ಮೂಡಿಗೆರೆ : ಪೊಲೀಸರೆದುರೇ ಕೈ-ಕೈ ಮಿಲಾಯಿಸಿದ ಬಿಜೆಪಿಯ ಎರಡು ಬಣ
Team Udayavani, Mar 27, 2023, 4:38 PM IST
ಚಿಕ್ಕಮಗಳೂರು : ಭಿನ್ನಮತ ಭುಗಿಲೆದ್ದಿರುವ ಮೂಡಿಗೆರೆಯಲ್ಲಿ ಬಿಜೆಪಿಯ ಗುಂಪಿನ ಮಧ್ಯೆ ಗಲಾಟೆ ನಡೆದಿರುವ ಘಟನೆ ಸೋಮವಾರ ನಡೆದಿದೆ.
ಪೊಲೀಸ್ ಸ್ಟೇಷನ್ ಮುಂದೆ, ಪೊಲೀಸರೆದುರೇ ಶಾಸಕ ಎಂಪಿ. ಕುಮಾರಸ್ವಾಮಿ ಮತ್ತು ಎಂ.ಎಲ್.ಸಿ. ಪ್ರಾಣೇಶ್ ಬೆಂಬಲಿಗರು ಕೈ-ಕೈ ಮಿಲಾಯಿಸಿದ್ದಾರೆ.
ಸ್ಟೇಷನ್ ಎದುರಿನ ಆಟೋ ನಿಲ್ದಾಣದ ವಿಚಾರದಲ್ಲಿ ಗಲಾಟೆ ನಡೆದಿದ್ದು, ಹಲವು ದಿನಗಳಿಂದ ಇದ್ದ ಅಸಮಾಧಾನ ಸ್ಫೋಟಗೊಂಡಿದೆ. ಆಟೋ ನಿಲ್ದಾಣದ ಬಳಿ ನೆರಳಿಗಾಗಿ ಎಂ.ಎಲ್.ಸಿ. ಫಂಡ್ ನಲ್ಲಿ ಶೆಡ್ ನಿರ್ಮಾಣಮಾಡಲಾಗಿದ್ದು, ಶೆಡ್ ತೆರವಿಗೆ ಪಟ್ಣಣ ಪಂಚಾಯತ್ ಮುಂದಾಗಿದ್ದು, ಈ ವೇಳೆ ಇಬ್ಬರು ನಾಯಕರ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದೆ.
ಮೂಡಿಗೆರೆ ಬಿಜೆಪಿ ಟಿಕೆಟ್ ವಿಚಾರಕ್ಕೆ ಭಾರಿ ಭಿನ್ನಮತ ಭುಗಿಲೆದ್ದಿದ್ದು, ಈ ಗಲಾಟೆಗೂ ಅದಕ್ಕೂ ಸಂಬಂಧದ ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ
HD Devegowda: ರಾಮೇಶ್ವರ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ
ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್.ಡಿ.ತಮ್ಮಯ್ಯ