ಹೊಸ ಮರಳು ನೀತಿ ದೂರ ದೃಷ್ಟಿ ಕಾನೂನು ಅಗತ್ಯ


Team Udayavani, Feb 12, 2021, 6:45 AM IST

ಹೊಸ ಮರಳು ನೀತಿ ದೂರ ದೃಷ್ಟಿ ಕಾನೂನು ಅಗತ್ಯ

ರಾಜ್ಯದಲ್ಲಿ ಮರಳು ಸಾಗಣೆ ಒಳಗೊಂಡಂತೆ ಹೊಸ “ಗಣಿ ನೀತಿ -2021′ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಇದರ ಮೂಲ ಉದ್ದೇಶ ಸುಲಭವಾಗಿ ಮರಳು ಲಭ್ಯವಾಗುವಂತೆ ನೋಡಿ ಕೊಳ್ಳುವುದು. ಗ್ರಾಮೀಣ ಭಾಗದಲ್ಲಿ ಸ್ವಯಂ ಬಳಕೆಗೆ ಮರಳು ಸಾಗಣೆ ಮಾಡುವವರ ವಿರುದ್ಧ ಎಫ್ಐಆರ್‌ ದಾಖಲಿಸಿ ತೊಂದರೆ ನೀಡುತ್ತಿರುವ ಪ್ರಕರಣಗಳನ್ನು ತಡೆಯುವುದು.

ಜತೆಗೆ ಅಕ್ರಮ ಆರೋಪದ ಮೇಲೆ ಬಂದ್‌ ಮಾಡಲಾಗಿರುವ ಕಲ್ಲು ಗಣಿಗಾರಿಕೆ ಹಾಗೂ ಜಲ್ಲಿ ಕ್ರಷರ್‌ಗಳನ್ನು ಕಾನೂನು ವ್ಯಾಪ್ತಿಯಲ್ಲಿ ದಂಡ ಹಾಕಿ ಸಕ್ರಮಗೊಳಿಸಿ ಜಲ್ಲಿ, ಕಲ್ಲು, ಮರಳು ನಿರ್ಮಾಣ ಕಾಮಗಾರಿಗಳಿಗೆ ಯಾವುದೇ ಅಡೆ ತಡೆ ಇಲ್ಲದೆ ಸಿಗುವಂತೆ ಮಾಡುವುದು.

ರಾಜ್ಯದಲ್ಲಿ ಪ್ರಸ್ತುತ ಮರಳು ನೀತಿ ಜಾರಿಯಲ್ಲಿದ್ದರೂ ಒಂದೊಂದು ಕಡೆ ಒಂದೊಂದು ರೀತಿಯ ಸಮಸ್ಯೆಗಳು ಎದು ರಾಗಿವೆ. ಮರಳು ವಿಚಾರದಲ್ಲಿ ಕರಾವಳಿ ಭಾಗದ ಸಮಸ್ಯೆಯೇ ಬೇರೆ, ರಾಜ್ಯದ ಇತರ ಭಾಗಗಳ ಸಮಸ್ಯೆಯೇ ಬೇರೆ. ಹೀಗಾಗಿ ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ ರೂಪಿಸುವ ಪ್ರಸ್ತಾವವೂ ಇದೆ. ಸರಕಾರಿ ಅಥವಾ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಜಲ್ಲಿ, ಕಲ್ಲು, ಮರಳು ತೀರಾ ಅತ್ಯಗತ್ಯ. ಇದು ಸುಗಮವಾಗಿ ಸಿಗುವಂತೆ ನೋಡಿಕೊಳ್ಳುವುದು ಸರಕಾರದ ಕರ್ತವ್ಯ ಸಹ. ಆದರೆ ಇದು ಒಂದೇ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ಸಾರಿಗೆ, ಕಂದಾಯ, ಗೃಹ, ಗಣಿ ಮತ್ತು ಭೂ ವಿಜ್ಞಾನ, ಅರಣ್ಯ ಮತ್ತು ಪರಿಸರ.. ಹೀಗೆ ಹಲವಾರು ಇಲಾಖೆಗಳ ವ್ಯಾಪ್ತಿಗೂ ಬರುತ್ತದೆ.

ಗ್ರಾಮೀಣ ಭಾಗದಲ್ಲಿ ಮರಳು ಸಾಗಣೆಗೆ ಅತೀ ಹೆಚ್ಚು ಸಮಸ್ಯೆ ಉಂಟಾಗಿದೆ. ಸ್ವಯಂ ಬಳಕೆಗೆ ಮರಳು ತೆಗೆಯಲು ಮೊದಲು ಯಾವುದೇ ನಿರ್ಬಂಧ ಇರಲಿಲ್ಲ. ಆದರೆ ಕಳೆದ ಬಾರಿ ಜಾರಿಯಾದ ಮರಳು ನೀತಿಯಡಿ ಪರವಾನಿಗೆ ಹಾಗೂ ರಾಜಧನ ಪಾವತಿಸದೆ ಮರಳು ಸಾಗಿಸಿದರೆ ಕ್ರಮ ಕೈಗೊಳ್ಳಲಾಗುತ್ತಿದೆ.

ಇದರಿಂದ ಗ್ರಾಮೀಣ ಭಾಗದ ಬಡವರು ಎತ್ತಿನ ಬಂಡಿ, ತ್ರಿಚಕ್ರ ವಾಹನದಲ್ಲಿ ಮರಳು ತಂದು ಮನೆ ಕಟ್ಟಿಕೊಳ್ಳಲು ಸಮಸ್ಯೆಯಾಗಿದೆ. ಹೀಗಾಗಿ ನೂತನ ನೀತಿಯಲ್ಲಿ ಹರಾಜು ಹಾಕಲಾಗಿರುವ ಬ್ಲಾಕ್‌ ಹೊರತುಪಡಿಸಿ ಇತರೆಡೆ ಸ್ವಯಂ ಬಳಕೆಗೆ ಮರಳು ತೆಗೆದು ಸಾಗಣೆ ಮಾಡುವುದು ಪರವಾನಿಗೆ ಹಾಗೂ ರಾಜಧನ ವ್ಯಾಪ್ತಿಯಿಂದ ಹೊರಗಿಡುವ ಪ್ರಸ್ತಾವವೂ ಇದೆ. ಒಂದು ರೀತಿಯಲ್ಲಿ ಉಚಿತವಾಗಿ ಸ್ಥಳೀಯ ಅಗತ್ಯತೆಗೆ ಮರಳು ಕೊಡುವುದು. ತೀರಾ ಎಂದರೆ ಕನಿಷ್ಠ ದರ ಪಂಚಾಯತ್‌ಗೆ ಕಟ್ಟುವಂತೆ ಮಾಡುವುದು ಪರಿಶೀಲನೆಯಲ್ಲಿದೆ.

ಆದರೆ ಸ್ವಯಂ ಬಳಕೆ ಹೆಸರಿನಲ್ಲಿ ಎತ್ತಿನಬಂಡಿಯಲ್ಲಿ ಸಾಗಣೆ ಮಾಡಿ ಅನಂತರ‌ ಅದನ್ನು ಟ್ರ್ಯಾಕ್ಟರ್‌, ಲಾರಿಗಳಿಗೆ ತುಂಬುವ, ಜಿಲ್ಲಾ ಗಡಿ ಮೂಲಕ ಬೇರೆಡೆ ಸಾಗಿಸುವ ಮಾರಾಟ ಮಾಡುವ ಪ್ರಕರಣಗಳೂ ಹಿಂದೆ ವರದಿಯಾಗಿವೆ. ಇದನ್ನು ತಡೆಗಟ್ಟುವುದು ಸವಾಲಿನ ಕೆಲಸ. ಸರಕಾರ ಈ ಬಗ್ಗೆ ಗಮನಹರಿಸಿ ಜನಸಾಮಾನ್ಯರು ಹಾಗೂ ಸರಕಾರಿ ಕಾಮಗಾರಿಗಳಿಗೆ ಸುಲಭವಾಗಿ ಮರಳು, ಜಲ್ಲಿ, ಕಲ್ಲು ಸಿಗುವಂತೆ ಮಾಡಬೇಕಿದೆ. ಇದಕ್ಕಾಗಿ ದೂರದೃಷ್ಟಿ ಕಾನೂನು ಅಗತ್ಯವಿದೆ. ಇತ್ತೀಚೆಗಿನ ಶಿವಮೊಗ್ಗ ಹುಣಸೋಡು ದುರಂತವನ್ನೂ ಗಮನದಲ್ಲಿಟ್ಟುಕೊಂಡು ನೀತಿ ರೂಪಿಸಬೇಕಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

14-editorial

Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.