ನಂಜನಗೂಡು ಕ್ಷೇತ್ರದ ಕೈ ಟಿಕೆಟ್ ಗೊಂದಲ: ಹೆಚ್.ಸಿ.ಮಹದೇವಪ್ಪ ಮಹತ್ವದ ಹೇಳಿಕೆ

ನನ್ನ ಮಗ ಸುನೀಲ್ ಬೋಸ್ ಬೇರೆ ಅಲ್ಲ, ದರ್ಶನ್ ಧ್ರುವನಾರಾಯಣ್ ಬೇರೆಯಲ್ಲ...

Team Udayavani, Mar 15, 2023, 8:39 PM IST

H-C-MAhadev

ಮೈಸೂರು:ನಂಜನಗೂಡು ಚುನಾವಣಾ ಕಣದಿಂದ ನಾನು ಹಿಂದೆ ಸರಿದಿದ್ದೇನೆ, ನನ್ನ ಸಂಪೂರ್ಣ ಬೆಂಬಲ ದರ್ಶನ್ ಧ್ರುವನಾರಾಯಣ್ ಗೆ ಎಂದು ಮಾಜಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಬುಧವಾರ ಮಹತ್ವದ ಹೇಳಿಕೆ ನೀಡಿದ್ದಾರೆ.

ಮಾಜಿ ಸಂಸದ ದಿವಂಗತ ಧ್ರುವ ನಾರಾಯಣ್ ಪುತ್ರ ದರ್ಶನ್ ಗೆ ಸಾಂತ್ವನ ಹೇಳಿದ ಬಳಿಕ ಹೇಳಿಕೆ ನೀಡಿದ ಅವರು, ನನ್ನ ಆತ್ಮಸಾಕ್ಷಿ ಪ್ರಕಾರ ಈ ನಿರ್ಧಾರ ಮಾಡಿದ್ದೇನೆ.ಸಿದ್ದರಾಮಯ್ಯ ಅಥವಾ ಇನ್ಯಾವ ರಾಜಕೀಯ ನಾಯಕರ ಜೊತೆಯೂ ನಾನು ಈ ಬಗ್ಗೆ ಚರ್ಚೆ ಮಾಡಿಲ್ಲ.ಇವತ್ತಿನಿಂದ ನಂಜನಗೂಡು ಚುನಾವಣಾ ವಿಚಾರದಲ್ಲಿ ನಾನು ದರ್ಶನ್ ನನ್ನು ಬೆಂಬಲಿಸುತ್ತೇನೆ. ಧ್ರುವನಾರಾಯಣ್ ಜೊತೆ ನನಗೆ ಯಾವತ್ತೂ ರಾಜಕೀಯ ಭಿನ್ನಾಭಿಪ್ರಾಯ ಇರಲಿಲ್ಲ ಎಂದರು.

ನಂಜನಗೂಡು ಉಪ ಚುನಾವಣೆಯಲ್ಲಿ ನನ್ನ ಮಗ ಸುನೀಲ್ ಬೋಸ್ ಗೆ ಟಿಕೆಟ್ ಕೊಡಿ ಎಂದು ಹಲವರು ಒತ್ತಾಯಿಸಿದ್ದರು.ಆದರೆ ಕಳಲೆ ಕೇಶವಮೂರ್ತಿ ಗೆ ಹೈಕಮಾಂಡ್ ಟಿಕೆಟ್ ಕೊಟ್ಟಿತ್ತು. ನಾನು ನಂಜನಗೂಡು ಅಭಿವೃದ್ಧಿ ಮಾಡಿದ್ದು ನೋಡಿ ನನಗೆ ಅಲ್ಲಿಯೆ ಸ್ಪರ್ಧಿಸುವಂತೆ ಜನ ಕರೆದ ಕಾರಣ ನಂಜನಗೂಡು ಸ್ಪರ್ಧೆಗೆ ನಿರ್ಧರಿಸಿದ್ದೆ ಎಂದರು.

ನಾನು ಮತ್ತು ಧ್ರುವನಾರಾಯಣ್ ಇಬ್ಬರು ಅರ್ಜಿ ಹಾಕಿದ್ದು ಸತ್ಯ. ಧ್ರುವನಾರಾಯಣ್ ಅಗಲಿಕೆಯಿಂದ ದಲಿತ ಸಮುದಾಯಕ್ಕೆ ಬಹು ದೊಡ್ಡ ನಷ್ಟವಾಗಿದೆ. ಸಮಾಧಿಯ ಮೇಲೆ ರಾಜಕೀಯ ಮಾಡುವ ವ್ಯಕ್ತಿ ನಾನಲ್ಲ. ಸಮಾಧಿ ಮೇಲೆ ರಾಜಕೀಯ ಬೆಳೆ ತೆಗೆಯುವ ವ್ಯಕ್ಯಿತ್ವ ನನ್ನದ್ದಲ್ಲ. ಅಧಿಕಾರದ ರಾಜಕಾರಣಕ್ಕೆ ಯಾವತ್ತೂ ಅಂಟಿ ಕುಳಿತಿಲ್ಲ. ವ್ಯಕ್ತಿಗಿಂತ ಅಧಿಕಾರ ಅಂತಸ್ತು ಮುಖ್ಯವಲ್ಲ.ನನ್ನ ಮಗ ಸುನೀಲ್ ಬೋಸ್ ಬೇರೆ ಅಲ್ಲ, ದರ್ಶನ್ ಧ್ರುವನಾರಾಯಣ್ ಬೇರೆಯಲ್ಲ ಎಂದರು.

ದರ್ಶನ್ ಧ್ರುವನಾರಾಯಣ್ ಜೊತೆ ನಿಲ್ಲುವುದು ನನ್ನ ಕರ್ತವ್ಯ. ಸಾವಿನಲ್ಲೂ ಗಳ ಇರಿಯುವ ಕೆಲಸ ಮಾಡಬಾರದು. ಕೆಲವರು ಈ ಕೆಲಸ ಮಾಡಿದ್ದಕ್ಕೆ ನನಗೆ ಬೇಸರವಿದೆ ಎಂದರು.

ಬಿ. ರಾಚಯ್ಯನವರ ಶಿಷ್ಯನಾಗಿ 40 ವರ್ಷಗಳ ಸಾರ್ವಜನಿಕ ಬದುಕನ್ನು ಪೂರೈಸಿದ ಈ ಸಂದರ್ಭದಲ್ಲಿ ನಮ್ಮ ಗುರುಗಳು ಮತ್ತು ಈ ರಾಜ್ಯದ ದಲಿತ ಸಂಘಟನೆಗಳು ಹೇಳಿಕೊಟ್ಟ ಪಾಠವನ್ನು ಅಕ್ಷರಶಃ ಪಾಲಿಸಿದ್ದೇನೆ. ನನ್ನ ದೈನಂದಿನ ಓದು ಬರಹದ ಜೊತೆಗೆ ನನ್ನದೇ ಆದ ಕೆಲವು ಬದುಕಿನ ಅನುಭವಗಳ ಮೂಲಕ ರಾಜ್ಯದ ಅಭಿವೃದ್ಧಿಗಾಗಿ ಮತ್ತು ಸಾಮಾಜಿಕ ನ್ಯಾಯದ ಈಡೇರಿಕೆಗಾಗಿ ಪ್ರಾಮಾಣಿಕವಾಗಿ ದುಡಿದಿದ್ದೇನೆ. ಇದರ ಪರಿಣಾಮವೇ ಕರ್ನಾಟಕದಲ್ಲಿ 40 ಸಾವಿರ ಕಿಲೋಮೀಟರ್ ರಸ್ತೆಗಳ ನಿರ್ಮಾಣ ಹಾಗೂ ಶೋಷಿತ ಸಮುದಾಯಗಳ ಪರವಾಗಿ ಮಹತ್ವದ ಕಾಯ್ದೆಗಳನ್ನು ಜಾರಿಗೊಳಿಸುವುದಕ್ಕೆ ನನಗೆ ಸಾಧ್ಯವಾಗಿದೆ. ನನಗೆ ನೆನಪಿರುವಂತೆ ನಾನು ಯಾರನ್ನೂ ದ್ವೇಷ ಮಾಡಿಲ್ಲ ಮತ್ತು ಮಾಡುವುದೂ ಇಲ್ಲ. ಒಬ್ಬರನ್ನು ವೈಯಕ್ತಿಕವಾಗಿ ನಿಂದಿಸುವುದಾಗಲೀ ಅಥವಾ ತೇಜೋವಧೆ ಮಾಡುವ ಕೆಲಸವನ್ನಾಗಲೀ ನಾನು ಮಾಡಿಲ್ಲ. ಇದು ನನ್ನನ್ನು ಸರಿಯಾಗಿ ಬಲ್ಲ ಎಲ್ಲರಿಗೂ ಗೊತ್ತು ಎಂದು ನೋವು ಹೊರ ಹಾಕಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.