ಮೂಡಿಗೆರೆ: ಮಹಿಳೆ ಸಾವಿನ ಸ್ಥಳದಲ್ಲಿ ಮತ್ತೆ ಘೀಳಿಡುತ್ತಿರುವ ಆನೆಗಳು

ಹಲವರ ಬಂಧನ; ಗ್ರಾಮ ತೊರೆದ ಬಹುತೇಕ ಪುರುಷ ಮಹಿಳೆಯರು....

Team Udayavani, Nov 23, 2022, 3:36 PM IST

aane 2

ಮೂಡಿಗೆರೆ: ಅನೆಯಿಂದ ಹತ್ಯೆ ನಡೆದ ಸ್ಥಳದಲ್ಲೆ ನಿನ್ನೆ ರಾತ್ರಿಯಿಂದ ಬುಧವಾರ ಬೆಳಗ್ಗೆ ಎಂಟು ಗಂಟೆವರೆಗೆ ಉನ್ಮಾದದಿಂದ ಮೂರು ಅನೆಗಳು ಬೀಡುಬಿಟ್ಟು ಘೀಳಿಟ್ಟು ಬೆಳೆ ನಾಶ ಮಾಡುತ್ತಿದ್ದರೂ ಓಡಿಸುವ ಬದಲು ಅರಣ್ಯ ಮತ್ತು ಪೊಲೀಸ್ ಇಲಾಖೆ ಮಹಿಳೆಯರು, ಪುರುಷರು ಎನ್ನದೆ ಎಲ್ಲರನ್ನು ಬಂಧಿಸುವತ್ತ, ಭಯ ಸೃಷ್ಟಿಸುವತ್ತ ಗಮನ ಹರಿಸಿರುವುದು ವ್ಯವಸ್ಥೆ ವಿರುದ್ದ ಅಕ್ರೋಶಕ್ಕೆ ಕಾರಣವಾಗಿದೆ.

ಭಾನುವಾರ ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ಶೋಭಾ ಎಂಬ ರೈತ ಮಹಿಳೆಯನ್ನು ಆಕಳುಗಳಿಗೆ ಮೇವು ಕೊಯ್ಯುವ ಸಂದರ್ಭದಲ್ಲಿ ನರಹಂತಕ ಆನೆ ಹತ್ಯೆ ಮಾಡಿತ್ತು. ಅಲ್ಲೆ ಎರೆಡು ಕಿಮಿ ಅಂತರದ ಹಾರ್ಗೋಡಿನಲ್ಲಿ ಅನಂದ್ ದೇವಾಡಿಗ ಎಂಬುವವರನ್ನು ಹಿಂದೆ ಹತ್ಯೆ ಮಾಡಿತ್ತು. ಅಂದು ಅರಣ್ಯ ಇಲಾಖೆ ನೀಡಿದ ಅಶ್ವಾಸನೆ ಒಂದೂ ನೆರವೇರದ ಕಾರಣ ಮೋನ್ನೆ ಶೋಭಾರವರ ಸಾವಿನ ವೇಳೆ ಜನರ ಅಕ್ರೋಶ ಕಟ್ಟೆ ಒಡೆಯಲು ಕಾರಣವಾಗಿತ್ತು.

ನಂತರ ನಡೆದ ಪ್ರತಿಭಟನೆಗಳಲ್ಲಿ ಕೆಲವರು ಅತಿರೇಕದ ವರ್ತನೆ ತೋರಿದ್ದರು. ಈ ವೇಳೆ ಶಾಸಕರ ಮೇಲೆ ಹಲ್ಲೆ  ಘಟನೆ ನಡೆದಿದ್ದು, ಇದನ್ನು ಗ್ರಾಮಸ್ಥರು ಒಕ್ಕೊರಲಿನಿಂದ ಖಂಡಿಸಿದ್ದು.ಕೆಲವರು ಕ್ಷಮೆ ಕೂಡ ಕೇಳಿದ್ದರು. ಅರಣ್ಯ ಇಲಾಖೆ ಹಾಗೂ ಪೊಲೀಸರ ಮೇಲೆ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು.

ಸಂಜೆ ನಂತರ ಮೂಡಿಗೆರೆ, ಪೊಲೀಸರು ಮತ್ತು ಅರಣ್ಯ ಇಲಾಖೆ ಶವವನ್ನು ಪೋಸ್ಟ್ ಮಾರ್ಟಮ್ ಗೆ ಕಳುಹಿಸಿದ ನಂತರ ಸ್ಥಳೀಯರನ್ನು ಬಂಧಿಸುವ ಕೆಲಸಕ್ಕೆ ಇಳಿದಿದ್ದರು. ಅದರಂತೆ ಅಂದೆ ರಾತ್ರಿ ಸುಮಾರು ಎಂಟು ಜನರನ್ನು ಬಂಧಿಸಲಾಗಿತ್ತು. ಬಂಧನ ಸುದ್ದಿ ತಿಳಿದ ಸುತ್ತಮುತ್ತಲ ಗ್ರಾಮದ ಬಹುತೇಕ ಪುರುಷರು ಹಾಗೂ ಮಹಿಳೆಯರು ಗ್ರಾಮ ತೊರೆದಿದ್ದರು.

ಯಾರನ್ನೂ ಬಂಧಿಸುವುದಿಲ್ಲ ಎಂಬ ಜನಪ್ರತಿನಿಧಿಗಳ ಆಶ್ವಾಸನೆಯ ಮೇರೆಗೆ ಕೆಲವರು ಗ್ರಾಮದಲ್ಲೇ ಉಳಿದಿದ್ದರು. ಆದರೆ ಮಂಗಳವಾರ ರಾತ್ರಿ ಸುಮಾರು 3 ಪೋಲಿಸ್ ರಿಸರ್ವ್ ವ್ಯಾನ್ ಗಳೊಂದಿಗೆ ಗ್ ಇಲ್ಲಿನ ಹುಲ್ಲೆಮನೆ, ಬೈರಿಗದ್ದೆ. ತಳವಾರ. ಕುಂಡ್ರ, ಕಣಗದ್ದೆ ಸೇರಿದಂತೆ ನಾಲ್ಕಾರು ಗ್ರಾಮಗಳಲ್ಲಿ ಅನೇಕರನ್ನು ಬಂಧಿಸಿದ್ದಾರೆ.ಇಡೀ ಗ್ರಾಮವೇ ದಿಗ್ಬ್ರಾಂತವಾಗಿದ್ದು ಬಹುತೇಕರು ಉರನ್ನು ತೊರೆಯುತ್ತಿದ್ದಾರೆ.

ಗ್ರಾಮದಲ್ಲಿ ಸ್ಮಶಾನ ಮೌನ ಅವರಿಸಿದೆ. ಅನೆಗಳು ನಗರದಲ್ಲಿಯು ಸಾವು ಉಂಟು ಮಾಡುವ ದಿನ ದೂರವಿಲ್ಲ ಎಂದು ರಾಜಕಾರಣಿಗಳಿಗೆ, ಅಧಿಕಾರಗಳಿಗೆ ಹಾಗು ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಇಂದು ಬುಧವಾರ ಬೆಳಗ್ಗೆ ಎಂಟು ಗಂಟೆವರೆಗೆ ಆನೆಗಳು ಸ್ಥಳದಲ್ಲೇ ಗಿಳಿಟ್ಟು ಜನರನ್ನು ಭಯಭೀತಿ ಗೊಳಿಸುತ್ತಿದ್ದರು. ಅವುಗಳನ್ನು ಸ್ಥಳದಿಂದ ಓಡಿಸುವ ಬದಲು ಅರಣ್ಯ ಮತ್ತು ಪೊಲೀಸ್ ಇಲಾಖೆ ತನ್ನ ಸಂಪೂರ್ಣ ಬಲ ಬೆಳೆಸಿ ಬಂಧನದಲ್ಲಿ ತೊಡಗಿದ್ದು. ಗ್ರಾಮಸ್ಥರನ್ನು ಭಯಭೀತಿ ಉಂಟುಮಾಡಿದ್ದು ವ್ಯವಸ್ಥೆ ವಿರುದ್ದ ಇಡೀ ಸುತ್ತಮುತ್ತಲಿನ ಗ್ರಾಮಗಳ ಆಕ್ರೋಶಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.