ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ಸೋರುತ್ತಿದೆ ಮೈಸೂರು ಅರಮನೆ!


Team Udayavani, Nov 24, 2021, 7:53 AM IST

JYKKJHG

ಮೈಸೂರು: ಕೆಲವು ದಿನಗಳಿಂದ ಸತತವಾಗಿ ಬಿದ್ದ ಮಳೆಯಿಂದಾಗಿ ವಿಶ್ವವಿಖ್ಯಾತ ಮೈಸೂರಿನ ಅಂಬಾ ವಿಲಾಸ ಅರಮನೆ ಮೇಲ್ಚಾವಣಿ ಸೋರುತ್ತಿದ್ದು ಗೋಡೆಗಳು ತೇವಗೊಂಡಿವೆ. ಇದರಿಂದಾಗಿ ರಾಜ ವಂಶಸ್ಥರು ಆತಂಕದಿಂದಲೇ ನೆಲೆಸುವಂತಾಗಿದೆ.

ರಾಜವಂಶಸ್ಥರು ವಾಸಿಸುತ್ತಿರುವ ಅರಮನೆಯ ಭಾಗದ ಮೇಲ್ಚಾವಣಿಯಿಂದ ನೀರು ಹೆಚ್ಚಿನ ಪ್ರಮಾ ಣದಲ್ಲಿ ಸೋರುತ್ತಿದೆ. ಗೋಡೆಗಳು ನೀರಿನಿಂದ ತೇವಗೊಂಡಿವೆ. ಚಾವಣಿಯ ಪ್ಲಾಸ್ಟರಿಂಗ್‌ ಉದುರಿ ಬೀಳುತ್ತಿವೆ. ಆ ಸಮಯದಲ್ಲಿ ಅಲ್ಲಿ ಯಾರೂ ಇಲ್ಲದಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

ನೆಲಹಾಸಿನ ಟೈಲ್ಸ್‌ಗಳೂ ಕಿತ್ತು ಹೊರಬಂದಿವೆ ಎಂದು ಸ್ವತಃ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅಳಲು ತೋಡಿಕೊಂಡಿದ್ದಾರೆ. ಅರಮನೆಯ ಕೆಲ ಭಾಗಗಳು ಈ ಹಿಂದೆಯೇ ದುರಸ್ತಿ ಕಂಡಿವೆ. ಆದರೆ, ಈ ಬಾರಿ ಸತತ ಮಳೆಯಿಂದ ಹೆಚ್ಚಿನ ಹಾನಿಗೊಳಗಾಗಿದೆ.

ಪ್ರಮೋದಾ ದೇವಿ ಒಡೆಯರ್‌ ಅವರು ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್‌ ಪ್ರತಿಷ್ಠಾನದಿಂದ ಹಾನಿಗೀಡಾದ ಕರಿಕಲ್ಲು ತೊಟ್ಟಿ ಭಾಗದ ಚಂದ್ರಕಲಾ ತೊಟ್ಟಿ ಮತ್ತಿ ತರ ಕಡೆ ತಜ್ಞರ ಮಾರ್ಗದರ್ಶನದಲ್ಲಿ ಕೈಗೊಂಡಿ ರುವ ದುರಸ್ತಿ ಕಾರ್ಯ ನಡೆಯುತ್ತಿರುವಾಗಲೇ ಇತರೆಡೆ ಹಾನಿ ಪ್ರಮಾಣ ಹೆಚ್ಚಾಗುತ್ತಿದೆ. ಆದರೆ, ದುರಸ್ತಿ ಕಾರ್ಯ ಕೈಗೊಳ್ಳಲು ರಾಜ್ಯ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗುತ್ತಿಲ್ಲ

ನಮಗೆ ಸರ್ಕಾರ ಕೊಟ್ಟಷ್ಟು ತೊಂದ್ರೆ ಬೇರಾರಿಗೂ ಕೊಟ್ಟಿಲ್ಲ

ಇಡೀ ದೇಶದಲ್ಲಿ ಸ್ವಾತಂತ್ರ್ಯ ನಂತರ ಸರ್ಕಾರದಿಂದ ನಾವು ಪಟ್ಟಷ್ಟು ತೊಂದರೆಯನ್ನು ಬೇರೆ ಯಾವ ರಾಜಮನೆತನವೂ ಅನುಭವಿಸಿಲ್ಲ. ನಮ್ಮದೇನೂ ತಪ್ಪಿಲ್ಲ. ಆದರೂ, ನಾವು ನೋವು ಅನುಭವಿಸ ಬೇಕಿದೆ.

ನ್ಯಾಯಾಲಯಗಳು ನಮ್ಮ ಪರ ತೀರ್ಪು ನೀಡಿದರೂ ಸರ್ಕಾರ ಇದನ್ನು ಜಾರಿಗೆ ತರುತ್ತಿಲ್ಲ… ಮೈಸೂರಿನ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ಮಂಗಳವಾರ “ಉದಯವಾಣಿ’ಯೊಂದಿಗೆ ಮಾತಾಡುತ್ತಾ ತಮ್ಮ ನೋವನ್ನು ತೋಡಿಕೊಂಡರು. ರಾಜ್ಯ ಸರ್ಕಾರದ ಬಗ್ಗೆ ಅಸಮಾಧಾನ ಹೊರಹಾಕಿ, ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್‌ ಪ್ರತಿಷ್ಠಾನದಿಂದ ಕಾರ್ಯಗಳನ್ನು ಕೈಗೆತ್ತಿ ಕೊಂಡಿದ್ದರೂ ರಾಜ್ಯ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆಯದಿರುವುದಕ್ಕೆ ಬೇಸರಪಟ್ಟರು.

ನಾನು ರಾಜ್ಯ ಸರ್ಕಾರದಿಂದ ಎಲ್ಲ ಅನುಮತಿಗಳನ್ನು ಪಡೆದು ಅರಮನೆಯ ಕೆಲವು ಭಾಗದಲ್ಲಿ ಪಾರಂಪರಿಕ ಕಟ್ಟಡದ ಸಂರಕ್ಷಣೆಗಾಗಿ ನನ್ನ ಕೈಯಿಂದ ಹಣ ವೆಚ್ಚ ಮಾಡಿ ದುರಸ್ತಿ ಕಾರ್ಯ ನಡೆಸುತ್ತಿದ್ದೇನೆ. ಆದರೆ, ಸರ್ಕಾರದಿಂದ ಈ ಹಣ ನಮಗೆ ಮರು ಪಾವತಿಯಾಗಿಲ್ಲ. ಸರ್ಕಾರಕ್ಕೆ ಪತ್ರ ಬರೆದರೂ ಪ್ರತಿಕ್ರಿಯೆ ಬರುತ್ತಿಲ್ಲ.

ಅರಮನೆಯ ನಮ್ಮ ಜಾಗದಲ್ಲಿ ವಾಸವಿದ್ದರೂ ರಾಜ್ಯ ಸರ್ಕಾರದ ಕೆಲವರು ನಾವೇನೋ ಅವರ ಜಾಗದಲ್ಲಿ ವಾಸಿಸುತ್ತಿದ್ದೇವೆ ಎಂಬ ಧೋರಣೆ ತಳೆದಿದ್ದಾರೆ. ಏಕೆ ಈ ಧೋರಣೆ ಅಂತ ಗೊತ್ತಾಗುತ್ತಿಲ್ಲ. ಮನಸ್ಸಿಗೆ ತುಂಬಾ ನೋವಾಗುತ್ತದೆ ಎಂದು ಪ್ರಮೋದಾದೇವಿ ಒಡೆಯರ್‌ ಗದ್ಗದಿತರಾದರು.

ಅರಮನೆ ಸ್ವಾಧೀನಪಡಿಸಿಕೊಳ್ಳುವ ರಾಜ್ಯ ಸರ್ಕಾರದ ಕಾಯ್ದೆ ವಿರುದ್ಧ ಕೋರ್ಟ್‌ನಲ್ಲಿ ದಾವೆ ಹೂಡಿದ್ದೇವೆ. ಈ ದಾವೆ ಇತ್ಯರ್ಥವಾಗುವವರೆಗೂ ಮೈಸೂರು ಅರಮನೆ ನಿರ್ವಹಣೆಯನ್ನು ರಾಜ್ಯ ಸರ್ಕಾರ ಮಾಡಬೇಕು. ಅರಮನೆ ವೀಕ್ಷಿಸಲು ಬರುವವರಿಂದ ಪ್ರವೇಶ ದರ ಪಡೆಯಲಾಗುತ್ತದೆ. ಈ ಹಣದಿಂದಲೇ ಅರಮನೆ ಕಟ್ಟಡದ ನಿರ್ವಹಣೆ ಮಾಡಬಹುದು. ಆದರೆ, ಸರ್ಕಾರ ಮಾಡುತ್ತಿಲ್ಲ ಎಂದರು.

-ಕೂಡ್ಲಿ ಗುರುರಾಜ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.