ಮಾಹಿತಿ ಸೋರಿಕೆ ಪ್ರಕರಣ: ಬಂಧಿತ ನೌಕಾಪಡೆ ಅಧಿಕಾರಿಗೆ ಜಾಮೀನು
Team Udayavani, Nov 22, 2021, 1:37 PM IST
ನವದೆಹಲಿ: ನೌಕಾಪಡೆಯ ಉಪಕರಣಗಳ ನಿರ್ವಹಣೆ ಮತ್ತು ಖರೀದಿಯ ಗೌಪ್ಯ ಮಾಹಿತಿ ಸೋರಿಕೆ ಆರೋಪದಲ್ಲಿ ಸಿಬಿಐನಿಂದ ಬಂಧಿತರಾಗಿರುವ ನೌಕಾಪಡೆಯ ಕಮಾಂಡರ್ ಅಜಿತ್ ಕುಮಾರ್ ಪಾಂಡೆ ಅವರಿಗೆ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.
ಸಿಬಿಐ ಅಧಿಕೃತ ರಹಸ್ಯ ಕಾಯಿದೆಯ ಅಡಿಯಲ್ಲಿ ತನಿಖೆಗೆ ಸಂಬಂಧಿಸಿದಂತೆ ಪಾಂಡೆ ಮತ್ತು ಇತರರ ವಿರುದ್ಧ “ಅಪೂರ್ಣ ಚಾರ್ಜ್ ಶೀಟ್” ಅನ್ನು ಸಲ್ಲಿಸಿದ ಹಿನ್ನಲೆಯಲ್ಲಿ ಜಾಮೀನು ದೊರಕಿದೆ. ಪಾಂಡೆ ಸೆಪ್ಟೆಂಬರ್ 3 ರಂದು ಬಂಧನಕ್ಕೊಳಗಾಗಿದ್ದರು.
ನ್ಯಾಯಾಲಯದ ಮುಂದೆ ಸಲ್ಲಿಸಲಾದ ಚಾರ್ಜ್ ಶೀಟ್ ಅಪೂರ್ಣವಾಗಿದ್ದು, ಅಧಿಕೃತ ರಹಸ್ಯ ಕಾಯಿದೆ (ಒಎಸ್ಎ) ಅಡಿಯಲ್ಲಿ ನಡೆಸಲಾಗುತ್ತಿರುವ ತನಿಖೆಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ, ಆದರೆ ಈ ಪ್ರಕರಣದಲ್ಲಿಯೇ ತನಿಖೆ ನಡೆಸಲಾಗುತ್ತಿದೆ ಎಂದು ವಿಶೇಷ ನ್ಯಾಯಾಧೀಶ ಅನುರಾಧಾ ಶುಕ್ಲಾ ಭಾರದ್ವಾಜ್ ಆದೇಶದಲ್ಲಿ ಹೇಳಿದ್ದಾರೆ.
ಇದೇ ಆಧಾರದ ಮೇಲೆ ನೌಕಾಪಡೆಯ ನಿವೃತ್ತ ಅಧಿಕಾರಿಗಳಾದ ಕಮಾಂಡರ್ ರಣದೀಪ್ ಸಿಂಗ್ ಮತ್ತು ಕಮಾಂಡರ್ ಸತ್ವಿಂದರ್ ಜೀತ್ ಸಿಂಗ್ ಸೇರಿದಂತೆ ಇತರ ಆರೋಪಿಗಳನ್ನು ನ್ಯಾಯಾಲಯ ಈಗಾಗಲೇ ಬಿಡುಗಡೆ ಮಾಡಿದೆ.
ತನಿಖಾ ಸಂಸ್ಥೆಯು 60 ದಿನಗಳು ಅಥವಾ 90 ದಿನಗಳ ಅವಧಿಯೊಳಗೆ ಆರೋಪ ಪಟ್ಟಿಯನ್ನು ಸಲ್ಲಿಸದಿದ್ದಲ್ಲಿ ಆರೋಪಿಯು ಡೀಫಾಲ್ಟ್ ಜಾಮೀನಿಗೆ ಅರ್ಹನಾಗುತ್ತಾನೆ.
ನೌಕಾಪಡೆಯ ನಿವೃತ್ತ ಅಧಿಕಾರಿಗಳಾದ ಕಮೋಡೋರ್ ರಣದೀಪ್ ಸಿಂಗ್ ಮತ್ತು ಕಮಾಂಡರ್ ಸತ್ವಿಂದರ್ ಜೀತ್ ಸಿಂಗ್ ಅವರು ಸೆಪ್ಟೆಂಬರ್ 2 ರಂದು ನೌಕಾಪಡೆಯಲ್ಲಿ ನಡೆದ ಸಭೆಗೆ ಸಂಬಂಧಿಸಿದ ನಿರ್ಣಾಯಕ ವಿವರಗಳನ್ನು ಹಂಚಿಕೊಳ್ಳಲು ಹೊರಟಿದ್ದಾರೆ ಎಂಬ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಸಿಬಿಐ ಇಬ್ಬರನ್ನೂ ಒಂದೇ ದಿನ ಬಂಧಿಸಿತ್ತು.
ಹೈದರಾಬಾದ್ ಮೂಲದ ಕಂಪನಿ ಅಲೆನ್ ರೀನ್ಫೋರ್ಸ್ಡ್ ಪ್ಲಾಸ್ಟಿಕ್ ಲಿಮಿಟೆಡ್ನಿಂದ ವ್ಯವಹಾರದಲ್ಲಿ ಲಂಚ ಪಡೆದು ನೌಕಾ ಉಪಕರಣಗಳ ಸಂಗ್ರಹಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದ ಗೌಪ್ಯ ಮಾಹಿತಿಯ ಸೋರಿಕೆಯ ಆರೋಪಗಳ ಬಗ್ಗೆ ಸಂಸ್ಥೆ ತನಿಖೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ