ಪಠ್ಯ ಹಿಂಪಡೆಯದಿದ್ದರೆ ಪರಿಸ್ಥಿತಿ ಕೈಮೀರುತ್ತದೆ: ನಾರಾಯಣ ಗೌಡ ಎಚ್ಚರಿಕೆ
ನಾಡಿನಲ್ಲಿ ಹೊಸದೊಂದು ಸಂಘರ್ಷದ ವಾತಾವರಣ, ಸರ್ಕಾರ ಉಳಿಯುವುದಿಲ್ಲ
Team Udayavani, Jun 17, 2022, 5:13 PM IST
ಬೆಂಗಳೂರು : ಒಂದು ವೇಳೆ ಸರ್ಕಾರ ಕೂಡಲೇ ಪರಿಷ್ಕೃತ ಪಠ್ಯಗಳನ್ನು ಹಿಂದಕ್ಕೆ ಪಡೆಯದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವುದು ಖಚಿತ. ಇಡೀ ರಾಜ್ಯದ ಶಾಂತಿ ಕದಡಿ ಹೋಗುತ್ತದೆ. ಅದರ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ. ಜನರನ್ನು ಎದುರು ಹಾಕಿಕೊಂಡ ಸರ್ಕಾರಗಳು ಉಳಿಯುವುದಿಲ್ಲ. ಇದನ್ನು ಮರೆಯಬೇಡಿ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಅವರು ಸರಣಿ ಟ್ವೀಟ್ ಗಳನ್ನು ಮಾಡಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದ ಅಸ್ಮಿತೆಗೆ ಧಕ್ಕೆ ತಂದಿರುವ ಪರಿಷ್ಕೃತ ಪಠ್ಯವನ್ನು ಹಿಂದಕ್ಕೆ ಪಡೆಯಲು ಮೇಲಿಂದ ಮೇಲೆ ಗೌರವಾನ್ವಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ವಿನಂತಿಸಿದ್ದೇನೆ. ಆದರೆ ಅವರು ಯಾರದೋ ಒತ್ತಡದಿಂದ ಸುಮ್ಮನಿದ್ದಾರೆ ಎನಿಸುತ್ತಿದೆ. ಇನ್ನು ತಡಮಾಡುವುದು ಸರಿಯಲ್ಲ. ಕೂಡಲೇ ಪರಿಷ್ಕೃತ ಪಠ್ಯ ಹಿಂದಕ್ಕೆ ಪಡೆಯಿರಿ ಎಂದು ಆಗ್ರಹಿಸಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಹಲವಾರು ಮಂದಿ ಮಹಾಮಹಿಮರಿಗೆ, ದಾರ್ಶನಿಕರಿಗೆ ಅಪಮಾನಗಳಾಗಿವೆ. ಮಕ್ಕಳಿಗೆ ನಾವು ಈ ವಿಷವುಣಿಸುವುದು ಬೇಡ. ಸ್ವತಃ ಶಿಕ್ಷಣ ಸಚಿವರೇ ತಪ್ಪುಗಳು ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಆಗಿರುವುದು ತಪ್ಪುಗಳಲ್ಲ, ಪ್ರಮಾದಗಳು. ಈ ಪಠ್ಯ ಬೇಡವೇ ಬೇಡ ಎಂದು ಟ್ವೀಟ್ ಮಾಡಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗಿರುವ ವಿಕೃತಿಗಳ ವಿರುದ್ಧ ಇಡೀ ನಾಡಿನ ಸಾಹಿತಿಗಳು, ಶಿಕ್ಷಣ ತಜ್ಞರು, ಮಠಾಧೀಶರು, ಬುದ್ಧಿಜೀವಿಗಳು, ಹೋರಾಟಗಾರರು ಧ್ವನಿ ಎತ್ತಿದ್ದಾರೆ. ಆಗಿರುವ ಪ್ರಮಾದಗಳನ್ನು ಎತ್ತಿ ತೋರಿಸಿದ್ದಾರೆ. ಇನ್ನು ತಡ ಮಾಡುವುದರಲ್ಲಿ ಅರ್ಥವಿಲ್ಲ. ಪಠ್ಯ ಹಿಂದಕ್ಕೆ ಪಡೆಯಲಿ ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಪರಿಷ್ಕೃತ ಪಠ್ಯವನ್ನು ಹಿಂದಕ್ಕೆ ಪಡೆಯಲು ಮನವಿ ಮಾಡಿದ್ದೆ, ಈ ಕುರಿತು ಪರಿಶೀಲನೆ ನಡೆಸುವ ಭರವಸೆ ನೀಡಿದ್ದರು. ಆದರೆ ಕಾಣದ ಶಕ್ತಿಗಳು ಅವರ ಕೈಗಳನ್ನು ಕಟ್ಟಿಹಾಕಿವೆಯೇನೋ ಅನಿಸುತ್ತದೆ. ಸಮಸ್ಯೆ ಬಿಗಡಾಯಿಸುವುದಕ್ಕೆ ಮುನ್ನ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿಗಳು ಜನರ ಅಹವಾಲಿಗೆ ಕಿವಿಗೊಡಬೇಕು, ಪ್ರಜಾಪ್ರಭುತ್ವದಲ್ಲಿ ಜನರೇ ದೊರೆಗಳು. ಸಂವಿಧಾನೇತರ ಶಕ್ತಿಗಳು ಸರ್ಕಾರವನ್ನು ನಿಯಂತ್ರಿಸಬಾರದು. ನಾಡಿನಾದ್ಯಂತ ಪ್ರಜ್ಞಾವಂತ ಜನರು ಬೀದಿಗಿಳಿದು ಹೋರಾಡುತ್ತಿದ್ದಾರೆ. ಅವರ ಧ್ವನಿಯನ್ನು ಸರ್ಕಾರ ಗುರುತಿಸಬೇಕು. ಮಾನ್ಯತೆ ನೀಡಬೇಕು ಎಂದಿದ್ದಾರೆ.
ಬಸವಣ್ಣ, ಅಲ್ಲಮಪ್ರಭು, ವಾಲ್ಮೀಕಿ, ಕನಕದಾಸ, ಪುರಂದರದಾಸ, ಶಂಕರಾಚಾರ್ಯ, ಶಿಶುನಾಳ ಶರೀಫ, ಕುವೆಂಪು ಮೊದಲುಗೊಂಡು ಕರ್ನಾಟಕದ ದಾರ್ಶನಿಕರು, ಸಂತರಿಗೆ ಪರಿಷ್ಕೃತ ಪಠ್ಯದಲ್ಲಿ ಅಪಮಾನಿಸಲಾಗಿದೆ. ಕನ್ನಡತನ, ಕನ್ನಡಾಭಿಮಾನಕ್ಕೆ ಕುತ್ತು ತರಲಾಗಿದೆ. ಇದನ್ನು ಒಪ್ಪಿಕೊಳ್ಳುವುದು ಸಾಧ್ಯವೇ ಇಲ್ಲ ಎಂದಿದ್ದಾರೆ.
ದೇಶ ಇಂದು ಹಲವಾರು ಬಗೆಯ ಸಂಕಟ, ಸಂಘರ್ಷಗಳಲ್ಲಿ ಬೆಂದುಹೋಗುತ್ತಿದೆ. ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ಸರ್ಕಾರ ನಮ್ಮ ನಾಡಿನಲ್ಲಿ ಹೊಸದೊಂದು ಸಂಘರ್ಷದ ವಾತಾವರಣವನ್ನು ಮೈಮೇಲೆ ಎಳೆದುಕೊಳ್ಳುತ್ತಿದೆ. ಸರ್ಕಾರದ ಒಣಹಟ, ಪ್ರತಿಷ್ಠೆಗೆ ರಾಜ್ಯ ಬೇಯುವುದು ಬೇಡ ಎಂದು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ರಾಜ್ಯದ ಸರ್ವ ಧರ್ಮ, ಜಾತಿ, ಸಮುದಾಯಗಳ ಜನರು ಅನ್ಯೋನ್ಯವಾಗಿ ಶಾಂತಿಯಿಂದ ಬದುಕುತ್ತಿದ್ದಾರೆ. ಅವರ ಸಮುದಾಯಗಳ ಮಹಾಮಹಿಮರಿಗೆ ಅಪಮಾನವೆಸಗುವ ಮೂಲಕ ಸಂಘರ್ಷದ ವಾತಾವರಣ ನಿರ್ಮಿಸಲಾಗಿದೆ. ಸರ್ಕಾರ ವಿವೇಕದಿಂದ ವರ್ತಿಸಿ ಪರಿಷ್ಕೃತ ಪಠ್ಯ ಹಿಂದಕ್ಕೆ ಪಡೆಯಲಿ ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ
PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ
MUST WATCH
ಹೊಸ ಸೇರ್ಪಡೆ
Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಶುಕ್ತಿಜಾ
KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ
Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್
Rank: ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ