ನಿರ್ಲಕ್ಷ್ಯದಿಂದ ನೂತನ ವಿಮಾನ ಅಪಘಾತ ಪ್ರಕರಣ: ಹಿರಿಯ ಪೈಲಟ್ ಅಮಾನತು
ಅಖ್ತರ್ ಪೂರ್ವಾನುಮತಿ ಇಲ್ಲದೆ ಭೋಪಾಲ್ ನ ಕೇಂದ್ರ ಕಚೇರಿಯಿಂದ ಹೊರ ಹೋಗುವಂತಿಲ್ಲ
Team Udayavani, Nov 8, 2021, 3:38 PM IST
ನವದೆಹಲಿ:ಗ್ವಾಲಿಯರ್ ವಿಮಾನ ನಿಲ್ದಾಣದಲ್ಲಿ ನಿರ್ಲಕ್ಷ್ಯದಿಂದ ವಿಮಾನ ಅಪಘಾತಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸರ್ಕಾರ ಹಿರಿಯ ಪೈಲಟ್ ಮಜೀದ್ ಅಖ್ತರ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿರುವುದಾಗಿ ತಿಳಿಸಿದೆ.
ಇದನ್ನೂ ಓದಿ:ಬೆಳಗಾವಿ ಚಳಿಗಾಲ ಅಧಿವೇಶನ ಕಲಾಪ ನೇರಪ್ರಸಾರ: ಸಭಾಪತಿ ಬಸವರಾಜ ಹೊರಟ್ಟಿ
ಮಧ್ಯಪ್ರದೇಶದ ನಾಗರಿಕ ಯಾನ ಇಲಾಖೆಯ ಕಾರ್ಯದರ್ಶಿ ಎಂ.ಸೆಲ್ವೆಂದ್ರನ್ ಇತ್ತೀಚೆಗೆ ಹೊರಡಿಸಿರುವ ಅಮಾನತು ಆದೇಶದಲ್ಲಿ, ಕ್ಯಾಪ್ಟನ್ ಮಜೀದ್ ಅಖ್ತರ್ ಗಂಭೀರವಾದ ನಿರ್ಲಕ್ಷ್ಯದ ಪರಿಣಾಮ ವಿಮಾನ ಅಪಘಾತಕ್ಕೆ ಕಾರಣವಾಗಿದೆ. ಇದರಿಂದ ಸರ್ಕಾರಕ್ಕೆ ನಷ್ಟವಾಗಿರುವುದಾಗಿ ತಿಳಿಸಿದ್ದರು.
ಕಳೆದ ವರ್ಷ ಮಧ್ಯಪ್ರದೇಶ ಸರ್ಕಾರ ಅಮೆರಿಕದ ಟೆಕ್ಸ್ ಟ್ರಾನ್ ಏವಿಯೇಷನ್ ಕಂಪನಿಯಿಂದ ಏಳು ಆಸನಗಳ ಬೀಚ್ ಕ್ರಾಫ್ಟ್ ಕಿಂಗ್ ಏರ್ ಬಿ-200ಜಿಟಿ ವಿಟಿ ಎಂಪಿಕ್ಯೂ ಎಂಬ ವಿಮಾನವನ್ನು 65 ಕೋಟಿ ರೂಪಾಯಿಗೆ ಖರೀದಿಸಿತ್ತು.
ಅಖ್ತರ್ ಪೂರ್ವಾನುಮತಿ ಇಲ್ಲದೆ ಭೋಪಾಲ್ ನ ಕೇಂದ್ರ ಕಚೇರಿಯಿಂದ ಹೊರ ಹೋಗುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದು, ನಾಗರಿಕ ಸೇವೆಗಳ ಕಾಯ್ದೆಯಡಿ ಪೈಲಟ್ ಅನ್ನು ಅಮಾನತುಗೊಳಿಸಲಾಗಿದೆ ಎಂದು ವಿವರಿಸಿದೆ.
ನೂತನವಾಗಿ ಖರೀದಿಸಿದ ವಿಮಾನ ಸ್ಕಿಡ್ ಆಗಿ ಅಪಘಾತಕ್ಕೀಡಾದ ಪರಿಣಾಮ ಕಾಕ್ ಪಿಟ್ ಮುಂಭಾಗ ಹಾನಿಯಾಗಿತ್ತು. ಅಷ್ಟೇ ಅಲ್ಲ ಪ್ರೊಪೆಲ್ಲರ್ ಬ್ಲೇಡ್ಸ್ ಗಳು, ಚಕ್ರ ಜಖಂಗೊಂಡಿತ್ತು. ಘಟನೆಯಲ್ಲಿ ಪೈಲಟ್ ಅಖ್ತರ್, ಸಹ ಪೈಲಟ್ ಶಿವ್ ಜೈಸ್ವಾಲ್ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ