ನೆಹರು ಸ್ಮಾರಕ ಮ್ಯೂಸಿಯಂ ಹೆಸರು ಮರುನಾಮಕರಣ; ಕೇಂದ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದು ಅನುಮತಿ ಪಡೆಯಲಾಗಿತ್ತು.
Team Udayavani, Jun 16, 2023, 6:06 PM IST
ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ನಡುವೆ ಜಟಾಪಟಿ ಮುಂದುವರಿದಿರುವ ನಡುವೆಯೇ ಕೇಂದ್ರ ಸರ್ಕಾರ ನೆಹರು ಸ್ಮಾರಕ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿ ಹೆಸರನ್ನು ಬದಲಾಯಿಸಿ ಪ್ರಧಾನಮಂತ್ರಿಗಳ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿ ಎಂದು ಮರುನಾಮಕರಣ ಮಾಡಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಇದನ್ನೂ ಓದಿ:CBI; ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರ್ದೋಷಿ, ಬಿಡುಗಡೆ
ದೇಶದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರು ಅಧಿಕೃತ ನಿವಾಸವಾಗಿ ಸೇವೆ ಸಲ್ಲಿಸಿದ್ದ ತೀನ್ ಮೂರ್ತಿ ಭವನದ ಆವರಣದಲ್ಲಿ ಪ್ರಧಾನಮಂತ್ರಿ ಸಂಗ್ರಹಾಲಯವನ್ನು ಉದ್ಘಾಟಿಸಿದ್ದ ಒಂದು ವರ್ಷದ ನಂತರ ಜವಾಹರಲಾಲ್ ನೆಹರು ಸ್ಮಾರಕದ ಹೆಸರನ್ನು ಮರು ನಾಮಕರಣ ಮಾಡುವುದಕ್ಕೆ ಸಿದ್ಧತೆ ನಡೆದಿತ್ತು ಎಂದು ವರದಿ ತಿಳಿಸಿದೆ.
ಸ್ಮಾರಕದ ಹೆಸರನ್ನು ಬದಲಾಯಿಸುವ ನಿಟ್ಟಿನಲ್ಲಿ ನೆಹರು ಸ್ಮಾರಕ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿ(ಎನ್ ಎಂಎಂಎಲ್)ಯ ಜೊತೆ ವಿಶೇಷ ಸಭೆ ನಡೆಸಲಾಗಿತ್ತು. ಸೊಸೈಟಿಯ ಉಪಾಧ್ಯಕ್ಷ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದು ಅನುಮತಿ ಪಡೆಯಲಾಗಿತ್ತು.
ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ಕಟ್ಟಡಗಳ ಮರುನಾಮಕರಣದಿಂದ ಪರಂಪರೆಯನ್ನು ಅಳಿಸಿಹಾಕಲು ಸಾಧ್ಯವಿಲ್ಲ. ಅಲ್ಲದೇ ಇದೊಂದು ಸೇಡಿನ ಕ್ರಮವಾಗಿದೆ ಎಂದು ಪ್ರತಿಪಾದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ