ನಾರದ ಸ್ಟಿಂಗ್ ಆಪರೇಶನ್ ಕೇಸ್: ಜಾಮೀನು ಅರ್ಜಿ ವಿಚಾರಣೆ ಮೇ 28ಕ್ಕೆ ಮುಂದೂಡಿದ ಹೈಕೋರ್ಟ್
ವಿಸ್ತೃತ ಪೀಠದಲ್ಲಿರುವುದರಿಂದ ಅರ್ಜಿಯನ್ನು ವಾಪಸ್ ಪಡೆದು, ಹೈಕೋರ್ಟ್ ನಲ್ಲಿಯೇ ಆಕ್ಷೇಪ ಎತ್ತುವಂತೆ ಸುಪ್ರೀಂ ಸೂಚಿಸಿತ್ತು.
Team Udayavani, May 27, 2021, 5:50 PM IST
ಕೋಲ್ಕತಾ: ನಾರದ ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ಆರೋಪಿಗಳಾಗಿರುವ ಪಶ್ಚಿಮಬಂಗಾಳದ ನಾಲ್ವರು ಮುಖಂಡರುಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋಲ್ಕತಾ ಹೈಕೋರ್ಟ್ ಶುಕ್ರವಾರ(ಮೇ 28) 12ಗಂಟೆಗೆ ಮುಂದೂಡಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಯೋಗೇಶ್ವರ್ ಒಬ್ಬ 420, ಆತನನ್ನು ಸಂಪುಟದಿಂದ ವಜಾ ಮಾಡಿ ಬಂಧಿಸಬೇಕು: ರೇಣುಕಾಚಾರ್ಯ ವಾಗ್ದಾಳಿ
ನಾರದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ತೃಣಮೂಲ ಕಾಂಗ್ರೆಸ್ ನ ಇಬ್ಬರು ಸಚಿವರು, ಶಾಸಕ ಹಾಗೂ ಮಾಜಿ ಮೇಯರ್ ಅನ್ನು ಗೃಹ ಬಂಧನದಲ್ಲಿ ಇರಿಸುವಂತೆ ಮೇ 21ರಂದು ಹೈಕೋರ್ಟ್ ಆದೇಶ ನೀಡಿತ್ತು.
ಟಿಎಂಸಿ ನಾಲ್ವರು ಮುಖಂಡರಿಗೆ ಜಾಮೀನು ನೀಡಿರುವ ಪ್ರಕರಣಕ್ಕೆ ತಡೆ ನೀಡಬೇಕೆಂಬ ಸಿಬಿಐ ಮೇಲ್ಮನವಿಯನ್ನು ಐವರು ನ್ಯಾಯಾಧೀಶರನ್ನೊಳಗೊಂಡ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಸಿಜೆಐ ಜಸ್ಟೀಸ್ ರಾಜೇಶ್ ಬಿಂದಾಲ್ ಆದೇಶ ನೀಡಿದ್ದರು.
ತೃಣಮೂಲ ಕಾಂಗ್ರೆಸ್ ನ ನಾಲ್ವರು ಮುಖಂಡರನ್ನು ಗೃಹಬಂಧನದಲ್ಲಿ ಇರಿಸಬೇಕೆಂಬ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆದರೆ ಪ್ರಕರಣ ಈಗಾಗಲೇ ಹೈಕೋರ್ಟ್ ವಿಸ್ತೃತ ಪೀಠದಲ್ಲಿರುವುದರಿಂದ ಅರ್ಜಿಯನ್ನು ವಾಪಸ್ ಪಡೆದು, ಹೈಕೋರ್ಟ್ ನಲ್ಲಿಯೇ ತಮ್ಮ ಆಕ್ಷೇಪ ಎತ್ತುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ