ಮುರ್ಡೇಶ್ವರ: ಅದ್ದೂರಿಯಾಗಿ ನಡೆದ ನೂತನ ಬ್ರಹ್ಮರಥದ ಪುರಪ್ರವೇಶ


Team Udayavani, Jan 6, 2022, 6:24 PM IST

1-mu-1

ಭಟ್ಕಳ: ಮುರ್ಡೇಶ್ವರ ದೇವರ ರಥೋತ್ಸವಕ್ಕೆ ಈ ಬಾರಿ ನೂತನ ಬ್ರಹ್ಮರಥವನ್ನು ಡಾ. ಆರ್. ಎನ್. ಶೆಟ್ಟಿಯವರ ಕುಟುಂಬಿಕರು ಕಟ್ಟಿಸಿದ್ದು ರಥದ ಪುರಪ್ರವೇಶ ಕಾರ್ಯಕ್ರಮ ಗುರುವಾರ ಸಂಜೆ ಅತ್ಯಂತ ಅದ್ದೂರಿಯಾಗಿ ನಡೆಯಿತು.

ರಥವು ಕೋಟೇಶ್ವರದಿಂದ ಆಗಮಿಸುತ್ತಿದ್ದಂತೆಯೇ ಮುರ್ಡೇಶ್ವರ ಮಹಾದ್ವಾರದಲ್ಲಿ ಸ್ವಾಗತಿಸಿ ಮಹತ್ಹೋಭಾರ ಶ್ರೀ ಮುರುಡೇಶ್ವರನ ಭಾವಚಿತ್ರವನ್ನು ಇರಿಸಿ ಆರತಿ ಬೆಳಗಿದ ಸುನಿಲ್ ಶೆಟ್ಟಿಯವರು ರಥವನ್ನು ಬರಮಾಡಿಕೊಂಡರು. ಧಾರ್ಮಿಕ ವಿಧಿ ವಿದಾನಗಳನ್ನು ದೇವಸ್ಥಾನದ ಮುಖ್ಯ ಅರ್ಚಕರಾದ ಜಯರಾಮ ಅಡಿಗಳ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅರ್ಚಕ ಶಿವರಾಮ ಅಡಿಗಳ್ ಮುಂತಾದವರು ಉಪಸ್ಥಿತರಿದ್ದರು.

ಬ್ರಹ್ಮರಥವನ್ನು ಮುರ್ಡೇಶ್ವರದ ರಾಷ್ಟ್ರೀಯ ಹೆದ್ದಾರಿಯಿಂದ ಊರ ನಾಗರಿಕರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಅದ್ದೂರಿಯಾಗಿ ಬರಮಾಡಿಕೊಂಡಿದ್ದು, ಜನರ ಉತ್ಸಾಹ, ಬ್ರಹ್ಮರಥವನ್ನು ಸ್ವಾಗತಿಸುವ ತವಕ ಶ್ರೀ ದೇವರಲ್ಲಿ ಭಕ್ತರು ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿತ್ತು.

ರಥವನ್ನು ಸ್ವಾಗತಿಸುವ ದಾರಿಯಲ್ಲಿ ಮೊದಲು ಮಹಿಳೆಯರಿಂದ ಪೂರ್ಣಕುಂಭ, ಮಹಿಳೆಯರ ಭಜನಾ ತಂಡ, ನಂತರ ವಿವಿಧ ವಾಧ್ಯಗಳು, ನಗಾರಿ, ವೇಷಭೂಷಣ, ಮಹಿಳೆಯರ ಚಂಡೆವಾದನ, ವಿವಿದ ಕಲಾ ತಂಡಗಳಿಂದ ವೈವಿದ್ಯಮಯ ನೃತ್ಯ ಸೇರಿದಂತೆ ಅದ್ದೂರಿಯಾಗಿ ಜಾತ್ರೆಯ ಮಾದರಿಯಲ್ಲಿ ನಡೆದಿದ್ದು ಭಾರೀ ಮೆಚ್ಚುಗೆಗೆ ಪಾತ್ರವಾಯಿತು. ಎಲ್ಲಾ ಕಡೆಗಳಿಂದಲೂ ಭಕ್ತರು ಆಗಮಿಸಿದ್ದರು. ಅತ್ಯಂತ ಶಾಂತವಾಗಿ ನಡೆದ ಮೆರವಣಿಗೆಯಲ್ಲಿ ಎಲ್ಲ ನಿಯಮಗಳನ್ನು ಪಾಲಿಸಲಾಗಿದ್ದು ಶಿಸ್ತುಬದ್ಧ ಕಾರ್ಯಕ್ರಮಕ್ಕೆ ಇದು ಸಾಕ್ಷಿಯಾಯಿತು.

ಬ್ರಹ್ಮರಥವನ್ನು ಹತ್ತ ಲಾರಿಯು ಮಹಾದ್ವಾರವನ್ನು ಪ್ರವೇಶಿಸುತ್ತಲೇ ಭಕ್ತರ ಹರ ಹರ ಮಹಾದೇವ ಘೋಷಣೆ ಮುಗಿಲು ಮುಟ್ಟಿತ್ತು. ನಂತರ ಓಲಗ ಮಂಟಪದ ತನಕವೂ ಕೂಡಾ ರಥವನ್ನು ಹೊತ್ತ ವಾಹನ ನಿಧಾನವಾಗಿ ಸಾಗಿದ್ದು, ಸ್ವಾಗತ ಪೂಜೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ಉತ್ತರ ಕನ್ನಡ ಜಿಲ್ಲೆಯ ಪಂಚ ಕ್ಷೇತ್ರಗಳಲ್ಲಿ ಒಂದಾದ ಮುರ್ಡೆಶ್ವರ ದೇವರ ರಥವು ಅತ್ಯಂತ ಹಳೆಯದಾಗಿದ್ದು ಸುಮಾರು ೪೦೦ ವರ್ಷಗಳಷ್ಟು ಹಿಂದಿನದು ಎನ್ನಲಾಗಿದೆ. ಈ ಹಿಂದೆ ರಥೋತ್ಸವದ ವೇಳೆಯಲ್ಲಿ ಡಾ. ಆರ್. ಎನ್. ಶೆಟ್ಟಿಯವರು ನೂತನ ರಥದ ನಿರ್ಮಾಣಕ್ಕೆ ಸಂಕಲ್ಪ ಮಾಡಿಕೊಂಡಿದ್ದು ಅದನ್ನು ಅವರ ಪುತ್ರ ಸುನಿಲ್ ಶೆಟ್ಟಿ ಹಾಗೂ ಕುಟುಂಬಿಕರು ಈಡೇರಿಸಿದ್ದಾರೆ.

ನೂತನ ಬ್ರಹ್ಮರಥವನ್ನು ಕೋಟೇಶ್ವರದ ರಥ ಶಿಲ್ಪಿ ಜಕಣಾಚಾರಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ರಾಜಗೋಪಾಲ ಆಚಾರ್ಯ ಇವರು ಶಾಸ್ತ್ರ ಸಮ್ಮತವಾಗಿ ನಿರ್ಮಾಣ ಮಾಡಿದ್ದು ಬಹಳ ಸುಂದರವಾಗಿ ಕೆತ್ತನೆ ಮೂಡಿ ಬಂದಿದೆ. ರಥಕ್ಕೆ ಜಿಲ್ಲೆಯ ಧಾರ್ಮಿಕ ಹಿನ್ನೆಲೆಯನ್ನು ಶಿಲ್ಪವಾಗಿ ಬಳಸಿದ್ದು ವಿಶೇಷವಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.