ನಾಗೇಶ್ ಇತಿಹಾಸದ ಕನಿಷ್ಠ ತಿಳುವಳಿಕೆ ಇಲ್ಲದ ಶಿಕ್ಷಣ ಸಚಿವ: ಬಿ.ಕೆ. ಹರಿಪ್ರಸಾದ್ ಕಿಡಿ

ಹೆಡ್ಗೆವಾರ್ ಕೋಟ್ಯಂತರ ಜನರಿಗೆ ಸ್ಫೂರ್ತಿ, ಕಾಂಗ್ರೆಸ್ ಹಿಂದುತ್ವಕ್ಕೆ ಹೆದರುತ್ತಿದೆ : ಸಚಿವ ನಾಗೇಶ್

Team Udayavani, May 23, 2022, 7:21 PM IST

b k hari (2)

ಬೆಂಗಳೂರು: ಬಿ.ಸಿ.ನಾಗೇಶ್ ಅವರೇ ನಾನು ನಿಮ್ಮ ಹಾವಿನಪುರದಲ್ಲಿ ತರಬೇತಿ ಪಡೆದವನೂ ಅಲ್ಲ, ವಾಟ್ಸಪ್ ಫಾರ್ವರ್ಡ್‌ ಯುನಿವರ್ಸಿಟಿಯ ವಿದ್ಯಾರ್ಥಿಯೂ ಅಲ್ಲ ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಕಿಡಿ ಕಾರಿದ್ದಾರೆ.

ಹೆಡ್ಗೆವಾರ್ ಅವರ ಭಾಷಣವನ್ನು ಪಠ್ಯಪುಸ್ತಕಗಳಲ್ಲಿ ಸೇರಿಸುವ ಕುರಿತು ಪ್ರತಿಕ್ರಿಯಿಸಿ, ಇತಿಹಾಸದ ಬಗ್ಗೆ ನಂಬಿಕೆಯೂ ಇಲ್ಲದ, ಕನಿಷ್ಠ ಅದರ ತಿಳುವಳಿಕೆಯೂ ಇಲ್ಲದ ಶಿಕ್ಷಣ ಸಚಿವ ನಾಗೇಶ್ ಅವರು ಇತಿಹಾಸದ ಪಾಠ ಹೇಳಲು ಬರುತ್ತಿದ್ದಾರೆ.ರಾಷ್ಟ್ರೀಯತೆ, ಸ್ವಾತಂತ್ರ್ಯ ಹೋರಾಟ, ರಾಷ್ಟ್ರಪ್ರೇಮ, ರಾಷ್ಟ್ರ ಧ್ವಜದ ಚಿಂತನೆಯ ಬಗ್ಗೆ ಸಂಪೂರ್ಣ ವಿರುದ್ಧವಾಗಿದ್ದವರಿಂದ ಪಾಠ ಹೇಳಿಸಿಕೊಳ್ಳುವ ದಾರಿದ್ರ್ಯ ನನಗೆ ಬಂದಿಲ್ಲ, ಬರುವುದು ಇಲ್ಲ. ಕೇಸರಿ ಬಿಳಿ ಹಸಿರು ಬಣ್ಣಗಳ ನಡುವೆ ಅಶೋಕ ಚಕ್ರವಿರುವ ರಾಷ್ಟ್ರಧ್ವಜ ಬಗ್ಗೆ ನಿಮ್ಮ ಸಂಘದ ಸಂಸ್ಥಾಪಕ ಹೆಡ್ಗೆವಾರ್ ತಿರಸ್ಕಾರ ಮನೋಭಾವನೆಯ ಜೊತೆಗೆ ಕನಿಷ್ಟ ಗೌರವವೂ ಇರಲಿಲ್ಲ ಎಂಬುದನ್ನ ಸಾಬೀತು ಮಾಡಲು ನಾನು ಸಿದ್ದ ಎಂದು ಸವಾಲು ಹಾಕಿದ್ದಾರೆ.

1930ರಲ್ಲಿಯೇ ತ್ರಿವರ್ಣ ಧ್ವಜವನ್ನ ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯಾಗಿ ಎಲ್ಲಾ ವರ್ಗದ, ಧರ್ಮದವರನ್ನ ಪ್ರತಿನಿಧಿಸುವಂತೆ ರಚಿಸಿ,ಇಡೀ ದೇಶವೇ ತ್ರಿವರ್ಣ ಧ್ವಜವನ್ನ ಒಪ್ಪಿ ಅಪ್ಪಿಕೊಂಡಾಗಿತ್ತು. ಆದರೆ 1928ರಿಂದಲೇ ಭಾಗವಾಧ್ವಜವನ್ನ ಆರ್ ಎಸ್ ಎಸ್ ನ ಅಧಿಕೃತ ನಿಶಾನೆ ಎಂದು ಹೆಡ್ಗೆವಾರ್ ಘೋಷಿಸಿದ್ದರಿಂದ, ತ್ರಿವರ್ಣ ಧ್ವಜವನ್ನ ಸಂಘಪರಿವಾರ ಒಪ್ಪಲೇ ಇಲ್ಲ. ಹೆಚ್ಚಿನ ಮಾಹಿತಿ ಬೇಕಿದ್ದರೆ ಹೆಡ್ಗೆವಾರರ ಸಹಚರನಾಗಿದ್ದ ಎನ್ ಹೆಚ್ ಪಾಲ್ಕರ್ ಬರೆದ “Saffron flag” ಪುಸ್ತಕದಲ್ಲಿ ದಾಖಲಾಗಿದೆ. ಅಷ್ಟೇ ಯಾಕೆ ಸ್ವಾಮಿ, ಸಂಗದ ಸ್ಥಾಪನೆ ಮುಖಂಡ ಗೋಳ್ವಾಲ್ಕರ್ ಬರೆದ “ಬಂಚ್ ಆಫ್ ಥಾಟ್ಸ್” ಪುಸ್ತಕದಲ್ಲಿ ರಾಷ್ಟ್ರಧ್ವಜವನ್ನ ತಿರಸ್ಕಾರ ಮಾಡಿದ್ದಾರೆ ಕಣ್ಣಿನ ಪೊರೆ ಕಳಚಿಟ್ಟು ಓದಿ ಎಂದು ಸವಾಲು ಹಾಕಿದ್ದಾರೆ.

1930 ಜನವರಿ 26ರಂದು ಸ್ವಾತಂತ್ರ್ಯ ಹೋರಾಟಗಾರರು ತ್ರಿವರ್ಣ ಧ್ವಜವನ್ನ ದೇಶದೆಲ್ಲೆಡೆ ಹಾರಿಸಲು ತೀರ್ಮಾನಿಸಿದಾಗ ಈ ಹೆಡ್ಗೆವಾರ್ “ನಮ್ಮ ಎಲ್ಲಾ ಶಾಖೆಯ ಕಚೇರಿಗಳಲ್ಲಿ ಭಾಗವಧ್ವಜ ಹಾರಿಸಬೇಕು” ಎಂದು ಕರೆ ಕೊಟ್ಟಿದ್ದನ್ನ ಈ ದೇಶ ಮರೆತಿಲ್ಲ. ಆಗ ಹೆಡ್ಗೆವಾರ್ ಬದುಕಿದ್ದರು..! ಎಂದು ಹೇಳಿದ್ದಾರೆ.

ಬಿಜೆಪಿಯ ಪಿತಾಮಹ ಶ್ಯಾಂ ಪ್ರಸಾದ್ ಮುಖರ್ಜಿಯವರು ಸ್ವಾತಂತ್ರ್ಯ ಭಾರತದ ನಂತರ ಪಂಡಿತ್ ಜವಹರಲಾಲ್ ನೆಹರೂ ಸರ್ಕಾರದಲ್ಲಿ ಮಂತ್ರಿಯಾಗಿದ್ದರೂ ಕೂಡ ಅವರ ಅಧಿಕೃತ ನಿವಾಸದ ಮೇಲೆ ಹಾರಿಸುತ್ತಿದ್ದಿದ್ದು ಭಗವದ್ವಜ ಹೊರತು ರಾಷ್ಟ್ರಧ್ವಜ ಅಲ್ಲ. ಅಷ್ಟಕ್ಕೂ ಆರ್ ಎಸ್ ಎಸ್ ನ ಮುಖವಾಣಿ ಆರ್ಗನೈಸರ್ ಅಲ್ಲಿ ತ್ರಿವರ್ಣ ಇರುವ ಭಾರತದ ಧ್ವಜ ಅಪಶಕುನ ಎಂದು ಬರೆದಿರುವುದು ದಾಖಲೆಯಾಗಿದೆ. ಸ್ವಾತಂತ್ರ್ಯ ಬಂದು 2002ರವರೆಗೆ ರಾಷ್ಟ್ರ ಧ್ವಜವನ್ನ ಶಾಖೆಯ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಾರಿಸಲೇ ಇಲ್ಲ ಯಾಕೆ ಎಂಬುದನ್ನ ಮೊದಲು ಸ್ಪಷ್ಟಪಡಿಸಿ ಎಂದು ಸವಾಲು ಹಾಕಿದ್ದಾರೆ.

ಆರ್ ಎಸ್ ಎಸ್ ಹಾಗೂ ಬಿಜೆಪಿ ತಮ್ಮ ಹುಟ್ಟಿನಿಂದಲೇ ಸ್ವಾತಂತ್ರ್ಯ ಹೋರಾಟದ ಜೊತೆ ಜೊತೆಗೆ ರಾಷ್ಟ್ರೀಯತೆ,ರಾಷ್ಟ್ರಧ್ವಜದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ ಎಂಬ ನನ್ನ ಹೇಳಿಕೆಗೆ ಈಗಲೂ ನಾನು ಬದ್ಧ. ಚರ್ಚೆಗೂ ಸಿದ್ದ ಎಂದು ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.

ಕಾಂಗ್ರೆಸ್ ನೆಹರು ಅವರ ಮಗಳಿಗೆ ಐತಿಹಾಸಿಕ ಅಧ್ಯಾಯವನ್ನು ತೆಗೆದುಹಾಕುವ ಪತ್ರವನ್ನು ಪರಿಚಯಿಸಿದರು. ಆದರೆ ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿ ದೇಶಕ್ಕಾಗಿ ಮುಡಿಪಾಗಿಟ್ಟ ವ್ಯಕ್ತಿಯ ಭಾಷಣವನ್ನು ಪರಿಚಯಿಸಿದ್ದೇವೆ ಎಂದು ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದರು.

ಹೆಡ್ಗೆವಾರ್ ಕೋಟ್ಯಂತರ ಜನರಿಗೆ ಸ್ಫೂರ್ತಿ ನೀಡಿದರು. ಬ್ರಹ್ಮಾಚಾರ್ಯರ ಜೀವನ ನಡೆಸಿದರು. ವಿಷಯವು ಸಮಸ್ಯೆಯಾಗಿದ್ದರೆ, ಅದರ ಬಗ್ಗೆ ಕಾಂಗ್ರೆಸ್ ನೊಂದಿಗೆ ಮಾತನಾಡಲು ನಾವು ಸಿದ್ಧರಿದ್ದೇವೆ. ಆದರೆ ಕಾಂಗ್ರೆಸ್ ಹಿಂದುತ್ವಕ್ಕೆ ಹೆದರುತ್ತಿದೆ. ಅವರು ಹಿಂದೂ ಸಮಾಜವನ್ನು ವಿಭಜಿಸುವುದನ್ನು ನೋಡಲು ಬಯಸುತ್ತಾರೆ, ಅದರಿಂದ ಅವರು ಮತಗಳನ್ನು ಪಡೆಯಬಹುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದರು.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.