ರಾಮನ ಬಗ್ಗೆ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಜಿತನ್ ರಾಮ್ ಮಾಂಝಿ
ಮರ್ಯಾದಾ ಪುರುಷೋತ್ತಮ ಕಾಲ್ಪನಿಕ ಪಾತ್ರ ಎಂದು ಬಿಜೆಪಿಗೆ ಮುಜುಗರ ತಂದ ಮಿತ್ರ ಪಕ್ಷದ ನಾಯಕ
Team Udayavani, Apr 15, 2022, 9:18 PM IST
ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಮತ್ತೊಮ್ಮೆ ಭಗವಾನ್ ರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ-ಜೆಡಿಯು ಸರ್ಕಾರದ ಮಿತ್ರ ಪಕ್ಷ ಹಿಂದೂಸ್ತಾನಿ ಅವಾಮ್ ಮೋರ್ಚಾ ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಅವರು ಭಗವಾನ್ ರಾಮನನ್ನು ನಂಬುವುದಿಲ್ಲ ಎಂದು ಹೇಳಿದ್ದಾರೆ. ಅವರು ತನ್ನನ್ನು ಮಾತಾ ಶಬರಿಯ ವಂಶಸ್ಥನೆಂದು ಬಣ್ಣಿಸಿದ್ದು, ಆದರೆ ಮರ್ಯಾದಾ ಪುರುಷೋತ್ತಮನನ್ನು ಕಾಲ್ಪನಿಕ ಪಾತ್ರವೆಂದು ಪರಿಗಣಿಸುವುದಾಗಿ ಹೇಳಿದ್ದಾರೆ.
ಗುರುವಾರದ ಕಾರ್ಯಕ್ರಮವೊಂದರಲ್ಲಿ ಮಾಂಝಿ ಅವರು ಅಸ್ಪೃಶ್ಯತೆ ಸಮಸ್ಯೆ ಕುರಿತು ಮಾತನಾಡುತ್ತಾ, ಭಗವಾನ್ ರಾಮನ ಕುರಿತು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಮನನ್ನು ನಂಬುವವರು , ರಾಮನು ಶಬರಿಯು ನೀಡಿದ ರುಚಿಯಾದ ಹಣ್ಣನ್ನು ತಿಂದಿದ್ದಾನೆ. ದಲಿತರು ಕಚ್ಚಿದ ಎಂಜಲು ಹಣ್ಣನ್ನು ನೀವು ತಿನ್ನುವುದಿಲ್ಲ. ಆದರೆ ನಾವು ಮುಟ್ಟಿದ್ದನ್ನು ತಿನ್ನುತ್ತೀರಿ ಎಂದು ಪ್ರಶ್ನಿಸಿದರು. ದೊಡ್ಡವರು ಅಧಿಕಾರಕ್ಕಾಗಿ ಜನರನ್ನು ಒಡೆದಿದ್ದಾರೆ ಎಂದರು.
“ನಾವು ತುಳಿದಾಸ್ ಜಿಯನ್ನು ನಂಬುತ್ತೇವೆ, ನಾವು ವಾಲ್ಮೀಕಿಯನ್ನು ನಂಬುತ್ತೇವೆ. ಆದರೆ ನಾವು ರಾಮನನ್ನು ನಂಬುವುದಿಲ್ಲ ಎಂದು ಹೇಳಿದ್ದಾರೆ.
ಮಾಂಝಿ ಕಳೆದ ವರ್ಷವೂ ಇಂತಹ ವಿವಾದಾತ್ಮಕ ಹೇಳಿಕೆ ನೀಡಿದ್ದರು ಮತ್ತು ರಾಮನನ್ನು ದೇವರೆಂದು ಪರಿಗಣಿಸುವುದಿಲ್ಲ ಎಂದು ಹೇಳಿದ್ದರು. ಭಗವಾನ್ ರಾಮನನ್ನು ಕಾಲ್ಪನಿಕ ಪಾತ್ರ ಎಂದು ಬಣ್ಣಿಸಿರುವ ಮಾಂಝಿ, ತಾನು ಎಂದಿಗೂ ಆತನನ್ನು ಪೂಜಿಸುವುದಿಲ್ಲ ಮತ್ತು ಆತನನ್ನು ಪೂಜಿಸದಂತೆ ತನ್ನ ಬೆಂಬಲಿಗರನ್ನು ಕೇಳಿಕೊಂಡಿದ್ದೇನೆ ಎಂದು ಹೇಳಿದ್ದರು. ಬ್ರಾಹ್ಮಣರ ಬಗ್ಗೆಯೂ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು, ಸಾಕಷ್ಟು ರಾಜಕೀಯ ಆಕ್ರೋಶಗಳ ನಂತರ ಮಾಂಝಿ ಬ್ರಾಹ್ಮಣರಿಗೆ ಔತಣಕೂಟವನ್ನು ನೀಡುವ ಮೂಲಕ ಹಾನಿ ನಿಯಂತ್ರಣಕ್ಕೆ ಪ್ರಯತ್ನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ