ಜಾರಕಿಹೊಳಿ ಶೀಘ್ರ ಆರೋಪ ಮುಕ್ತ : ಮುರುಗೇಶ ನಿರಾಣಿ
ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ ನಿರಾಣಿ
Team Udayavani, Mar 12, 2021, 5:56 PM IST
ಧಾರವಾಡ : ರಮೇಶ್ ಜಾರಕಿಹೊಳಿ ಕುರಿತ ರಾಸಲೀಲೆ ವಿಡಿಯೋ ನಕಲಿ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ತನಿಖೆಗೂ ಸಹ ಸರ್ಕಾರ ಸೂಚಿಸಿದೆ. ಆದಷ್ಟು ಬೇಗ ರಮೇಶ್ ಆರೋಪ ಮುಕ್ತರಾಗಿ ಹೊರ ಬರುತ್ತಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ ನಿರಾಣಿ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆಗೆ ತನ್ನದೇ ಆದ ರೀತಿ, ನಿಯಮಗಳಿರುತ್ತವೆ ಆ ಪ್ರಕಾರ ತನಿಖೆ ನಡೆಸುತ್ತದೆ. ರಮೇಶ್ ಅವರು ಆರೋಪ ಮುಕ್ತರಾಗಿ ಹೊರ ಬಂದರೆ ಅವರಿಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ ಎಂಬುದು ಸಿಎಂ ಅವರಿಗೆ ಬಿಟ್ಟ ವಿಚಾರ ಎಂದರು.
ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ನಿರಾಣಿ, ಈ ಸಮಾಜಕ್ಕೆ 2ಎ ಮೀಸಲಾತಿ ಸಿಗಬೇಕು ಎಂಬುದು ನನ್ನ ಅಭಿಪ್ರಾಯವೂ ಹೌದು. ಈ ಬಗ್ಗೆ ಹಿಂದುಳಿದ ಆಯೋಗ ಸ್ಪಷ್ಟವಾಗಿ ಅಧ್ಯಯನ ನಡೆಸಿ ವರದಿ ನೀಡಲು ಈಗಾಗಲೇ ಸರ್ಕಾರ ಸೂಚನೆ ನೀಡಿದೆ. ಇದು ಆದಷ್ಟು ಬೇಗ ಆಗಲಿದೆ. ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಹಾಗೆ ಹೆಲಿಕಾಪ್ಟರ್ ನಲ್ಲಿ ಅಡ್ಡಾಡುವವರು ನಮ್ಮಲ್ಲಿಲ್ಲ.
ಎಲ್ಲಾ ಸಮುದಾಯಗಳಿಗೆ ಸೌಲಭ್ಯಗಳು ಸಿಗಲಿ ಎಂಬುದು ನಮ್ಮ ಉದ್ದೇಶ. ಪಂಚಮಸಾಲಿ ಸಮಾಜದಲ್ಲಿ 80 ಲಕ್ಷ ಜನರಿದ್ದು ಅವರೆಲ್ಲರೂ ನಾಯಕರೇ ಆಗಿದ್ದಾರೆ. ಇಲ್ಲಿ ಯಾರೂ ನಾಯಕರಾಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್