ನಾರದ ಕೇಸ್: ಟಿಎಂಸಿ ನಾಲ್ವರು ಮುಖಂಡರಿಗೆ ಗೃಹಬಂಧನ, ವಿಚಾರಣೆ ವಿಸ್ತೃತ ಪೀಠಕ್ಕೆ: ಹೈಕೋರ್ಟ್
ಮುಖರ್ಜಿ, ಶಾಸಕ ಮದನ್ ಮಿತ್ರ, ಮಾಜಿ ಮೇಯರ್ ಸೋವನ್ ಚಟರ್ಜಿಯನ್ನು ಬಂಧಿಸಿದ್ದರು.
Team Udayavani, May 21, 2021, 12:50 PM IST
ಕೋಲ್ಕತಾ: ಪ್ರಮುಖ ಬೆಳವಣಿಗೆಯಲ್ಲಿ ನಾರದ ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿಸಲ್ಪಟ್ಟ ಟಿಎಂಸಿಯ ನಾಲ್ವರು ಮುಖಂಡರನ್ನು ಜೈಲುವಾಸದ ಬದಲು ಗೃಹಬಂಧನದಲ್ಲಿ ಇರಿಸುವಂತೆ ಕೋಲ್ಕತಾ ಹೈಕೋರ್ಟ್ ಶುಕ್ರವಾರ(ಮೇ 21) ಆದೇಶ ನೀಡಿದೆ.
ಇದನ್ನೂ ಓದಿ:10 ಆಕ್ಸಿಜನ್ ಸಿಲಿಂಡರ್ ಗಳನ್ನು ಕೊಡುಗೆಯಾಗಿ ನೀಡಿದ ಶಾಸಕ ಮಂಜುನಾಥ್ ಮತ್ತು ಸ್ನೇಹಜೀವಿ ಬಳಗ
ನಾರದ ಸ್ಟಿಂಗ್ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್, ವಿಸ್ತೃತಪೀಠಕ್ಕೆ ವರ್ಗಾಯಿಸಿದೆ. ಕೋಲ್ಕತಾ ಹೈಕೋರ್ಟ್ ನೀಡಿರುವ ಈ ತೀರ್ಪು ಇತ್ತೀಚೆಗೆ ಸುಪ್ರೀಂಕೋರ್ಟ್ ಗೌತಮ್ ನವ್ಲಾಖಾ ಪ್ರಕರಣದ ಆದೇಶದಂತೆ ಇದ್ದಿರುವುದಾಗಿ ವರದಿ ಹೇಳಿದೆ.
ನಾರದ ಸ್ಟಿಂಗ್ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಹೈಕೋರ್ಟ್ ಆದೇಶದಂತೆ ತೃಣಮೂಲ ಕಾಂಗ್ರೆಸ್ ಮುಖಂಡರಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಶಾಸಕ ಮದನ್ ಮಿತ್ರ, ಮಾಜಿ ಮೇಯರ್ ಸೋವನ್ ಚಟರ್ಜಿಯನ್ನು ಬಂಧಿಸಿದ್ದರು.
2014ರಲ್ಲಿ ನಾರದ ನ್ಯೂಸ್ ನ ಪತ್ರಕರ್ತ ಮ್ಯಾಥ್ಯೂ ಸಾಮ್ಯುಯೆಲ್ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಟಿಎಂಸಿಯ ಸಚಿವರುಗಳು, ಸಂಸದರು ಮತ್ತು ಶಾಸಕರು ಲಂಚಸ್ವೀಕರಿಸಿರುವುದು ದಾಖಲಾಗಿದ್ದು, ನಂತರ ಅದು ಪೋರ್ಟಲ್ ನಲ್ಲಿ ಪ್ರಕಟವಾಗುವ ಮೂಲಕ ಬಹಿರಂಗಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
MUST WATCH
ಹೊಸ ಸೇರ್ಪಡೆ
Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ