ನೆಲಮಂಗಲ : ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಒಕ್ಕಲಿಗ ಮುಖಂಡರ ಅಸಮಾಧಾನ
ಎಸ್ ಸಿ ಮೀಸಲು ಕ್ಷೇತ್ರದಲ್ಲಿ ಕೈ ನಾಯಕರಿಗೆ ಎದುರಾದ ಹೊಸ ಸವಾಲು
Team Udayavani, Apr 9, 2022, 12:28 PM IST
ನೆಲಮಂಗಲ: 2023ರ ಚುನಾವಣೆ ಮುನ್ನವೇ ಕಾಂಗ್ರೆಸ್ ನಲ್ಲಿ ಮುಖಂಡರ ಅಸಮಾಧಾನ ಭುಗಿಲೆದಿದ್ದು, ಎಸ್ ಸಿ ಮೀಸಲು ಕ್ಷೇತ್ರದಲ್ಲಿ ಒಕ್ಕಲಿಗ ಕಾಂಗ್ರೆಸ್ ನಾಯಕರ ಸಭೆ ಪಕ್ಷಕ್ಕೆ ತಲೆ ನೋವು ತಂದಿಟ್ಟಿದೆ.
ಸಭೆಯಲ್ಲಿ ಮುಂದಿನ ಚುನಾವಣೆಯಲ್ಲಿ ಸ್ಥಳೀಯರಿಗೆ ಆದ್ಯತೆ ಕೊಡದಿದ್ದರೆ ಮತ್ತೆ ಸೋಲಿನ ಭೀತಿಯ ಎಚ್ಚರಿಕೆ ನೀಡಲಾಗಿದೆ. ಸ್ಥಳೀಯ ವ್ಯಕ್ತಿಗೇ ಈ ಬಾರಿ ಟಿಕೆಟ್ ನೀಡುವಂತೆ ರಾಜ್ಯ ನಾಯಕರಿಗೆ ಆಗ್ರಹಿಸಲಾಗಿದೆ.
ಸ್ಥಳೀಯ ವ್ಯಕ್ತಿಗೆ ಟಿಕೆಟ್ ಕೊಟ್ಟರೆ ಕಾಯಾ ವಾಚ ಕೆಲಸ ಮಾಡುತ್ತೇವೆ. ಇಲ್ಲವಾದಲ್ಲಿ 2018 ರ ಚುನಾವಣೆಯಲ್ಲಿ ಆದ ಹಾಗೆ ಸೋಲು ಅನುಭವಿಸಬೇಕಾಗುತ್ತದೆ ಎಂದು ಹೇಳಲಾಗಿದೆ.
ತಾಲೂಕಿನ ಒಕ್ಕಲಿಗ ಕಾಂಗ್ರೆಸ್ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿದ್ದು, ಇಲ್ಲಿಗೆ ಬರುವ ವ್ಯಕ್ತಿಯ ಬಳಿ ಹಣವಿಲ್ಲದಿದ್ದರೆ ನಾವೆ ಹಣ ಕೊಟ್ಟು ಗೆಲ್ಲಿಸುತ್ತೇವೆ. ಇಲ್ಲಿಂದ ಒಬ್ಬರನ್ನು ಗೆಲ್ಲಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುತ್ತೇವೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಸ್ಥಳೀಯರಿಗೆ ಮಾತ್ರ ಆದ್ಯತೆ ಕೊಡಿ ಎಂದು ನೆಲಮಂಗಲ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.