ಬಿಜೆಪಿಗೆ ನನ್ನ ಬೆಂಬಲ; ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು?HDK ವಿರುದ್ಧ ಸುಮಲತಾ ಕಿಡಿ

ಮಂಡ್ಯದ ಅಭಿವೃದ್ಧಿಗಾಗಿ ಒಂದು ಹೆಜ್ಜೆ ಮುಂದೆ ಹೋಗಿದ್ದೇನೆ

Team Udayavani, Mar 10, 2023, 1:51 PM IST

ಬಿಜೆಪಿಗೆ ನನ್ನ ಬೆಂಬಲ; ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು?HDK ವಿರುದ್ಧ ಸುಮಲತಾ ಕಿಡಿ

ಮಂಡ್ಯ: ಮಂಡ್ಯ ಜಿಲ್ಲೆಯ ಜನರಿಗೋಸ್ಕರ, ಅಭಿವೃದ್ಧಿಗಾಗಿ ನಾಲ್ಕು ವರ್ಷಗಳಲ್ಲಿ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಆದರೆ ನಾಲ್ಕು ವರ್ಷಗಳಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ. ನನಗೆ ಪ್ರತಿಯೊಂದು ವಿಷಯದಲ್ಲೂ ಅವಮಾನ ಮಾಡಿದರು. ಜಿಲ್ಲೆಗಾಗಿ ನಾನು ಮಾಡಿರುವ ಕೆಲಸದ ಬಗ್ಗೆ ಲೌಡ್ ಸ್ಪೀಕರ್ ಹಾಕಿ ಹೇಳ್ಬೇಕಾ? ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದರೆ ಕೆಲವರಿಗೆ ಭಯ. ಇದು ನಮ್ಮ ಭದ್ರ ಕೋಟೆ ಅಂತೀರಾ? ಈ ಭದ್ರಕೋಟೆಗೆ ಏನು ಮಾಡಿದ್ದೀರಿ? ಇಷ್ಟು ಪವರ್ ಇಟ್ಟುಕೊಂಡು ಇಷ್ಟು ವರ್ಷ ಏನ್ ಮಾಡಿದ್ದೀರಾ? ಮಂಡ್ಯ ಜಿಲ್ಲೆಗೆ ಜೆಡಿಎಸ್ ಕೊಡುಗೆ ಏನು…ಇದು ಪಕ್ಷೇತರ ಸಂಸದೆ ಸಮಲತಾ ಅಂಬರೀಶ್ ಶುಕ್ರವಾರ(ಮಾರ್ಚ್ 10) ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೆಸರನ್ನು ಉಲ್ಲೇಖಿಸದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಪರಿ ಇದಾಗಿದೆ.

ಇಂದು ಬೆಳಗ್ಗೆ ದೇಗುಲಕ್ಕೆ ಭೇಟಿ ನೀಡಿದ ನಂತರ ಮಂಡ್ಯದ ಚಾಮುಂಡೇಶ್ವರಿ ನಗರದ ನಿವಾಸದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಹೇಳಿದ್ದಿಷ್ಟು:

ನಾನು ಆಕಸ್ಮಿಕಾಗಿ ರಾಜಕೀಯಕ್ಕೆ ಬಂದಿದ್ದೇನೆ. ರಾಜಕೀಯ ಪ್ರವೇಶಿಸಿ ನಾಲ್ಕು ವರ್ಷಗಳಾಗಿವೆ. ಅಂದು ಚುನಾವಣೆ ವೇಳೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಪುತ್ರನನ್ನು ಎದುರಿಸಿ ನಿಂತಿದ್ದು ನನ್ನ ಸ್ವಾರ್ಥಕ್ಕಾಗಿ ಅಲ್ಲ. ಆ ಸಂದರ್ಭದಲ್ಲಿ ನನ್ನ ಬೆಂಬಲಕ್ಕೆ ನಿಂತಿದ್ದು ಅಂಬರೀಶ್ ಅವರ ಆಪ್ತರು, ಅಭಿಮಾನಿಗಳು ಮಾತ್ರ. ಜನ ನಮ್ಮನ್ನು ಪ್ರೀತಿಸಿ ಆಶೀರ್ವದಿಸಿದ್ದರಿಂದ ನಾನು ಬೇರೆ ಆಯ್ಕೆ ಹುಡುಕಲು ಹೋಗಲಿಲ್ಲ. ಮಂಡ್ಯ ಜಿಲ್ಲೆಯ ಜನರಿಗೋಸ್ಕರ ಹೋರಾಟ ಮಾಡಿದೆ, ಆದರೆ ನನಗೆ ಚುನಾವಣೆಯ ನಂತರವೂ ನನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಎಲ್ಲಾ ಅವಮಾನ, ನೋವನ್ನು ಸಹಿಸಿಕೊಂಡು ಎಲ್ಲವನ್ನೂ ಪಣಕ್ಕಿಟ್ಟು ಮುಂದೆ ಬಂದಿದ್ದೇನೆ ಎಂದು ಸುಮಲತಾ ಹೇಳಿದರು.

ದೇಶದಲ್ಲಿ ಅಭಿವೃದ್ಧಿ ಆಗುತ್ತಿರುವುದು ಮೋದಿ ನೇತೃತ್ವದಲ್ಲಿ:

ನನ್ನ ಬೆಂಬಲ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಂದು ಸುಮಲತಾ ಘೋಷಿಸುವ ಮೂಲಕ ಬಿಜೆಪಿ ಸೇರ್ಪಡೆ ಖಚಿತಗೊಂಡಂತಾಗಿದೆ. ಕೋವಿಡ್ ನಿರ್ವಹಣೆಗಾಗಿ ನಾನು ನನ್ನ 4 ತಿಂಗಳ ವೇತನವನ್ನು ನೀಡಿದ್ದೇನೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ದೇಶ ಅಭಿವೃದ್ಧಿ ಕಾಣುತ್ತಿದೆ. ಪಕ್ಷೇತರ ಸಂಸದೆಯಾಗಿದ್ದರೂ ಕೇಂದ್ರ ಸರ್ಕಾರ ಅನುದಾನ ನೀಡಿದೆ. ಕೇಂದ್ರದ ಹಲವು ಯೋಜನೆಗಳು ನಮಗೆ ಸಿಕ್ಕಿವೆ. ಮಂಡ್ಯದ ಅಭಿವೃದ್ಧಿಗಾಗಿ ಒಂದು ಹೆಜ್ಜೆ ಮುಂದೆ ಹೋಗಿದ್ದೇನೆ ಎಂದು ಹೇಳುವ ಮೂಲಕ ಸುಮಲತಾ ಅಂಬರೀಶ್ ಬಿಜೆಪಿಗೆ ಬಹುಪರಾಕ್ ಹೇಳಿದ್ದಾರೆ.

ಎರಡು ಸ್ಥಳಗಳಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದರು:

ಸಂಸದೆ, ಮಹಿಳೆ ಎನ್ನುವುದನ್ನು ನೋಡದೇ ನನ್ನ ಶ್ರೀರಂಗಪಟ್ಟಣ, ಪಾಂಡವಪುರದಲ್ಲಿ ಅವಮಾನ ಮಾಡಿದ್ದರು. ಜಿಲ್ಲೆಯಲ್ಲಿ ಜನರು ರಾಜಕಾರಣದ ಭಾಷಣವನ್ನು ಕೇಳಿಕೊಂಡು ಇರಬೇಕಾ? ನಾನು ಮನಸ್ಸು ಮಾಡದಿದ್ದರೆ ಮೈಶುಗರ್ ಓಪನ್ ಆಗುತ್ತಿರಲಿಲ್ಲ. ಮಂಡ್ಯದ ಅಕ್ಕಪಕ್ಕದ ಜಿಲ್ಲೆಗಳೂ ಅಭಿವೃದ್ಧಿ ಆಗುತ್ತಿದೆ. ಕನ್ನಂಬಾಡಿ ಇಲ್ಲಾಂದ್ರೆ ಮಂಡ್ಯ ಜಿಲ್ಲೆಯೇ ಇಲ್ಲ. ಮಂಡ್ಯ ಜಿಲ್ಲೆಗೆ ಮಹಾರಾಜರು ಕೊಡುಗೆ ಕೊಟ್ಟಿದ್ದಾರೆ. ಮಂಡ್ಯ ಜಿಲ್ಲೆಯನ್ನು ನಾವು ಕಾಪಾಡಿಕೊಳ್ಳಬೇಕು. ಮಂಡ್ಯದಲ್ಲಿ ಬರೀ ರಾಜಕಾರಣನಾ, ಅಭಿವೃದ್ಧಿ ಬೇಡವಾ? ಎಂದು ಸುಮಲತಾ ಪ್ರಶ್ನಿಸಿದರು.

ಮಂಡ್ಯದ ತಾಯಿ ಮಕ್ಕಳ ಆಸ್ಪತ್ರೆಗಾಗಿ ಸತತ ಹೋರಾಟ ಮಾಡಿದ್ದೇನೆ. ನಾನು ಮನಸ್ಸು ಮಾಡಿದ್ದಕ್ಕೆ ಅಕ್ರಮ ಗಣಿಗಾರಿಕೆ ಸ್ಥಗಿತಗೊಂಡಿದೆ. ಆದರೆ ಅಕ್ರಮದ ವಿರುದ್ಧ ಹೋರಾಡಿದ ನನ್ನ ಮೇಲೆ ಎರಡು ಕಡೆಗಳಲ್ಲಿ ಹಲ್ಲೆ ನಡೆಸಲು ಯತ್ನಿಸಲಾಗಿತ್ತು ಎಂದು ಸುಮಲತಾ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

indWomen Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

Women Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-sdasdasd

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

indWomen Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

Women Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

Cricket World Cup Qualifier: ಜಿಂಬಾಬ್ವೆ ಬಲಿಷ್ಠ ತಂಡ ಪ್ರಕಟ

Cricket World Cup Qualifier: ಜಿಂಬಾಬ್ವೆ ಬಲಿಷ್ಠ ತಂಡ ಪ್ರಕಟ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!