ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಸಂಭ್ರಮಕ್ಕೆ ಚಾಲನೆ
Team Udayavani, Oct 7, 2021, 1:04 PM IST
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಡಗರ ಸಂಭ್ರಮದ ಮಂಗಳೂರು ದಸರಾಗೆ ಗುರುವಾರ ಸಂಭ್ರದ ಚಾಲನೆ ದೊರಕಿದೆ.
ಬೆಳಗ್ಗೆ 9ಕ್ಕೆ ಗುರುಪ್ರಾರ್ಥನೆ ಯೊಂದಿಗೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ ನಡೆಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಮಾರಂಭದಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಗಣ್ಯರು, ನೂರಾರು ಭಕ್ತರು ಉಪಸ್ಥಿತರಿದ್ದರು.
ಅ. 7ರಿಂದ 16ರವರೆಗೆ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನಪೂಜಾರಿ ಅವರ ಮಾರ್ಗದರ್ಶನದಂತೆ “ನಮ್ಮ ದಸರಾ- ನಮ್ಮ ಸುರಕ್ಷೆ’ಘೋಷ ವಾಕ್ಯದಡಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗ ನಡೆಯಲಿದೆ.
ದಸರಾ ಹಿನ್ನೆಲೆಯಲ್ಲಿ ನಗರಾದ್ಯಂತ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ.ಕುದ್ರೋಳಿ-ಮಣ್ಣಗುಡ್ಡೆ -ಲೇಡಿಹಿಲ್ ವೃತ್ತ-ಲಾಲ್ಬಾಗ್
ಜಂಕ್ಷನ್- ಪಿವಿಎಸ್-ನವಭಾರತ್ ವೃತ್ತ- ಹಂಪನಕಟ್ಟೆ- ಮೋಹಿನಿ ವಿಲಾಸ-ರಥಬೀದಿ-ನ್ಯೂಚಿತ್ರ ಚಿತ್ರಮಂದಿರ-ಕುದ್ರೋಳಿ ದೇವಸ್ಥಾನ ಸಹಿತ ಸುಮಾರು 6 ಕಿ.ಮೀ. ನಷ್ಟು ಉದ್ದದ ರಸ್ತೆಗೆ 11 ದಿನಗಳ ಅವಧಿಗೆ ಮನಪಾದಿಂದ ವಿಶೇಷ ದೀಪಾಲಂಕಾರ ಮಾಡಲಾಗಿದೆ. ಅದೇ
ರೀತಿ, ಮಂಗಳಾದೇವಿ ದೇವಸ್ಥಾನದ ದಸರಾ ಉತ್ಸವ ಹಿನ್ನೆಯಲ್ಲಿಯೂ ಸುತ್ತಮುತ್ತ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಕೆಲವೊಂದು ಖಾಸಗಿ, ಸರಕಾರಿ ಕಟ್ಟಡಗಳಲ್ಲಿಯೂದೀಪಾಲಂಕಾರ ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ