ಮುಸ್ಕಾನ್ಳನ್ನು ತನಿಖೆಗೆ ಒಳಪಡಿಸಬೇಕು: ಅನಂತ್ ಕುಮಾರ್ ಹೆಗಡೆ ಪತ್ರದಲ್ಲೇನಿದೆ?
Team Udayavani, Apr 11, 2022, 3:16 PM IST
ಶಿರಸಿ: ‘ಅಲ್ಲಾ ಹೂ ಅಕ್ಬರ್ ಎಂದು ಕೂಗಿದ್ದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಳನ್ನು ತನಿಖೆಗೆ ಒಳಪಡಿಸಬೇಕು’ ಎಂದು ಮಾಜಿ ಕೇಂದ್ರ ಸಚಿವ, ಸಂಸದ ಅನಂತಕುಮಾರ ಹೆಗಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.
ಈ ಘಟನೆ ಹಿಂದೆ ಕಾಣದ ಕೈಗಳು ಮತ್ತು ನಿಷೇಧಿತ ಮುಸ್ಲಿಂ ಸಂಘಟನೆಗಳ ಸಂಬಂಧದ ಬಗ್ಗೆ ತನಿಖೆ ಮಾಡುವಂತೆ ಆಗ್ರಹಿಸಿ ಹೆಗಡೆ ಪತ್ರ ಬರೆದಿದ್ದಾರೆ.
ಈ ಹಿಂದೆ ಹಿಜಾಬ್ ವಿವಾದ ತಾರಕ್ಕೇರಿದ್ದ ಸಂದರ್ಭದಲ್ಲಿ ಮಂಡ್ಯದ ಪಿ.ಇ.ಎಸ್ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾಗ ಬುರ್ಖಾಧಾರಿ ವಿದ್ಯಾರ್ಥಿನಿ ಮುಸ್ಕಾನ್ ಒಬ್ಬಳೇ ಅಲ್ಲಾ ಹೂ ಅಕ್ಬರ್ ಎಂದು ಘೋಷಣೆ ಕೂಗಿ ಹಿಂದೂ ವಿದ್ಯಾರ್ಥಿಗಳತ್ತ ಮುನ್ನುಗ್ಗಿದ್ದ ವಿಡಿಯೋ ಜಗತ್ತಿನೆಲ್ಲೆಡೆ ಪ್ರಮುಖ ನ್ಯೂಸ್ ಚಾನಲ್ಗಳಲ್ಲಿ ಪ್ರಸಾರವಾಗಿ, ವಿದ್ಯಾರ್ಥಿನಿಯು ದಿಢೀರ್ ಪ್ರಸಿದ್ಧಿಯನ್ನು ಪಡೆದಿದ್ದ ಘಟನೆ ನಡೆದಿತ್ತು.
ಈ ವಿದ್ಯಾರ್ಥಿನಿಗೆ ಹಲವಾರು ಮುಸ್ಲಿಂ ಸಂಘಟನೆಗಳಿಂದ ಪ್ರಶಂಸೆಗಳು ಹಾಗೂ ಬಹುಮಾನಗಳ ನೀಡಲಾಗಿತ್ತು.ಇತ್ತೀಚೆಗೆ ನಿಷೇಧಿತ ಮುಸ್ಲಿಂ ಭಯೋತ್ಪಾದಕ ಸಂಘಟನೆಯಾದ ಆಲ್ ಖೈದಾದ ಮುಖ್ಯಸ್ಥನಾದ ಆಯಮನ್ ಅಲ್ ಜವಾಹಿರಿ ವಿದ್ಯಾರ್ಥಿನಿಯ ಕುರಿತು ಭಾರತದ ಸರ್ವಶ್ರೇಷ್ಠ ಮಹಿಳೆ ಎಂದು ಹೊಗಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡಿದೆ.
ಕರ್ನಾಟಕ ಹೈಕೋರ್ಟ್ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ತೀರ್ಪು ನೀಡಿದ್ದರೂ ಸಹಿತ ಹಲವಾರು ರಾಜಕಾರಣಿಗಳು, ಮೂಲಭೂತವಾದಿ ಸಂಘಟನೆಗಳು ಹಾಗೂ ವಿದ್ಯಾರ್ಥಿನಿಯರು ಉಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ಅನಂತಕುಮಾರ ಹೆಗಡೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಹಿಜಾಬ್ ಪ್ರತಿಭಟನೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಉಚ್ಚ ನ್ಯಾಯಲಯದ ಪೀಠವು ಅಭಿಪ್ರಾಯ ವ್ಯಕ್ತಪಡಿಸಿರುವುದು ಇಲ್ಲಿ ಉಲ್ಲೇಖನೀಯವಾಗಿದೆ. ಮುಸ್ಕಾನ್ ಗೆ ಹಿಜಾಬ್ ಷಡ್ಯಂತ್ರದ ಹಿಂದಿರುವ ಕಾಣದ ಕೈಗಳು ಮತ್ತು ನಿಷೇಧಿತ ಸಂಘಟನೆಗಳೊಂದಿಗೆ ಇರುವ ಸಂಬಂಧದ ಕುರಿತಂತೆ ಕೂಲಂಕಷವಾದ ತನಿಖೆ ನಡೆಸಬೇಕೆಂದು ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ