ಯಾರೋ ಒಂದಿರಿಬ್ಬರು ಬಿಟ್ಟರೆ, ಬೇರೆ ಯಾರು ಕೂಡ ಸಿಎಂ ವಿರುದ್ಧ ಮಾತಾಡ್ತಿಲ್ಲ: ರೇಣುಕಾಚಾರ್ಯ
Team Udayavani, Jun 17, 2021, 2:01 PM IST
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ. ಯಾರು ಬಿಎಸ್ ವೈ ವಿರುದ್ಧ ಮಾತಾಡಿದ್ದಾರೆ, ಅವರು ಶಿಸ್ತುಕ್ರಮಕ್ಕೆ ಆಗ್ರಹ ಮಾಡುತ್ತೇವೆ. ಯಾರೋ ಒಂದಿರಿಬ್ಬರು ಬೆರಳೆಣಿಕೆಯಷ್ಟು ಮಂದಿ ಬಿಟ್ಟರೆ ಬೇರೆ ಯಾರು ಕೂಡ ಸಿಎಂ ವಿರುದ್ಧ ಮಾತಾಡುತ್ತಿಲ್ಲ, ಸಚಿವ ಸ್ಥಾನ ಸಿಗಲಿಲ್ಲ ಎಂಬ ಹತಾಶೆಯಿಂದ ಅವರು ಹೀಗೆಲ್ಲ ಮಾತನಾಡುತ್ತಿದ್ದಾರೆ ಎಂದು ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಶ್ವನಾಥ್ ಹೇಳಿಕೆಗೆ ತಿರುಗೇಟು ನೀಡಿದರು. ಯಡಿಯೂರಪ್ಪ ನವರಿಗೆ ವಯಸ್ಸಾದರೂ ಹಗಲಿರುಳು ಕೆಲಸ ಮಾಡ್ತಿದ್ದಾರೆ. ವಿಶ್ವನಾಥ್ ಅವರೇ ನಿಮಗೆ ವಯಸ್ಸು ಎಷ್ಟು.? ಹಿಂದೆ ಸಿದ್ದರಾಮಯ್ಯ, ಎಸ್ ಎಂ ಕೃಷ್ಣ ವಿರುದ್ದ ಏನೆಲ್ಲಾ ಮಾತಾಡಿದಿರಿ, ಆಮೇಲೆ ಜೆಡಿಎಸ್ ನಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟ, ದೇವೇಗೌಡ, ಕುಮಾರಸ್ವಾಮಿ ಗೆ ಮೋಸ ಮಾಡಿದಿರಿ, ನಮ್ಮ ಪಕ್ಷಕ್ಕೆ ನೀವು ಬಂದಾಗ ಕೋರ್ಟ್ ನಲ್ಲಿ ನಿಮ್ಮ ವಿರುದ್ದ ಆದೇಶ ಇದ್ದರೂ ನಿಮ್ಮನ್ನು ಎಂಎಲ್ಸಿ ಮಾಡಿದರು ಎಂದರು.
ಇದನ್ನೂ ಓದಿ:ನಾಯಕತ್ವ ಬದಲಾವಣೆ ಬೇಡ ಆದರೆ ಸಂಪುಟ ಪುನಾರಚನೆ ಮಾಡಿ: ಅರುಣ್ ಸಿಂಗ್ ಗೆ ಕೆಲ ಶಾಸಕರ ಬೇಡಿಕೆ
ಶಾಸಕ ಯತ್ನಾಳ್ ತಿರುಕನ ಕನಸು ಕಾಣುತ್ತಿದ್ದಾರೆ. ನೀನು ಮೌನವಾಗಿರು, ನಿನ್ನನ್ನು ಹೋಮ್ ಮಿನಿಸ್ಟರ್ ಮಾಡುತ್ತೇನೆ ಎಂದು ಯತ್ನಾಳ್ ನನಗೆ ಆಫರ್ ಮಾಡಿದ್ದರು. ಇದು ಸತ್ಯ. ಯತ್ನಾಳ್ ಅವರ ತಿರುಕನ ಕನಸು ಯಾವುದೇ ಕಾರಣಕ್ಕೂ ನನಸಾಗದು ಎಂದು ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…