ಆಡಳಿತದಲ್ಲಿ ತಂತ್ರಜ್ಞಾನ ಅಗತ್ಯ: ಸಚಿವ ಕೋಟ
Team Udayavani, Jan 15, 2023, 12:07 AM IST
ಬೆಂಗಳೂರು: ಆಡಳಿತದಲ್ಲಿ ತಂತ್ರಜ್ಞಾನ ಇಂದಿನ ಅಗತ್ಯ ಮತ್ತು ಅನಿವಾರ್ಯ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.
ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಂತ್ರಜ್ಞಾನ, ತಂತ್ರಾಂಶಗಳಿಲ್ಲದೆ ಫಲಾನುಭವಿಗಳಿಗೆ ಸಮರ್ಪಕವಾಗಿ ಸೌಲಭ್ಯ ಒದಗಿಸುವುದು ಕಷ್ಟ ಸಾಧ್ಯ. ನಿಗಮಗಳು ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳಬೇಕು ಹಾಗೂ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರ ಸರಕಾರದ ಉದ್ದೇಶ ಸಾರ್ಥಕ ಎಂದು ಹೇಳಿದರು.
ಕಳೆದ 4 ವರ್ಷಗಳಿಂದ ವಿವಿಧ ಕಾರಣಗಳಿಂದ ಗಂಗಾ ಕಲ್ಯಾಣ ಕೊಳವೆಬಾವಿ ಕೊರೆಯಲಾಗಿಲ್ಲ. ಪ್ರಸ್ತುತ ಎಲ್ಲ ಅಡೆತಡೆಗಳು ಬಗೆಹರಿದಿದ್ದು ಪ್ರಸಕ್ತ ಸಾಲಿನಲ್ಲಿ ಫಲಾನುಭವಿಗಳಿಗೇ ನೇರ ನಗದು ವರ್ಗಾವಣೆ ಯೋಜನೆಯಡಿ ರಾಜ್ಯಾ ದ್ಯಂತ 17 ಸಾವಿರಕ್ಕೂ ಹೆಚ್ಚು ಕೊಳವೆಬಾವಿ ಕೊರೆಯ ಬೇಕಾಗಿದ್ದು. ಶೀಘ್ರ ಅಧಿಕಾರಿಗಳು ಯೋಜನೆ ಅನುಷ್ಠಾನಕ್ಕೆ ಕ್ರಮವಹಿಸಬೇಕು ಎಂದರು.
ನಿಗಮವು ಪಾರದರ್ಶಕ ಆಡಳಿತ ನೀಡಲು ವಿವಿಧ ತಂತ್ರಾಂಶಗಳ ಅಳವಡಿಕೆ ಮೂಲಕ ಗುಣಾತ್ಮಕ ಹಾಗೂ ತ್ವರಿತಗತಿ ಸೇವೆಯನ್ನು ಫಲಾನುಭವಿಗಳಿಗೆ ನೀಡಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ಬಹುಮುಖ್ಯ ಪಾತ್ರ ವಹಿಸಲಿದ್ದಾರೆ. ಈ ನಿಟ್ಟಿನಲ್ಲಿ ನಿಗಮವು ರಾಜ್ಯಾದ್ಯಂತ ಎಲ್ಲ ಕಚೇರಿಗಳ ಕೇಂದ್ರೀತ ಕಣ್ಗಾವಲಿನಲ್ಲಿದ್ದು ಪಾರಾದರ್ಶಕ ಆಡಳಿತಕ್ಕೆ ಒಗ್ಗಿಕೊಂಡಿರುವುದು ಶ್ಲಾಘನೀಯ ಎಂದರು.
ಶಾಸಕರಾದ ಎನ್. ಮಹೇಶ್, ಛಲವಾದಿ ನಾರಾಯಣ ಸ್ವಾಮಿ, ಪ. ಜಾ. ಮತ್ತು ಪ. ವರ್ಗಗಳ ಕಲ್ಯಾಣ ಸಮಿತಿ ಆಧ್ಯಕ್ಷ ಎಂ.ಪಿ.ಕುಮಾರಸ್ವಾಮಿ, ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮ ಅಧ್ಯಕ್ಷ ಡಿ.ಎಸ್. ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ