ನೇತಾ, ನೀತಿ, ನಿಯತ್: ಏನಿದು ಬಿಜೆಪಿಯಲ್ಲಿ ನಡೆಯುತ್ತಿರುವ ಹಕೀಕತ್?
ಪಕ್ಷ ಹಾಗೂ ಸರಕಾರದಲ್ಲಿ ಒಂದಿಷ್ಟು ಸ್ವಚ್ಛತಾ ಕಾರ್ಯ
Team Udayavani, Mar 14, 2022, 2:28 PM IST
ಬೆಂಗಳೂರು : ಪಂಚರಾಜ್ಯಗಳ ಫಲಿತಾಂಶದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ” ಮಗುಮ್ಮಾ”ದ ಬೆಳವಣಿಗೆ ನಡೆಯುತ್ತಿದ್ದು, ” ನೇತಾ, ನೀತಿ, ನಿಯತ್” ಚರ್ಚೆ ಆರಂಭವಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿರಿಯ ನಾಯಕರೊಬ್ಬರು ಈ ಘೋಷವಾಕ್ಯದ ಪ್ರಸ್ತಾಪ ಮಾಡಿದ್ದಾರೆ. ಮುಂದಿನ ಚುನಾವಣೆ ಗೆಲ್ಲುವ ದೃಷ್ಟಿಯಿಂದ ಈ ಘೋಷವಾಕ್ಯ ಪಾಲನೆ ಅನಿವಾರ್ಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಇದು ನಾಯಕತ್ವ ಬದಲಾವಣೆಯ ನಿಗೂಢ ಬೀಜವನ್ನು ಬಿತ್ತಿದೆಯೇ ? ಎಂಬ ಚರ್ಚೆ ಆರಂಭವಾಗಿದೆ.
ಚುನಾವಣೆ ಗೆಲ್ಲುವುದಕ್ಕೆ “ನೇತಾ ” ಬೇಕು. ಅದು ಪ್ರಧಾನಿ ನರೇಂದ್ರ ಮೋದಿ ಎಂದು ರಾಷ್ಟ್ರಮಟ್ಟದಲ್ಲಿ ಒಪ್ಪಿಕೊಳ್ಳೋಣ. ಆದರೆ ರಾಜ್ಯದಲ್ಲಿ ಆ ನಾಯಕತ್ವ ಸ್ಥಾನವನ್ನು ಭರ್ತಿ ಮಾಡುವುದು ಯಾರು? ಎಂಬ ಪ್ರಶ್ನೆ ಈಗ ಉದ್ಭವವಾಗಿದೆ.
ಇನ್ನು ” ನೀತಿ” ಎಂದರೆ ಬಿಜೆಪಿಯ ತತ್ವ-ಸಿದ್ಧಾಂತ. ಮುಂದಿನ ಚುನಾವಣೆ ದೃಷ್ಟಿಯಿಂದ ಬಿಜೆಪಿ ಮತ ಕೇಂದ್ರೀಕರಣಕ್ಕೆ ಈ ನೀತಿಯನ್ನು ಹೇಗೆ ಪಾಲಿಸಬೇಕೆಂಬ ಬಗ್ಗರ ಇನ್ನು ಚರ್ಚೆ ಆರಂಭಗೊಳ್ಳಲಿದೆ. ಅದೇ ರೀತಿ ” ನಿಯತ್ ” ವಿಚಾರ ಪಕ್ಷಾಂತರ ಮಾಡುವವರನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಸ್ತಾಪಿಸಲಾಗಿದೆ. ಸಚಿವರೂ ಸೇರಿದಂತೆ ಹಲವರ ಪಕ್ಷ ನಿಷ್ಠೆ ಬಗ್ಗೆ ಬಿಜೆಪಿಯ ಆಂತರಿಕ ವಲಯದಲ್ಲಿ ಅನುಮಾನ ವ್ಯಕ್ತವಾಗಿದ್ದು, ” ನೇತಾ, ನೀತಿ, ನಿಯತ್” ಆಧಾರದ ಮೇಲೆ ಪಕ್ಷ ಹಾಗೂ ಸರಕಾರದಲ್ಲಿ ಒಂದಿಷ್ಟು ಸ್ವಚ್ಛತಾ ಕಾರ್ಯ ನಡೆಯಲಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ