ಅಳಿಯನ ಜತೆ ಅತ್ತೆಯ ಅಕ್ರಮ ಸಂಬಂಧ: ಗಂಡನನ್ನೇ ಕೊಂದ ಪತ್ನಿ!
ಎಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಹೊರಬಿದ್ದಿರುವುದಾಗಿ ವರದಿ ತಿಳಿಸಿದೆ.
Team Udayavani, Oct 3, 2020, 6:34 PM IST
Representative Image
ಬಿಹಾರ/ಪಾಟ್ನಾ: ಅತ್ತೆ ಮತ್ತು ಅಳಿಯನ ಕಳ್ಳಾಟ ಪತಿಗೆ ತಿಳಿದ ನಂತರ ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗದಂತೆ ತಡೆಯಲು ಅಳಿಯನ ಜತೆ ಸೇರಿ ಪತಿಯನ್ನು ಕೊಲೆಗೈದ ಘಟನೆ ಬಿಹಾರದ ವೈಶಾಲಿಯಲ್ಲಿ ನಡೆದಿದೆ.
ತಿಲಕ್ ರಾಯ್ ಪತ್ನಿ ಸವಿತಾ ಜತೆ ಅಳಿಯ ಮೋಹನ್ ರಾಯ್ ಅನೈತಿಕ ಸಂಬಂಧ ಹೊಂದಿದ್ದ. ಇಬ್ಬರ ನಡುವಿನ ಕಳ್ಳಾಟ ತಿಳಿದ ನಂತರ ಅಳಿಯನಿಂದ ದೂರ ಇರುವಂತೆ ಪತಿ ಪತ್ನಿಗೆ ಎಚ್ಚರಿಕೆ ನೀಡಿದ್ದ. ಆದರೆ ಅತ್ತೆ ಮತ್ತು ಅಳಿಯ ಸೇರಿ ಪತಿಯನ್ನು ಕೊಲ್ಲುವ ಸಂಚು ರೂಪಿಸಿದ್ದರು ಎಂದು ವರದಿ ತಿಳಿಸಿದೆ.
ಮದ್ಯದ ಅಮಲಿನಲ್ಲಿದ್ದ ಪತಿಯನ್ನು ಅತ್ತೆ ಮತ್ತು ಅಳಿಯ ಸೇರಿ ಕೊಂದು ಹಾಕಿದ್ದು, ನಂತರ ನಿರ್ಮಾಣ ಹಂತದಲ್ಲಿದ್ದ ಮನೆಯಲ್ಲಿ ಶವವನ್ನು ನೇತು ಹಾಕಿದ್ದರು. ಗ್ರಾಮಸ್ಥರು ಬೆಳಗ್ಗೆ ಘಟನೆಯನ್ನು ನೋಡಿದ ನಂತರ ಬೆಳಕಿಗೆ ಬಂದಿರುವುದಾಗಿ ವರದಿ ವಿವರಿಸಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಮೊದಲು ಸವಿತಾ ಹಾಗೂ ಆಕೆಯ ಮಗನ ವಿಚಾರಣೆ ನಡೆಸಿದ್ದರು. ಆದರೆ ಈ ಸಂದರ್ಭದಲ್ಲಿ ಕುಡಿದು ಬಂದು ದಿನಾ ಗಲಾಟೆ ಮಾಡುತ್ತಿದ್ದರು. ನಂತರ ಸಿಟ್ಟಿನಿಂದ ಹೊರ ಹೋದವರು ನೇಣು ಹಾಕಿಕೊಂಡಿರಬಹುದು ಎಂದು ತಿಳಿಸಿದ್ದರು. ಆದರೆ ಶವದ ಮೇಲೆ ಗಾಯದ ಗುರುತು ಗಮನಿಸಿದ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಹೊರಬಿದ್ದಿರುವುದಾಗಿ ವರದಿ ತಿಳಿಸಿದೆ.
ತಾನು ಅಳಿಯನ ಜತೆ ಅಕ್ರಮ ಸಂಬಂಧ ಹೊಂದಿರುವುದು ಹೌದೆಂದು ಸವಿತಾ ತನಿಖೆ ವೇಳೆ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ