ಐಪಿಎಲ್ : ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವ ಬಿಟ್ಟುಕೊಟ್ಟ ಧೋನಿ
Team Udayavani, Mar 24, 2022, 3:13 PM IST
ಮುಂಬಯಿ : ಪ್ರಸಕ್ತ ಐಪಿಎಲ್ ಪಂದ್ಯಾವಳಿ ಆರಂಭಕ್ಕೂ 2 ದಿನಗಳ ಮುಂಚೆ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ಹಸ್ತಾಂತರಿಸಲು ನಿರ್ಧರಿಸಿ, ತಂಡವನ್ನು ಮುನ್ನಡೆಸಲು ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿದ್ದಾರೆ.
2012 ರಿಂದ ಚೆನ್ನೈ ಸೂಪರ್ ಕಿಂಗ್ಸ್ನ ಪ್ರಮುಖ ಆಟಗಾರರಾಗಿರುವ ಜಡೇಜಾ, ಸಿಎಸ್ಕೆಯನ್ನು ಮುನ್ನಡೆಸುತ್ತಿರುವ ಮೂರನೇ ಆಟಗಾರನಾಗಲಿದ್ದಾರೆ. ಧೋನಿ ಈ ಸರಣಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪ್ರತಿನಿಧಿಸುವುದನ್ನು ಮುಂದುವರಿಸುತ್ತಾರೆ.
ಕೂಲ್ ಕ್ಯಾಪ್ಟನ್ ಧೋನಿ ನಾಯಕತ್ವದಲ್ಲಿ 2010, 2011, 2018 ಮತ್ತು 2021ರಲ್ಲಿ ಸಿಎಸ್ಕೆ ನಾಲ್ಕು ಬಾರಿ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು.
ಈ ಬಾರಿ ಮಾ. 26 ರಂದು ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಸಿಎಸ್ಕೆ ಜಡೇಜಾ ನಾಯಕತ್ವದಲ್ಲಿ ಎದುರಿಸಲಿದೆ.