತ್ತು ಮರೈನ್ ಇಕೋಸಿಸ್ಟಮ್ ಘಟಕ ಕಾರವಾರ ಇವರ ಸಹಭಾಗಿತ್ವದಲ್ಲಿ ಆಲಿವ್ ರಿಡ್ಲೇ ಕಡಲಾಮೆಯ ಮೊಟ್ಟೆಗಳನ್ನು ರಕ್ಷಿಸಲಾಗಿದೆ.

ಸದ್ಯ ಅವನತಿಯ ಅಂಚಿನಲ್ಲಿರುವ ಆಲಿವ್ ರಿಡ್ಲೇ ಆಮೆಗಳು ಸಮುದ್ರದ ತಡದಲ್ಲಿನ ಯಾಂತ್ರಿಕ ಬದಲಾವಣೆಯಿಂದಾಗಿ ತನ್ನ ವಂಶಗಳನ್ನು ಕಳೆದುಕೊಳ್ಳುತಿದ್ದು ಅಳಿವಿನಂಚಿಗೆ ತಲುಪಿದೆ. ಬುಧವಾರ ಅರಣ್ಯ ಇಲಾಖೆ ಈ ಮೊಟ್ಟೆಗಳನ್ನು ರಕ್ಷಣೆಮಾಡಿದ್ದು, ಭೂಮಿಯ ಶಾಖದ ಮೂಲಕ ಮೊಟ್ಟೆ ಮರಿಯೊಡೆದ ನಂತರ ಸಮುದ್ರಕ್ಕೆ ಬಿಡಲಿದ್ದಾರೆ.

ಕರಾವಳಿ ತೀರಗಳಲ್ಲಿ ಆಲಿವ್ ರಿಡ್ಲೆ ಹಾಗೂ ಗ್ರೀನ್ ಸೀಟರ್ಟಲ್ ಎಂಬ ಎರಡು ಪ್ರಬೇಧದ ಕಡಲಾಮೆಗಳು ಇದ್ದು ಗ್ರೀನ್ ಸೀಟರ್ಟಲಗಳ ಮೊಟ್ಟೆಗಳ ಗಾತ್ರ ಸಣ್ಣದಾಗಿರುತ್ತವೆ. ಈಗ ಪತ್ತೆಯಾಗಿರುವ ಮೊಟ್ಟೆಗಳ ಗಾತ್ರ ದೊಡ್ಡದಾಗಿರುವುದರಿಂದ ಇವು ಆಲಿವ್ ರಿಡ್ಲೇ ಆಮೆಯ ಮೊಟ್ಟಗಳಾಗಿವೆ. ಇವು ಮುಂದೆ 50 ರಿಂದ 60 ದಿನಗಳಲ್ಲಿ ಮರಿಯಾಗಿ ಹೊರಗೆ ಬಂದು ರಾತ್ರಿ ವೇಳೆಯಲ್ಲಿ ಸಮುದ್ರ ಸೇರುತ್ತವೆ. ಅಲ್ಲಿಯವರೆಗೆ ಮೊಟ್ಟೆಗಳನ್ನು ರಕ್ಷಣೆ ಮಾಡಲಾಗುತ್ತದೆ.
ಸ್ಥಳೀಯ ಮೀನುಗಾರರಾದ ಗಟಿಯ ಪೊಕ್ಕ ಹರಿಕಾಂತ ಇವರು ನೀಡಿದ ಮಾಹಿತಿ ಮೇರೆಗೆ ಕಡಲಾಮೆ ಮೊಟ್ಟೆಗಳ ರಕ್ಷಣಾ ಕಾರ್ಯದಲ್ಲಿ ಅರಣ್ಯ ಇಲಾಖೆ ಅಂಕೋಲಾ ವಲಯ ಅರಣ್ಯಾಧಿಕಾರಿ ಪ್ರಮೋದ.ಬಿ. ಹಾಗೂ ರಿಸರ್ಚ ಕೋ-ಆರ್ಡಿನೇಟರ್ ಶಾನ್ ನವಾಜ್ ಕಡಪಾ ಉಪಸ್ಥಿತರಿದ್ದು ಸಿಬ್ಬಂದಿಗಳಾದ ವೆಂಕಟರಮಣ ಸಣ್ಣಪ್ಪ ನಾಯಕ, ಸದಾನಂದ ಪುತ್ತು ಗೌಡ, ಸುಧಾಕರ ಪಿ ಗಾಂವಕರ, ವಿಘ್ನೇಶ್ವರ ನಾಯ್ಕ ಸತೀಶ ಗಣಪತಿ ನಾಯ್ಕಸ್ಥಳೀಯರಾದ ರಾಮಚಂದ್ರ, ನಾರಾಯಣ, ಸಚಿನ ನಾಯ್ಕ ಹಾಜರಿದ್ದರು.

ಅಂಕೋಲಾದ ಈ ಪ್ರದೇಶದಲ್ಲಿ ಪ್ರಥಮ ಬಾರಿಗೆ ಕಂಡುಬಂದಿದೆ. ವನ್ಯ ಜೀವಿ ಸಂರಕ್ಷಣಾ ಕಾಯ್ದೆ 1972 ಅನುಬಂಧ 1 ರಂತೆ ಈ ಪ್ರದೇಶವನ್ನು ಸಂರಕ್ಷಿತ ಪ್ರದೇಶವೆಂದು ಕಾವಲು ಕಾಯಲಾಗುವದು. 45 ರಿಂದ 60 ದಿನ ಭೂಮಿಯ ಕಾವಿನಿಂದ ಮರಿ ಹೊರಬರುತ್ತದೆ. ನಾಯಿ ಹಾವುಗಳು ಬರದಂತೆ ಪಂಜರವನ್ನು ನಿರ್ಮಿಸಿದ್ದು ಮರಿ ಹೊರಬಂದ 12 ತಾಸುಗಳಲ್ಲಿ ಸಮುದ್ರಕ್ಕೆ ಬಿಡಬೇಕು. ಕಾವಲು ಕಾಯಲು ಓರ್ವ ವಾಚಮನ್ ನೇಮಿಸಲಾಗಿದೆ. ಸ್ಥಳೀಯರ ನೆರವು ಕೂಡ ಅಗತ್ಯ. ಕಡಲಾಮೆಗಳ ಮೊಟ್ಟೆಗಳ ಮಾಹಿತಿ ನೀಡಿದವರಿಗೆ ಇಲಾಖೆ ವತಿಯಿಂದ 1000 ರೂ. ಪ್ರೋತ್ಸಾಹಧನ ನೀಡಲಾಗುತ್ತದೆ. -ಪ್ರಮೋದ ಬಿ. ಕೋಸ್ಟಲ್ ಮರೈನ್ ಕಾರವಾರದ ವಲಯ ಅರಣ್ಯಾಧಿಕಾರಿ 

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.