ಉಗ್ರರಿಂದ ಹೊಸ ಕಾರ್ಯತಂತ್ರ: ದೇಶದೆಲ್ಲೆಡೆ ಕಟ್ಟೆಚ್ಚರ ಅಗತ್ಯ


Team Udayavani, Jun 12, 2023, 6:32 AM IST

TERRORISTS IMP

ಜಮ್ಮು- ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರಕಾರ ಹಿಂಪಡೆದು ಅಲ್ಲಿನ ಕಾನೂನು ಸುವ್ಯವಸ್ಥೆ ಮತ್ತು ಭದ್ರತೆಯ ಹೊಣೆಯನ್ನು ಕೇಂದ್ರೀಯ ಪಡೆಗಳ ಸುಪರ್ದಿಗೆ ಒಪ್ಪಿಸಿದಾಗಿನಿಂದ ಅಲ್ಲಿನ ಒಟ್ಟಾರೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಇದರ ಹೊರತಾಗಿಯೂ ಅಲ್ಲೊಂದು ಇಲ್ಲೊಂದು ಎಂಬಂತೆ ಉಗ್ರರು ದುಷ್ಕೃತ್ಯಗಳನ್ನು ನಡೆಸಿ ಶಾಂತಿಯನ್ನು ಕದಡುವ ಪ್ರಯತ್ನ ನಡೆಸುತ್ತಲೇ ಬಂದಿದ್ದರೂ ಉಗ್ರರನ್ನು ಮಟ್ಟ ಹಾಕುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ. ಇನ್ನು ಗಡಿಯಾಚೆಯಿಂದ ಅಂದರೆ ಪಾಕಿಸ್ಥಾನದ ಕಡೆಯಿಂದ ಕಾಶ್ಮೀರದ ಕಣಿವೆಗೆ ನುಸುಳುವ ಉಗ್ರರನ್ನು ಸದೆಬಡಿಯುವ ಮೂಲಕ ಜಮ್ಮು- ಕಾಶ್ಮೀರದಲ್ಲಿನ ಕಾನೂನು ಸುವ್ಯವಸ್ಥೆಗೆ ಭಂಗ ಬಾರದಂತೆ ಕಟ್ಟೆಚ್ಚರ ವಹಿಸಿವೆ.

ಈ ಎಲ್ಲ ಕ್ರಮಗಳಿಂದಾಗಿ ಜಮ್ಮು – ಕಾಶ್ಮೀರ ಈಗ ದೇಶ ಮಾತ್ರವಲ್ಲದೆ ಜಾಗತಿಕ ವ್ಯವಹಾರಗಳಿಗೆ ತೆರೆಯಲ್ಪಟ್ಟಿದ್ದು ಈ ಪ್ರದೇಶದ ಬಗೆಗೆ ಜನತೆಯಲ್ಲಿದ್ದ ಆತಂಕವೆಲ್ಲ ಮಾಯವಾಗಿದೆ. ಈ ಬೆಳವಣಿಗೆಗಳಿಂದ ಭಯೋತ್ಪಾದಕ ಸಂಘಟನೆಗಳು ಮತ್ತು ಉಗ್ರರಿಗೆ ಸದಾ ಆಶ್ರಯ ನೀಡುವ ಮೂಲಕ ಭಾರತದಲ್ಲಿ ಭಯೋತ್ಪಾದಕ ಕೃತ್ಯ ನಡೆಸಲು ದುಷ್ಪ್ರೇರಣೆ ಮತ್ತು ಆರ್ಥಿಕ ನೆರವು ನೀಡುತ್ತ ಬಂದಿರುವ ಪಾಕಿಸ್ಥಾನ ವಿಚಲಿತವಾಗಿವೆ. ಈ ಕಾರಣದಿಂದಾಗಿ ಜಮ್ಮು – ಕಾಶ್ಮೀರದಲ್ಲಿ ಶಾಂತಿಯನ್ನು ಕದಡಲು ಪ್ರಯತ್ನಿಸುತ್ತಲೇ ಬಂದಿರುವ ಪಾಕಿಸ್ಥಾನದ ಐಎಸ್‌ಐ ಮತ್ತು ಇನ್ನಿತರ ಭಯೋತ್ಪಾದಕ ಸಂಘಟನೆಗಳು ತಮ್ಮ ತಂತ್ರಗಾರಿಕೆಯನ್ನು ಸದಾ ಬದಲಾಯಿಸುತ್ತಿವೆ. ಆದರೆ ಭಾರತೀಯ ಸೇನೆ, ಭಯೋತ್ಪಾದಕರ ಈ ಎಲ್ಲ ಸಂಚು, ಷಡ್ಯಂತ್ರಗಳನ್ನು ಬಯಲು ಮಾಡಿ, ಯಶಸ್ವಿಯಾಗಿ ಎದುರಿಸಿವೆ.

ಈಗ ಐಎಸ್‌ಐ ಮತ್ತು ಭಯೋತ್ಪಾದಕ ಸಂಘಟನೆಗಳು ತಮ್ಮ ಜಾಲವನ್ನು ಕಾಶ್ಮೀರ ಕಣಿವೆಯಲ್ಲಿ ಸಕ್ರಿಯವಾಗಿಸಲು ಮತ್ತು ವಿಸ್ತರಿಸುವ ಕಾರ್ಯತಂತ್ರದ ಭಾಗವಾಗಿ ಮಹಿಳೆಯರು ಅದರಲ್ಲೂ ಮುಖ್ಯವಾಗಿ ಬಾಲಕಿಯರು ಮತ್ತು ಬಾಲಾಪರಾಧಿಗಳನ್ನು ಬಳಸಿಕೊಳ್ಳುತ್ತಿರುವುದು ಬಂಧಿತರ ವಿಚಾರಣೆಯ ವೇಳೆ ಬಯಲಾಗಿದೆ. ಇದು ಭದ್ರತಾ ಪಡೆಗಳಿಗೆ ಬಲುದೊಡ್ಡ ಸವಾಲಾಗಿ ಪರಿಣಮಿಸಿದೆ. ಮಕ್ಕಳನ್ನು ಭಯೋತ್ಪಾದನ ಜಾಲದಲ್ಲಿ ತೊಡಗಿಸಿಕೊಳ್ಳುತ್ತಿರುವುದು ಅವರ ಭವಿಷ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಭಯೋತ್ಪಾದಕ ಸಂಘಟನೆಗಳ ಈ ಷಡ್ಯಂತ್ರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಭದ್ರತಾ ಪಡೆಗಳ ಹಿರಿಯ ಅಧಿಕಾರಿಗಳು ಕಿವಿಮಾತು ಹೇಳಿದ್ದಾರೆ.

ಕಾಶ್ಮೀರ ಕಣಿವೆ ಮತ್ತು ಗಡಿ ಭಾಗಗಳಲ್ಲಿ ಭದ್ರತಾ ಕಾರ್ಯದಲ್ಲಿ ತೊಡಗಿಕೊಂಡಿರುವ ಭಾರತೀಯ ಸೇನೆಯ ವಿವಿಧ ಪಡೆಗಳ ಹಿರಿಯ ಅಧಿಕಾರಿಗಳ ಪ್ರಕಾರ ಐಎಸ್‌ಐ ಮತ್ತು ಉಗ್ರರು ಸಂದೇಶ, ಶಸ್ತ್ರಾಸ್ತ್ರ ರವಾನೆ, ಮಾದಕ ಪದಾರ್ಥಗಳ ಸಾಗಣೆಗೆ ಈ ಹಿಂದೆ ಅನುಸರಿಸುತ್ತಿದ್ದ ಸಾಂಪ್ರದಾಯಿಕ ಪದ್ಧತಿಗಳಾದ ಮೊಬೈಲ್‌ ಮೂಲಕ ಸಂವಹನ, ತಂತ್ರಜ್ಞಾನ ಆಧಾರಿತ ಗೂಢಚಾರಿಕೆ ಮತ್ತು ಸ್ಥಳೀಯವಾಗಿ ಸಂದೇಶ ವಾಹಕರ ಬಳಕೆ ಇತ್ತೀಚಿನ ವರ್ಷಗಳಲ್ಲಿ ಕಡಿಮೆಯಾಗಿದೆ.

ಈಗ ಉಗ್ರರು ಮಹಿಳೆಯರು ಮತ್ತು ಬಾಲಾಪರಾಧಿಗಳನ್ನು ಈ ಎಲ್ಲ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಬಳಸಿಕೊಳ್ಳಲಾರಂಭಿದ್ದಾರೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ತೀವ್ರ ನಿಗಾ ಇಡುವ ಜತೆಯಲ್ಲಿ ಮಕ್ಕಳು ಹಾದಿತಪ್ಪದಂತೆ ಎಚ್ಚರ ವಹಿಸಬೇಕಿದೆ. ರಂಗೋಲಿಯಡಿಗೆ ತೂರುವ ಉಗ್ರರ ಈ ಪ್ರಯತ್ನವನ್ನು ಭದ್ರತಾ ಪಡೆಗಳು ಪ್ರಾಥಮಿಕ ಹಂತದಲ್ಲಿಯೇ ವಿಫ‌ಲಗೊಳಿಸಿ, ಜಮ್ಮು – ಕಾಶ್ಮೀರದಲ್ಲಿ ಶಾಂತಿಗೆ ಭಂಗ ಬಾರದಂತೆ ಎಚ್ಚರ ವಹಿಸಬೇಕು. ಅಲ್ಲದೆ ಇದೇ ಕಾರ್ಯತಂತ್ರವನ್ನು ಇತರ ಉಗ್ರ ಸಂಘಟನೆಗಳು ಅನುಸರಿಸುವ ಸಾಧ್ಯತೆ ಇರುವುದರಿಂದ ಈ ಬಗ್ಗೆ ದೇಶದೆಲ್ಲೆಡೆ ಕಟ್ಟೆಚ್ಚರ ವಹಿಸಬೇಕಿದೆ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.