ನನ್ನ ತಾಯಿಗೂ ಇ ಡಿಯವರು ಕಿರುಕುಳ ನೀಡಿದ್ದರು: ಡಿ.ಕೆ.ಶಿವಕುಮಾರ್
ಸೋನಿಯಾ ಗಾಂಧಿ ಧೈರ್ಯವಾಗಿ ವಿಚಾರಣೆ ಎದುರಿಸಿ ಬಂದಿದ್ದಾರೆ..., ಮೌನ ಸತ್ಯಾಗ್ರಹ ಮಾಡಲಿದ್ದೇವೆ
Team Udayavani, Jul 24, 2022, 3:10 PM IST
ಬೆಂಗಳೂರು: ಬೆಂಗಳೂರಿನ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಬಳಿ ರಾಜ್ಯದ ಎಲ್ಲ ಕಾಂಗ್ರೆಸ್ ನಾಯಕರು, ಶಾಸಕರು, ಬ್ಲಾಕ್ ಅಧ್ಯಕ್ಷರು, ಕಾರ್ಪೊರೇಟರ್ ಗಳು, ಮಾಜಿ ಕಾರ್ಪೊರೇಟರ್ ಗಳು, ಪಕ್ಷದ ಪದಾಧಿಕಾರಿಗಳು ಆ. 26 ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಮೌನ ಸತ್ಯಾಗ್ರಹ ಮಾಡಲಿದ್ದೇವೆ ಎಂದು ಭಾನುವಾರ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರತಿನಿಧಿಗಳೊಂದಿಗೆ ಮಾತನಾಡಿ, ‘ಇದೇ 26 ರಂದು ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿ ಮಾಡಿದ್ದಾರೆ. ನನ್ನ ಪ್ರಕರಣದಲ್ಲಿ ನನ್ನ ತಾಯಿಗೂ ಇದೇ ರೀತಿ ಕಿರುಕುಳ ನೀಡಿದ್ದರು. ಆ ಸಂದರ್ಭದಲ್ಲಿ ಮನೆಯಲ್ಲೇ ವಿಚಾರಣೆ ಮಾಡಲು ನ್ಯಾಯಾಲಯದ ಮೊರೆ ಹೋಗಿದ್ದೆ.ಆದರೆ, ಸೋನಿಯಾ ಗಾಂಧಿ ಅವರು ನ್ಯಾಯಾಲಯದ ಮೊರೆ ಹೋಗದೆ ಧೈರ್ಯವಾಗಿ ವಿಚಾರಣೆ ಎದುರಿಸಿ ಬಂದಿದ್ದಾರೆ. ಆದರೂ ಕಿರುಕುಳ ನಿಲ್ಲುತ್ತಿಲ್ಲ. ಹೀಗಾಗಿ ಮೌನ ಸತ್ಯಾಗ್ರಹ ಮಾಡಲಿದ್ದೇವೆ ಎಂದರು.
ಚಲುವರಾಯಸ್ವಾಮಿ, ಬಾಲಕೃಷ್ಣ ಅವರ ಜತೆ ನಿನ್ನೆ ರಾತ್ರಿ ಸಮಾಲೋಚನೆ ಕುರಿತ ಪ್ರಶ್ನೆಗೆ, ಭಾರತ ಜೋಡೋ ಪಾದಯಾತ್ರೆ ಚಾಮರಾಜನಗರ, ಮೈಸೂರು, ಶ್ರೀರಂಗಪಟ್ಟಣ, ನಾಗಮಂಗಲ, ಮೇಲುಕೋಟೆ, ಪಾಂಡವಪುರ, ಮಾರ್ಗವಾಗಿ ತುಮಕೂರು ಜಿಲ್ಲೆ ಪ್ರವೇಶಿಸಲಿದೆ. ಇದಕ್ಕೆ ಸಂಬಂಧಿಸಿದ ತಯಾರಿ ಕುರಿತು ಚರ್ಚೆ ಮಾಡಿದ್ದೇವೆ. ಪಕ್ಷದ ಸಂಘಟನೆ ವಿಚಾರ ಹೊರತು ಪಡಿಸಿ ಬೇರೆ ವಿಚಾರವಾಗಿ ಯಾವುದೇ ನಾಯಕರು ನನ್ನ ಬಳಿ ಚರ್ಚೆ ಮಾಡಿಲ್ಲ, ಮಾಡಲು ಅವಕಾಶ ನೀಡುವುದಿಲ್ಲ ಎಂದರು.
ಕಾಂಗ್ರೆಸ್ ಜಗಳ ಬೀದಿಗೆ ಬಂದಿದೆ. ಒಂದು ಹುದ್ದೆಗೆ ನಾಲ್ಕು ಜನ ಕಿತ್ತಾಡುತ್ತಿದ್ದಾರೆ ಎಂಬ ಸಚಿವ ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ ಬಹಳ ಸಂತೋಷ. ಜನ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಲಿದ್ದಾರೆ ಎಂಬ ಸತ್ಯವನ್ನು ಅವರು ಒಪ್ಪಿಕೊಂಡಿದ್ದಾರೆ. ಅವರಿಗೆ ಅಭಿನಂದನೆಗಳು’ ಎಂದರು.
ಬಿಜೆಪಿ ನೋಡಿ ಕಾಂಗ್ರೆಸ್ ಶಿಸ್ತು ಕಲಿಯಬೇಕು ಎಂಬ ಹೇಳಿಕೆ ಕುರಿತ ಪ್ರಶ್ನೆಗೆ, ‘ ಅವರನ್ನು ನೋಡಿ ಭ್ರಷ್ಟಾಚಾರ, ಲೂಟಿ ಮಾಡೋದನ್ನು ಕಲಿಯಬೇಕಾ? ಅಯ್ಯೋ ಅವರ ಪಕ್ಷ, ಅಲ್ಲಿರುವ ಕೊಳಕು, ಅವರ ನಾಯಕರನ್ನು ಅವರು ಅರಗಿಸಿಕೊಳ್ಳಲು ಸಾಧ್ಯವಿದೆಯೇ ಎಂದು ಅವರ ಕಾರ್ಯಕರ್ತರನ್ನೆ ಕೇಳಿ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ