ಉದ್ಯಮಿಗಳ ಮನೆ ಬಾಗಿಲಿಗೆ ಸರ್ಕಾರ, ಜನಸ್ನೇಹಿ ಇಲಾಖೆಗೆ ಮೊದಲ ಆದ್ಯತೆ : ಸಚಿವ ನಿರಾಣಿ ಘೋಷಣೆ
Team Udayavani, Feb 18, 2021, 7:34 PM IST
ಬೆಂಗಳೂರು : ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಿಗಳ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ‘ ಮನೆಬಾಗಿಲಿಗೆ’ ರಾಜ್ಯ ಸರ್ಕಾರ ಹೋಗುವ ವಿನೂತನ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಅವರು ಹೇಳಿದ್ದಾರೆ.
ಗುರುವಾರ ವಿಕಾಸಸೌಧದಲ್ಲಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ಸ್ ನಿಯೋಗ ಭೇಟಿ ಮಾಡಿ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ನಿರಾಣಿ ಅವರು, ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ಅಗತ್ಯ ನೆರವು ನೀಡಲಿದ್ದೇವೆ. ‘ಉದ್ಯಮಸ್ನೇಹಿ’ ಮಾಡುವುದು ತಮ್ಮ ಮುಂದಿರುವ ಮೊದಲ ಸವಾಲು ಎಂದು ಹೇಳಿದ್ದಾರೆ.
ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಬದ್ಧನಾಗಿದ್ದೇನೆ. ಮರಳು, ಕಲ್ಲು ಕ್ವಾರಿ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ:ಉಡುಪಿ, ದ.ಕ ಪಡಿತರದಾರರಿಗೆ ಸ್ಥಳೀಯ ಕುಚ್ಚಲಕ್ಕಿಯನ್ನು ವಿತರಿಸಲು ಸಿಎಂ ಗೆ ಸಚಿವರ ಮನವಿ
2021- 2026ನೇ ಸಾಲಿನ ಹೊಸ ಮರಳು ನೀತಿ ಜಾರಿಗೆ ಬರಲಿದೆ. ಇದರಲ್ಲಿ ಅನೇಕ ಹೊಸ ಹೊಸ ಸುಧಾರಣೆಗಳನ್ನು ಜಾರಿಗೆ ಮಾಡುತ್ತಿದ್ದೇವೆ. ಕಟ್ಟಕಡೆಯ ಮನುಷ್ಯನಿಗೂ ಸುಲಭವಾಗಿ ಮರಳು ಸಿಗಬೇಕು ಎಂಬುವುದೇ ನಮ್ಮ ಮುಖ್ಯ ಉದ್ದೇಶ ಎಂದು ಹೇಳಿದರು.
ಬಜೆಟ್ನಲ್ಲಿ ಕ್ವಾರಿ ಮತ್ತು ಸ್ಟೋರ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್ ಮುಂದಿಟ್ಟಿರುವ ಬೇಡಿಕೆಗಳನ್ನು ಸೇರ್ಪಡೆ ಮಾಡಲಾಗುವುದು. ಯಾವುದೇ ಆತಂಕಪಡಬೇಕಾಗಿಲ್ಲ ಎಂದು ಅಭಯ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ