ಶವ ಹುಡುಕಲು ಹೋದವರು ಶಾರ್ಟ್ ಸರ್ಕ್ಯೂಟ್ಗೆ ಬಲಿ : ಕೃಷ್ಣಾ ನದಿಯಲ್ಲಿ ನಾಲ್ವರ ದುರ್ಮರಣ
Team Udayavani, Oct 7, 2021, 5:42 PM IST
ಮುದ್ದೇಬಿಹಾಳ : ಜಿಲ್ಲೆಯ ಕೃಷ್ಣಾ ನದಿಯಲ್ಲಿ ಈಜಲು ಹೋಗಿ, ನೀರು ಪಾಲಾದ ವ್ಯಕ್ತಿಯ ಶವ ಹುಡುಕಲು ಹೋಗಿದ್ದ ಮೂವರು ವಿದ್ಯುತ್ ಶಾರ್ಟ್ ಸಕ್ಯೂರ್ಟ್ಗೆ ಬಲಿಯಾಗಿ, ಒಟ್ಟು ನಾಲ್ವರು ಮೃತಪಟ್ಟ ಧಾರುಣ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರ ಹತ್ತಿರದ ಕೃಷ್ಣಾ ನದಿಯಲ್ಲಿ ಗುರುವಾರ ಸಂಜೆ ಸಂಭವಿಸಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹರನಾಳದ ಶಿವಪ್ಪ ಸಿದ್ದಪ್ಪ ಅಬಳೂರ (78) ಎಂಬಾತ ಕೃಷ್ಣಾ ನದಿಯಲ್ಲಿ ಈಜಲು ಹೋದಾಗ ಮೃತಪಟ್ಟಿದ್ದರು. ಈ ವೃದ್ಧನ ಮೃತ ದೇಹ ಹುಡುಕಲು ಹೋದ ಮೊಮ್ಮಗ ಶರಣಗೌಡ ಭೀಮನಗೌಡ ಪಾಟೀಲ (45), ಮೃತ ವ್ಯಕ್ತಿಯ ಸಹೋದರನ ಪುತ್ರ ಯಮನಪ್ಪ ಅಬಳೂರ (35) ಹಾಗೂ ಬೋಟ್ ಚಾಲಕ, ಕೂಡಲಸಂಗಮದ ಪರಸಪ್ಪ ಚನ್ನಪ್ಪ ತಳವಾರ (30) ಎಂಬುವವರು ವಿದ್ಯುತ್ ಶಾರ್ಟ್ ಸರ್ಕ್ಯೂಟ್ಗೆ ಬಲಿಯಾಗಿದ್ದಾರೆ.
ಹರನಾಳದ ಶಿವಪ್ಪ ಅಬಳೂರ ಅವರು ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದರು. ಆಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಅವರ ಶವ ಶೋಧಕ್ಕಾಗಿ ಬೋಟ್ನಲ್ಲಿ ಶರಣಪ್ಪ, ಯಮನಪ್ಪ ಮತ್ತು ಪರಸಪ್ಪ ಅವರು ತೆರಳಿದ್ದರು. ಈ ವೇಳೆ ನಾರಾಯಣಪುರ ಹಿನ್ನೀರ ವ್ಯಾಪ್ತಿಯ ಮುಳುಗಡೆ ಪ್ರದೇಶದಲ್ಲಿ ವಿದ್ಯುತ್ ಕಂಬಗಳಿವೆ. ಅದರಲ್ಲಿ ವಿದ್ಯುತ್ ಸಂಚಾರವಿದ್ದು, ತಂತಿಯ ಸಮ ಪ್ರಮಾಣದಲ್ಲಿ ಹಿನ್ನೀರು ಇದೆ. ಈ ವೇಳೆ ಬೋಟ್ನಲ್ಲಿದ್ದ ಮೂವರು, ಶವ ಶೋಧ ನಡೆಸುವ ಆತಂಕದಲ್ಲಿ ವಿದ್ಯುತ್ ಕಂಬ ಗಮನಿಸದೇ ವಿದ್ಯುತ್ ಕಂಬದ ಬಳಿ ಹೋಗಿದ್ದಾರೆ. ಈ ವೇಳೆ ವಿದ್ಯುತ್ ತಗುಲಿ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೆ, ಗುರುವಾರ ಸಂಜೆಯ ವರೆಗೂ ಈ ಮೂವರ ಶವ ಹುಡುಕಾಟ ಮುಂದುವರೆದಿದೆ.
ಸದ್ಯಕ್ಕೆ ಮುದ್ದೇಬಿಹಾಳ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಹುನಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಸಿಪಿಐ ಆನಂದ ವಾಘಮೋಡೆ, ಪಿಎಸೈ ರೇಣುಕಾ ಜಕನೂರ, ತಂಗಡಗಿ ಗ್ರಾಪಂ ಪಿಡಿಓ ಉಮೇಶ ರಾಠೋಡ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ