ಬಿಎಸ್ ವೈ ಜತೆ ಚರ್ಚೆ ನಡೆಸಿದ ಕಟೀಲ್ : ಸಂಪುಟ ಕುರಿತು ಮಾತುಕತೆ?
ಅಮಿತ್ ಶಾ ರಾಜ್ಯ ಭೇಟಿಗೆ ಸಿದ್ಧತೆ, ಯಡಿಯೂರಪ್ಪ ಮಾರ್ಗದರ್ಶನದಲ್ಲೇ ತಯಾರಿ
Team Udayavani, Mar 29, 2022, 5:11 PM IST
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಭೇಟಿಗೆ ಸಿದ್ಧತೆ ನಡೆಯುತ್ತಿರುವಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಯಡಿಯೂರಪ್ಪ ನಿವಾಸಕ್ಕೆ ಪಕ್ಷದ ಪ್ರತಿನಿಧಿಯಾಗಿ ಆಗಮಿಸಿ, ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆಂದು ಹೇಳಲಾಗುತ್ತಿದೆಯಾದರೂ ಸಂಪುಟ ಪುನರ್ ರಚನೆ ಹಾಗೂ ಇನ್ನಿತರ ವಿದ್ಯಮಾನಗಳ ಬಗ್ಗೆಯೂ ಮಾತುಕತೆ ನಡೆಸಿರಬಹುದು ಎಂದು ಹೇಳಲಾಗುತ್ತಿದೆ.
ರಾಜ್ಯ ಪ್ರವಾಸ
ಬಿಜೆಪಿ ಮೂಲಗಳ ಪ್ರಕಾರ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಪ್ರಕ್ರಿಯೆ ಆರಂಭಿಸಲಾಗಿದ್ದು, ಈ ದಿಶೆಯಲ್ಲಿ ಯಡಿಯೂರಪ್ಪ ನವರ ಮಾರ್ಗದರ್ಶನವನ್ನು ಕೋರಲಾಗಿದೆ. ಸದ್ಯದಲ್ಲೇ ರಾಜ್ಯ ಪ್ರವಾಸಕ್ಜೆ ಪಕ್ಷದ ವತಿಯಿಂದಲೇ ಸಿದ್ಧತೆ ಆರಂಭಿಸಲಾಗಿದ್ದು, ಯಡಿಯೂರಪ್ಪ ಅವರು ಪಾಲ್ಗೊಳ್ಳಬೇಕಾದ ದಿನಾಂಕ ಇತ್ಯಾದಿ ವಿಚಾರಗಳ ಬಗ್ಗೆ ಮನವಿ ಮಾಡಲು ಖುದ್ದು ರಾಜ್ಯಾಧ್ಯಕ್ಷರೇ ಅವರ ನಿವಾಸಕ್ಕೆ ಭೇಟಿ ನೀಡಿದ್ದರು ಎಂದು ತಿಳಿದು ಬಂದಿದೆ.
ಈ ಮೂಲಕ ಬಿಜೆಪಿ ಅಧಿಕೃತವಾಗಿ ಚುನಾವಣೆ ಸಿದ್ಧತೆಗೆ ಇಳಿದಂತಾಗಿದ್ದು, ಯಡಿಯೂರಪ್ಪ ಮಾರ್ಗದರ್ಶನದಲ್ಲೇ ತಯಾರಿಗೆ ಇಳಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ