ಮುದ್ದೇಬಿಹಾಳ: ಯೂನಿಯನ್ ಬ್ಯಾಂಕ್ ಎಟಿಎಂ ದರೋಡೆ ಪ್ರಕರಣ ಭೇದಿಸಿದ ಪೊಲೀಸರು


Team Udayavani, Nov 27, 2021, 11:27 AM IST

7ATM

ಮುದ್ದೇಬಿಹಾಳ: ಪಟ್ಟಣದ ಹುಡ್ಕೋದ ಪಲ್ಲವಿ ಕಾಂಪ್ಲೆಕ್ಸ್ ನಲ್ಲಿರುವ ಯೂನಿಯನ್ ಬ್ಯಾಂಕ್ (ಹಿಂದಿನ ಕಾರ್ಪೋರೇಷನ್ ಬ್ಯಾಂಕ್) ಎಟಿಎಂ ದರೋಡೆ ಪ್ರಕರಣವನ್ನು ಮುದ್ದೇಬಿಹಾಳ ಪೊಲೀಸರು ಕೇವಲ ನಾಲ್ಕೇ ದಿನದಲ್ಲಿ ಭೇದಿಸಿ ಒಟ್ಟು 7 ಆರೋಪಿಗಳನ್ನು ಬಂಧಿಸಿದ್ದಾರೆ.

ದರೋಡೆಗೆ ಒಳಗಾದ 16 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡು ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಎಟಿಎಂ ದರೋಡೆ ಆಗಿರುವ ಘಟನೆ ನ.21 ರಂದು ಸಂಜೆ ಬೆಳಕಿಗೆ ಬಂದಿತ್ತು. ಎಟಿಎಂ ಇದ್ದ ಕೊಠಡಿಯ ಶಟರ್ಸ್‍ನ ಬಾಗಿಲ ಬೀಗ ಮುರಿದದ್ದು ಹೊರತು ಪಡಿಸಿದರೆ ಬೇರೆ ಯಾವುದೇ ಸುಳಿವು ಇರಲಿಲ್ಲ. ಎಟಿಎಂ ಯಂತ್ರಕ್ಕೆ ಧಕ್ಕೆಯೂ ಆಗಿರಲಿಲ್ಲ. ಆದರೆ ಅದರೊಳಗಿದ್ದ ಹಣ ಮಾತ್ರ ಮಾಯವಾಗಿತ್ತು. ಪ್ರಾರಂಭದಲ್ಲಿ ಈ ಪ್ರಕರಣ ಪೊಲೀಸರಿಗೆ ಸವಾಲೆನ್ನಿಸಿಕೊಂಡಿತ್ತು. ದರೋಡೆ ಹಿಂದೆ ಬ್ಯಾಂಕ್ ಸಿಬ್ಬಂದಿ ಕೈವಾಡ ಇರಬಹುದೆ ಎನ್ನುವ ಜಾಡಿನಲ್ಲಿ ತನಿಖೆ ನಡೆಸಿದಾಗ ಪ್ರಕರಣದ ಎಳೆ ಸಿಕ್ಕು ಅದನ್ನು ಹಿಂಬಾಲಿಸಿದಾಗ ಇಡೀ ಪ್ರಕರಣ ಬಯಲಿಗೆ ಬಂದಿದೆ.

ಇದೇ ಬ್ಯಾಂಕಿನಲ್ಲಿ ಹಿಂದೆ ಅಕೌಂಟಂಟ್ ಆಗಿದ್ದು ಈಗ ಬೇರೆ ಶಾಖೆಗೆ ವರ್ಗಾವಣೆಗೊಂಡಿರುವ ಮಹಿಳಾ ಸಿಬ್ಬಂದಿಯ ಪ್ರಿಯಕರ ಎ- 1 ಆರೋಪಿ ಎನ್ನುವುದು ಗೊತ್ತಾದ ಕೂಡಲೇ ಕಾರ್ಯಾಚರಣೆಗಿಳಿದ ಪೊಲೀಸರು ಆಕೆಯೂ ಸೇರಿ ಒಟ್ಟು ಏಳು ಆರೋಪಿಗಳನ್ನು ಬಲೆಗೆ ಕೆಡವಿದರು. ಎ-1 ಆರೋಪಿ ತನ್ನ ಪ್ರೇಯಸಿಯ ಮೋಬೈಲನಿಂದ ಕದ್ದಿದ್ದ ಎಟಿಎಂ ಸಿಕ್ರೇಟ್ ಕೋಡ್ ಬಳಸಿ, ಮೂವರು ಸ್ಥಳೀಯ ಗೊಲ್ಲರ ಯುವಕರು, ಓರ್ವ ಕಾರು ಚಾಲಕ, ಬ್ಯಾಂಕಿನ ಕಾವಲುಗಾರ ಹಾಗೂ ಇವರಿಗೆ ಸಹಕರಿಸಿದ ಒಟ್ಟು ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ಶನಿವಾರ ಮದ್ಯಾಹ್ನದ ನಂತರ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಟರ ಕಚೇರಿಗೆ ತೆರಳಿ ಆರೋಪಿಗಳ ಹೆಸರು ಬಹಿರಂಗಪಡಿಸಲು ಸಿದ್ದತೆ ನಡೆಸಿದ್ದಾರೆ. ಬಸವನ ಬಾಗೇವಾಡಿ ಡಿಎಸ್ಪಿ ಅರುಣಕುಮಾರ ಕೋಳೂರ, ಮುದ್ದೇಬಿಹಾಳ ಸಿಪಿಐ ಆನಂದ ವಾಘ್ಮೋಡೆ, ಮಹಿಳಾ ಪಿಎಸೈ ರೇಣುಕಾ ಜಕನೂರ, ಪ್ರೊಬೇಷನರಿ ಪಿಎಸೈ ದೀಪಾ ಮತ್ತು ಸ್ಥಳೀಯ ಠಾಣೆಯ ಕ್ರೈಂ ಮತ್ತು ಸಿವಿಲ್ ಪೊಲೀಸ್ ಸಿಬ್ಬಂದಿಯ ಕಾರ್ಯತತ್ಪರತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.