ಡಿ.31ರ ರಾತ್ರಿ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧ
Team Udayavani, Dec 23, 2020, 11:21 PM IST
ಚಿಕ್ಕಬಳ್ಳಾಪುರ: ಕರ್ನಾಟಕದ ಊಟಿಯೆಂದು ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಡಿ.31ರ ರಾತ್ರಿ ಪ್ರವಾಸಿಗರಿಗೆ ಪ್ರವೇಶ ನಿಷೇಧಿಲಾಗಿದೆ.
ಜಿಲ್ಲೆಯ ಪ್ರವಾಸ ತಾಣಗಳಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಪ್ರವಾಸಿಗರ ಪ್ರವೇಶಕ್ಕೆ ಅನುಕೂಲ ಕಲ್ಪಿಸಲಾಗಿದ್ದು ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್ ಬಳಸಲು ನಿರ್ದೇಶನ ನೀಡಲಾಗಿದೆ.
ಡಿ.31 ರ ರಾತ್ರಿ ಯಾವುದೇ ಪ್ರವಾಸಿಗರನ್ನು ನಂದಿ ಗಿರಿಧಾಮದಲ್ಲಿ ಉಳಿದುಕೊಳ್ಳಲು ನಿಷೇಧಿಸಲಾಗಿದೆ. ಜೊತೆಗೆ ಆನ್ಲೈನ್ ಬುಕ್ಕಿಂಗ್ ಸಹ ಸ್ಥಗಿತಗೊಳಿಸಲಾಗಿದೆ ಎಂದು ನಂದಿ ಗಿರಿಧಾಮದ ವಿಶೇಷ ಅಧಿಕಾರಿ ಗೋಪಾಲ್ ತಿಳಿಸಿದ್ದಾರೆ.
ಇದನ್ನೂ ಓದಿ:ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಯೋಜನೆಗೆ ಸಂಪುಟ ಅಸ್ತು
ಕ್ರಿಸ್ಮಸ್ ಮತ್ತು ಹೊಸವರ್ಷದ ಅಂಗವಾಗಿ ನಂದಿ ಗಿರಿಧಾಮ ಸಹಿತ ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಯಾವುದೇ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ. ಆದರೆ ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪ್ರವೇಶಕ್ಕೆ ಅನುಕೂಲ ಕಲ್ಪಿಸಲಾಗಿದೆ. ಈಗಾಗಲೇ ನಂದಿ ಗಿರಿಧಾಮದಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ನಿರ್ಲಕ್ಷ ವಹಿಸಿದ ಪ್ರವಾಸಿಗರಿಗೆ ದಂಡ ವಿಧಿಸುವ ಮೂಲಕ ಶಾಕ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಚಹಲ್ 200 ವಿಕೆಟ್ಗಳ ಕಮಾಲ್; ಈ ಸಾಧನೆಗೈದ ಮೊದಲ ಬೌಲರ್
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ