ರಾಷ್ಟ್ರಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ಭಾಟಿಯಾ ನಿಧನ
ಜಾನೆ ಭೀ ದೋ ಯಾರೋ, 36 ಚೌರಂಗಿ ಲೇನ್, ದ್ರೋಹಕಾಲ್ ಸಿನಿಮಾಗಳಿಗೆ ಸಂಗೀತ ನಿರ್ದೇಶಿಸಿದ್ದರು.
Team Udayavani, May 7, 2021, 12:17 PM IST
ಮುಂಬಯಿ: ಬಾಲಿವುಡ್ ನ ಹಿರಿಯ ಸಂಗೀತ ನಿರ್ದೇಶಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ ವನ್ರಾಜ್ ಭಾಟಿಯಾ(93) ಶುಕ್ರವಾರ(ಮೇ 07)ದಕ್ಷಿಣ ಮುಂಬೈನ ನಿವಾಸದಲ್ಲಿ ವಿಧಿವಶರಾಗಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಲೋಕ ಕಲ್ಯಾಣಾರ್ಥಕ್ಕಾಗಿ ಚಂಡಿಕಾ ದುರ್ಗಾಪರಮೇಶ್ವರಿ ದೇಗುಲದಲ್ಲಿ ಧನ್ವಂತರಿ ಜಪ
ಭಾಟಿಯಾ ಅವರ ಅದ್ಭುತವಾದ ಸಂಗೀತದಿಂದ ಭಾರತೀಯ ಹೊಸ ಅಲೆಯ ಸಿನಿಮಾಗಳಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಟೆಲಿವಿಷನ್ ಸಿನಿಮಾ ತಮಸ್ (1988)ಗಾಗಿ ಭಾಟಿಯಾ ಅವರು ಅತ್ಯುತ್ತಮ ಸಂಗೀತ ನಿರ್ದೇಶನಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದಿದ್ದರು. 1989ರಲ್ಲಿ ಸಂಗೀತ್ ನಾಟಕ್ ಅಕಾಡೆಮಿ ಪ್ರಶಸ್ತಿ ಹಾಗೂ 2012ರಲ್ಲಿ ದೇಶದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.
ರಾಷ್ಟ್ರಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ಭಾಟಿಯಾ ಅವರ ನಿಧನಕ್ಕೆ ಬಾಲಿವುಡ್ ನ ಗಣ್ಯರು, ನಟ, ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಸ್ಮೃತಿ ಇರಾನಿ ಕೂಡಾ ವನ್ರಾಜ್ ಭಾಟಿಯಾ ಅವರ ನಿಧನಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ.
ವನ್ರಾಜ್ ಭಾಟಿಯಾ ಅವರು ಮಂಥನ್, ಭೂಮಿಕಾ, ಜಾನೆ ಭೀ ದೋ ಯಾರೋ, 36 ಚೌರಂಗಿ ಲೇನ್, ದ್ರೋಹಕಾಲ್ ಸಿನಿಮಾಗಳಿಗೆ ಸಂಗೀತ ನಿರ್ದೇಶಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್