ಮಮತಾ ಭೇಟಿಯಾದ ಅಖಿಲೇಶ್: 2024 ಕ್ಕೆ ಮುಂಚಿತವಾಗಿ ಕಾಂಗ್ರೆಸ್ಸೇತರ ಹೊಸ ರಂಗ
ಪರಿವರ್ತನ್.... ಚುನಾವಣೆಗೆ ಮುಂಚಿತವಾಗಿ ಏನಾದರೂ ಹೊರಹೊಮ್ಮುತ್ತದೆ..
Team Udayavani, Mar 17, 2023, 7:48 PM IST
ಕೋಲ್ಕತಾ : ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಲು ಕೋಲ್ಕತಾದಲ್ಲಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಶುಕ್ರವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.
2024 ರ ಲೋಕಸಭೆ ಚುನಾವಣೆಗೆ ಮೊದಲು ಕಾಂಗ್ರೆಸ್ ಹೊರತುಪಡಿಸಿ ಹೊಸ ರಂಗ ಅಥವಾ ಮೈತ್ರಿ ಹೊರಹೊಮ್ಮಲಿದೆ ಎಂದು ಹೇಳಿದರು.
“ನೀವು ಇದನ್ನು ಫ್ರಂಟ್, ಘಟಬಂಧನ್ ಅಥವಾ ಮೈತ್ರಿ ಎಂದು ಕರೆಯಬಹುದು, ಆದರೆ ಎಲ್ಲರೂ ಪರಿವರ್ತನ್ ಬಯಸಿದಂತೆ ಚುನಾವಣೆಗೆ ಮುಂಚಿತವಾಗಿ ಏನಾದರೂ ಹೊರಹೊಮ್ಮುತ್ತದೆ” ಎಂದು ಅಖಿಲೇಶ್ ಯಾದವ್ ಹೇಳಿದರು.
ತೃಣಮೂಲ ಕಾಂಗ್ರೆಸ್ ನಾಯಕ ಸುದೀಪ್ ಬಂಡೋಪಾಧ್ಯಾಯ ಮಾತನಾಡಿ, 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ ಹೋರಾಡಲಿದೆ, ಆದರೆ ಮುಂದಿನ ದಿನಗಳಲ್ಲಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಸಭೆ ನಡೆಸಲಿದೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಒಡಿಶಾ ಮುಖ್ಯಮಂತ್ರಿ ಮತ್ತು ಬಿಜು ಜನತಾ ದಳದ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರನ್ನು ಮುಂದಿನ ವಾರ ಭೇಟಿಯಾಗಲಿದ್ದಾರೆ.
“ಮಮತಾ ಬ್ಯಾನರ್ಜಿ ಅವರು ಮಾರ್ಚ್ 23 ರಂದು ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿದ್ದಾರೆ. ನಾವು ಇತರ ವಿರೋಧ ಪಕ್ಷಗಳೊಂದಿಗೆ ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಸಮಾನ ಅಂತರವನ್ನು ಕಾಯ್ದುಕೊಳ್ಳುವ ಯೋಜನೆಯನ್ನು ಚರ್ಚಿಸುತ್ತೇವೆ. ನಾವು ಮೂರನೇ ರಂಗವನ್ನು ರಚಿಸುತ್ತಿದ್ದೇವೆ ಎಂದು ನಾವು ಹೇಳುತ್ತಿಲ್ಲ, ಆದರೆ ಬಿಜೆಪಿಯನ್ನು ಎದುರಿಸಲು ಶಕ್ತಿ ಹೊಂದಿರುವ ಪ್ರಾದೇಶಿಕ ಪಕ್ಷಗಳೊಂದಿಗೆ ಮಾತನಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!