ಕಳೆಗಟ್ಟಿದ ಮೈಸೂರು ದಸರಾ : ಜಂಬೂ ಸವಾರಿಗೆ ನಡೆಯುತ್ತಿದೆ ಸಕಲ ಸಿದ್ಧತೆ
Team Udayavani, Oct 15, 2021, 8:02 AM IST
ಮೈಸೂರು : ವಿಶ್ವ ವಿಖ್ಯಾತ ದಸರಾ ಸಂಭ್ರಮ ಕಳೆಗಟ್ಟಿದೆ. ಇಂದು ಮೈಸೂರಿನಲ್ಲಿ ಜಂಬೂ ಸವಾರಿ ನಡೆಯಲಿದೆ. ಈ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನ ಕಾತರದಿಂದ ಕಾದು ಕುಳಿತಿದ್ದಾರೆ.
ಈ ಜಂಬೂ ಸವಾರಿಯಲ್ಲಿ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದಾನೆ, ಹಾಗೆ ಅದರ ಜೊತೆ ಕುಮ್ಕಿ ಆನೆಗಳಾದ ಕಾವೇರಿ ಹಾಗೂ ಚೈತ್ರಾ ಕೂಡ ಸಾಗಲಿವೆ. ಒಂದು ಗಂಟೆ ಮೆರವಣಿಗೆ ನಂತರ ಸವಾರಿ ಸಂಪನ್ನಗೊಳ್ಳಲಿದೆ.
ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಚಾಮುಂಡಿಬೆಟ್ಟದಿಂದ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತದೆ. 8:00 ಗಂಟೆಗೆ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಉತ್ಸವ ಮೂರ್ತಿ ತರುವ ಅಲಂಕೃತ ವಾಹನದೊಂದಿಗೆ ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಅಶ್ವದಳ, ಭಜನಾ ತಂಡ, ವೇದಘೋಷ, ಚಂಡೆ, ನವದುರ್ಗೆಯರು ಸಾಗುತ್ತಾರೆ.
ಸಂಬಾರಿ ಮೆರವಣಿಗೆ ಯಾವಾಗ
ಇಂದು ಸಂಜೆ 4.36ರಿಂದ 4.46ರೊಳಗೆ ಸಲ್ಲುವ ಮೀನ ಲಗ್ನದಲ್ಲಿ ಮುಖ್ಯಮಂತ್ರಿಗಳು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವರು. ನಂತರ ಸಂಜೆ 5 ರಿಂದ 5.30ರೊಳಗೆ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಅಂಬಾರಿ ಹೊರಲಿರುವ ಆನೆ ಅಭಿಮನ್ಯು ಎಡ ಹಾಗೂ ಬಲದಲ್ಲಿ ಕುಮ್ಕಿ ಆನೆಗಳಾದ ಕಾವೇರಿ ಹಾಗೂ ಚೈತ್ರಾ ಹೆಜ್ಜೆ ಹಾಕಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?