ಕೊನೆಗೂ ನಾಗಲ್ಯಾಂಡ್ ನಲ್ಲಿ ನಾಯಿ ಮಾಂಸ ಮಾರಾಟಕ್ಕೆ ನಿಷೇಧ, ಏನಿದು ವಿವಾದ!
ನಾಯಿಗಳನ್ನು ಗೋಣಿಚೀಲದಲ್ಲಿ ಹಿಡಿದಿಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್
Team Udayavani, Jul 4, 2020, 12:21 PM IST
ಕೊಹಿಮಾ(ದಿಮಾಪುರ್): ಗೋಣಿಚೀಲದಲ್ಲಿ ತುಂಬಿಸಿಟ್ಟಿದ್ದ ನಾಯಿಗಳ ಮಾರಾಟದ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆದ ಬಳಿಕ ನಾಗಲ್ಯಾಂಡ್ ಸರ್ಕಾರ ಅಧಿಕೃತವಾಗಿ ರಾಜ್ಯದಲ್ಲಿ ನಾಯಿ ಮಾಂಸ ಮಾರಾಟ ಹಾಗೂ ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಘೋಷಿಸಿದೆ.
ಕಳೆದ ಕೆಲವು ವರ್ಷಗಳಿಂದ ನಾಯಿ ಮಾಂಸ ಮಾರಾಟದ ವಿರುದ್ಧ ಭಾರೀ ವಿರೋಧ ವ್ಯಕ್ತವಾಗುತ್ತಲೇ ಬಂದಿತ್ತು. ಅಲ್ಲದೇ ನಾಯಿ ಮಾಂಸ ಮಾರಾಟ ನಿಷೇಧದ ನಿರ್ಧಾರ ನಾಗಾಲ್ಯಾಂಡ್ ಸರ್ಕಾರ 2ನೇ ಬಾರಿ ತೆಗೆದುಕೊಂಡಂತಾಗಿದೆ. ಈ ಹಿಂದೆ ರಾಜ್ಯ ಸರ್ಕಾರ, ನಾಯಿ ಮಾಂಸ ಮಾರಾಟ ಮಾಡುವುದನ್ನು ನಿಲ್ಲಿಸಬೇಕೆಂದು ನಗರಾಭಿವೃದ್ಧಿ ಮಂಡಳಿಗೆ ತಿಳಿಸಿತ್ತು. ಆದರೆ ಅದು ಕಾರ್ಯರೂಪಕ್ಕೆ ಬಂದಿಲ್ಲವಾಗಿತ್ತು ಎಂದು ವರದಿ ವಿವರಿಸಿದೆ.
ನಾಗಾಲ್ಯಾಂಡ್ ನ ದಿಮಾಪುರ್ ನಾಯಿ ಮಾರಾಟ ಮಾರುಕಟ್ಟೆಯಲ್ಲಿ ಮಾಂಸಕ್ಕಾಗಿ ನಾಯಿಗಳನ್ನು ಗೋಣಿಚೀಲದಲ್ಲಿ ಹಿಡಿದಿಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ಪ್ರಾಣಿ ದಯಾ ಸಂಘ ತಕ್ಷಣವೇ ನಾಯಿ ಮಾಂಸ ಮಾರಾಟ ನಿಷೇಧಕ್ಕೆ ಕ್ರಮ ತೆಗೆದುಕೊಳ್ಳಬೇಕೆಂದು ನಾಗಲ್ಯಾಂಡ್ ಸರ್ಕಾರಕ್ಕೆ ಒತ್ತಾಯಿಸಿತ್ತು.
ಈ ನಿಟ್ಟಿನಲ್ಲಿ ನಾಗಲ್ಯಾಂಡ್ ಸರ್ಕಾರ ಮಾರಾಟ ಉದ್ದೇಶಕ್ಕಾಗಿ ನಾಯಿಗಳ ಆಮದು ಮತ್ತು ನಾಯಿ ಮಾಂಸ ಮಾರಾಟ ನಿಷೇಧಿಸಿದೆ. ಬೇಯಿಸಿದ ಹಾಗೂ ಹಸಿ ಮಾಂಸ ಸೇರಿದಂತೆ ಸಂಪೂರ್ಣ ನಿಷೇಧ ಹೇರಲಾಗಿದೆ. ಹೀಗಾಗಿ ಈ ನಿರ್ಧಾರ ತೆಗೆದುಕೊಂಡ ನಾಗಲ್ಯಾಂಡ್ ಸಚಿವ ಸಂಪುಟದ ಕ್ರಮ ಮೆಚ್ಚುಗೆಯಾಗಿದೆ ಎಂದು ನಾಗಲ್ಯಾಂಡ್ ಮುಖ್ಯ ಕಾರ್ಯದರ್ಶಿ ಟೆಂಜೆನ್ ಟಾಯ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ