ಮೈಸೂರು ದಸರಾದಲ್ಲಿ ಅರ್ಜುನನ ಸ್ಥಾನ ತುಂಬಲಿರುವ ಅಭಿಮನ್ಯು: ಆನೆಗಳಿಗೂ ಕೋವಿಡ್ ತಪಾಸಣೆ?

ಸತತ 8 ವರ್ಷಗಳಕಾಲ ಅಂಬಾರಿ ಹೊತ್ತ ಆನೆ ಈ ಬಾರಿಯ ದಸರಾಕ್ಕಿಲ್ಲ

Team Udayavani, Sep 12, 2020, 10:47 AM IST

ಮೈಸೂರು ದಸರಾದಲ್ಲಿ ಅರ್ಜುನನ ಸ್ಥಾನ ತುಂಬಲಿರುವ ಅಭಿಮನ್ಯು: ಆನೆಗಳಿಗೂ ಕೋವಿಡ್ ತಪಾಸಣೆ?

ಮೈಸೂರು: ವಿಶ್ವವಿಖ್ಯಾತ ಜಂಬೂ ಸವಾರಿಯ ಪ್ರಮುಖ ತಾರ ಆಕರ್ಷಣೆಯಾಗಿದ್ದ ಅಂಬಾರಿ ಆನೆ ಅರ್ಜುನ ಈ ಬಾರಿ ವಯಸ್ಸಿನ ಕಾರಣಕ್ಕೆ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುತ್ತಿಲ್ಲ. ಬದಲಿಗೆ ಅರ್ಜುನನ ಸ್ಥಾನವನ್ನು ಅಭಿಮನ್ಯು ತುಂಬಲಿದ್ದಾನೆ ಎಂದು ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್ ಅಲೆಕ್ಸಾಂಡರ್‌ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತತ ಎಂಟು ಬಾರಿ ಅಂಬಾರಿ ಹೊತ್ತ ಅರ್ಜುನ ಆನೆಗೆ 60 ವರ್ಷ ಆಗಿರುವ ಹಿನ್ನೆಲೆಯಲ್ಲಿ ಈ ಬಾರಿ ಅಭಿಮನ್ಯುವಿಗೆ ಅಂಬಾರಿ ಹೊರಿಸಲು ತೀರ್ಮಾನಿಸಲಾಗಿದೆ. ಅಭಿಮನ್ಯು ಸಾಕಷ್ಟು ವರ್ಷಗಳಿಂದ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದು, ಪ್ರತಿವರ್ಷ ಭಾರ ಹೊರುವ ತಾಲೀಮು ನಡೆಸಿದ್ದಾನೆ. ಹೀಗಾಗಿ ಅಭಿಮನ್ಯುವಿಗೆ ಭಾರಹೊರುವುದು ದೊಡ್ಡ ಸವಾಲಾಗುವುದಿಲ್ಲ. ಜೊತೆಗೆಈಬಾರಿಯ ದಸರಾಕ್ಕೆ ಅರ್ಜುನನ್ನುಕರೆತರುತ್ತಿಲ್ಲ ಎಂದು ಹೇಳಿದರು.

ಅರ್ಜುನ ಅತ್ಯುತ್ತಮ ಆನೆ: ಅರ್ಜುನ 8 ವರ್ಷಗಳ ಕಾಲ ತನಗೆ ವಹಿಸಿದ ಅಂಬಾರಿ ಹೊರುವ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದಾನೆ. ಅರ್ಜುನ ಅತ್ಯುತ್ತಮ ಆನೆ. ಆದರೆ, ವಯಸ್ಸಿನ ಕಾರಣಕ್ಕೆ ಈ ಬಾರಿ ದಸರಾ ಉತ್ಸವಕ್ಕೆ ಕರೆ ತರಲು ಸಾಧ್ಯವಾಗುತ್ತಿಲ್ಲ. ಅರ್ಜುನನಿಗೆ ಒಂದು ಒಳ್ಳೆಯ ವಿದಾಯ ಸಿಗಲಿಲ್ಲ ಎಂಬ ಭಾವನೆ ಬೇಡ. ಅಂಬಾರಿ ಹೊತ್ತ ಆನೆಗಳಿಗೆ ವಿದಾಯ ನೀಡುವ ಸಂಪ್ರದಾಯ ಮೊದಲಿನಿಂದಲೂ ಇಲ್ಲ. ನಮಗೆ ದಸರಾ ಉತ್ಸವ ನಡೆಸಲು ಒಂದು ಆನೆ ಬೇಕಾಗಿದೆ ಅಷ್ಟೆ. ಅರ್ಜುನನ ಮೂಲಕವೇ ದಸರಾ ನಡೆಸಬೇಕೆಂದೇನು ಇಲ್ಲ. ಒಂದು ವೇಳೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅರ್ಜುನನೇ ಈ ಬಾರಿಯೂ ಅಂಬಾರಿ ಹೊರಲಿ ಎಂದು ನಿರ್ದೇಶನ ನೀಡಿದರೆ ಈ ಬಾರಿಯೂ ಅರ್ಜುನನೇ ಅಂಬಾರಿ ಹೊರಲಿದ್ದಾನೆ ಎಂದು ತಿಳಿಸಿದರು.

ಪಟ್ಟಿ ಸಲ್ಲಿಕೆ: ತಾತ್ಕಾಲಿಕವಾಗಿ ಸಿದ್ಧಪಡಿಸಿರುವ ಪಟ್ಟಿಯಲ್ಲಿ ಅಭಿಮನ್ಯು ಅಂಬಾರಿ ಆನೆಯಾಗಿ ಸ್ಥಾನ ಪಡೆದಿದ್ದು, ಗೋಪಿ ಪಟ್ಟದ ಆನೆಯಾಗಿ, ವಿಕ್ರಮ ನಿಶಾನೆಯಾಗಿ, ವಿಜಯ ಮತ್ತು ಕಾವೇರಿ ಕುಮ್ಕಿ ಆನೆಗಳಾಗಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಈ ಪಟ್ಟಿಯನ್ನು ಈಗಾಗಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಸಲ್ಲಿಸಲಾಗಿದೆ. ಈ ಪಟ್ಟಿಗೆ ಅವರು ಒಪ್ಪಿಗೆ ಸೂಚಿಸಿದರೆ ಈ ಐದು ಆನೆಗಳೇ ಅಂತಿಮಗೊಳ್ಳಲಿವೆ ಎಂದು ಮಾಹಿತಿ ನೀಡಿದರು.

ತಾಲೀಮು: ಈ ಬಾರಿ ಜಂಬೂಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರುವುದು ಹಾಗೂ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಐದು ಆನೆಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಪ್ರತಿ ವರ್ಷ 12 ರಿಂದ 15 ಆನೆಗಳು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದವು. ತಾಲೀಮಿಗೆ ಸಾಕಷ್ಟು ಸಮಯ ಇದೆ. ಆಯ್ಕೆ ಮಾಡಿರುವ ಎಲ್ಲ ಆನೆಗಳು ಈ ಹಿಂದೆ ದಸರಾ ಉತ್ಸವದಲ್ಲಿ ಪಾಲ್ಗೊಂಡು ಅನುಭವ ಹೊಂದಿರುವ ಹಿನ್ನೆಲೆಯಲ್ಲಿ ತಾಲೀಮಿನ ಕುರಿತು ಯಾವುದೇ ಸಂದೇಹ ಬೇಡ ಎಂದರು.

ಆನೆಗಳಿಗೂ ಕೋವಿಡ್ ತಪಾಸಣೆ?
ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವ ಆನೆ ಮಾವುತರು, ಕಾವಾಡಿಗರು ಹಾಗೂ ಆನೆಗಳ ಆರೋಗ್ಯ ಕಾಪಾಡಲು ಹೆಚ್ಚಿನ ಒತ್ತು ನೀಡಲಾಗುವುದು. ಫ್ರಾನ್ಸ್‌ ಮೃಗಾಲಯದಲ್ಲಿ ಹುಲಿಗೆ ಕೋವಿಡ್ ಕಾಣಿಸಿಕೊಂಡ ಉದಾಹರಣೆ ಇದೆ.ಆದರೆ, ಇದುವರೆಗೆ ಪ್ರಪಂಚದ ಯಾವುದೇಭಾಗದಲ್ಲಿ ಆನೆಗಳಿಗೆ ಕೋವಿಡ್ ಕಾಣಿಸಿಕೊಂಡಿರುವ ಉದಾಹರಣೆ ಇಲ್ಲ.ಆದರೆ, ಈ ವಿಚಾರದಲ್ಲಿ ನಾವು ನಿರ್ಲಕ್ಷ್ಯ ವಹಿಸದೇ, ತಜ್ಞರ ವರದಿ ಪಡೆದು ಅಗತ್ಯಬಿದ್ದರೆ ಆನೆಗಳಿಗೂಕೊರೊನಾ ತಪಾಸಣೆ ನಡೆಸಲಾಗುವುದು ಎಂದು ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್ ಅಲೆಕ್ಸಾಂಡರ್‌ ತಿಳಿಸಿದರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.