ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡಿಗೆ ಇನಿಂಗ್ಸ್‌ ಮುನ್ನಡೆ


Team Udayavani, Mar 12, 2023, 5:35 AM IST

newz

ಕ್ರೈಸ್ಟ್‌ಚರ್ಚ್‌: ಡೆರಿಲ್‌ ಮಿಚೆಲ್‌ ಅವರ ಸೊಗಸಾದ ಶತಕ ಮತ್ತು ಮ್ಯಾಟ್‌ ಹೆನ್ರಿ ಅವರ ಬಿರುಸಿನ ಅರ್ಧಶತಕದಿಂದಾಗಿ ನ್ಯೂಜಿಲೆಂಡ್‌ ತಂಡವು ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದ ಮೂರನೇ ದಿನ ಪ್ರಥಮ ಇನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಲು ಯಶಸ್ವಿಯಾಗಿದೆ.
ಮಿಚೆಲ್‌, ಹೆನ್ರಿ ಮತ್ತು ನೀಲ್‌ ವಾಗ್ನರ್‌ ಅವರ ಉಪಯುಕ್ತ ಆಟದಿಂದಾಗಿ ನ್ಯೂಜಿಲೆಂಡ್‌ ತಂಡವು 373 ರನ್‌ ಗಳಿಸಿ ಆಲೌಟಾಯಿತು. ಈ ಮೂಲಕ ಮೊದಲ ಇನಿಂಗ್ಸ್‌ನಲ್ಲಿ 18 ರನ್‌ ಮುನ್ನಡೆ ಪಡೆಯಿತು. ಇದಕ್ಕುತರವಾಗಿ ದ್ವಿತೀಯ ಇನಿಂಗ್ಸ್‌ ಆರಂಭಿಸಿರುವ ಶ್ರೀಲಂಕಾ ತಂಡವು ಮೂರನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್‌ ಕಳೆದುಕೊಂಡಿದ್ದು 83 ರನ್‌ ಗಳಿಸಿದೆ. ಏಂಜೆಲೊ ಮ್ಯಾಥ್ಯೂಸ್‌ 20 ರನ್‌ ಗಳಿಸಿ ಆಡುತ್ತಿದ್ದಾರೆ. ಸದ್ಯ ಶ್ರೀಲಂಕಾ ತಂಡ 65 ರನ್ನುಗಳ ಮುನ್ನಡೆಯಲ್ಲಿದೆ. ಇನ್ನೆರಡು ದಿನಗಳ ಆಟ ಬಾಕಿ ಉಳಿದಿದ್ದು ಈ ಪಂದ್ಯದಲ್ಲಿ ಫ‌ಲಿತಾಂಶ ಬರುವ ಸಾಧ್ಯತೆಯಿದೆ.

ಈ ಮೊದಲು 5 ವಿಕೆಟಿಗೆ 162 ರನ್ನುಗಳಿಂದ ದಿನಾಟದ ಆರಂಭಿಸಿದ ನ್ಯೂಜಿಲೆಂಡ್‌ ತಂಡವು ಬಾಲಂಗೋಚಿಗಳ ಉಪಯುಕ್ತ ಆಟದಿಂಧಾಗಿ ಉತ್ತಮ ಮೊತ್ತ ಪೇರಿಸಲು ಯಶಸ್ವಿಯಾಯಿತು. ಡೆರಿಲ್‌ ಮಿಚೆಲ್‌ ಮತ್ತು ಮ್ಯಾಟ್‌ ಹೆನ್ರಿ ಅವರ ಆಟದಿಂದಾಗಿ ಆತಿಥೇಯ ತಂಡ ಮುನ್ನಡೆ ದಾಖಲಿಸಲು ಸಮರ್ಥವಾಯಿತು. 40 ರನ್ನುಗಳಿಂದ ದಿನದಾಟ ಮುಂದುವರಿಸಿದ ಮಿಚೆಲ್‌ ಮೂರು ತಾಸುಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರಲ್ಲದೇ 187 ಎಸೆತಗಳಿಂದ ಶತಕ ಸಿಡಿಸಿ ಸಂಭ್ರಮಿಸಿದರು. ಇದು ಟೆಸ್ಟ್‌ನಲ್ಲಿ ಅವರ ಐದನೇ ಮತ್ತು ಶ್ರೀಲಂಕಾ ವಿರುದ್ಧ ಮೊದಲ ಶತಕವಾಗಿದೆ.

ತನ್ನ ದೇಶದ ಪರ ಶತಕ ದಾಖಲಿಸುವುದು ಯಾವಾಗಲೂ ಖುಷಿಯ ವಿಷಯವಾಗಿದೆ. ತಾಳ್ಮೆಯ ಆಟದ ವೇಳೆ ಈ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಮಿಚೆಲ್‌ ಹೇಳಿದರು. ಮಿಚೆಲ್‌ಗೆ ಉತ್ತಮ ನೆರವು ನೀಡಿದ ಮ್ಯಾಟ್‌ ಹೆನ್ರಿ 75 ಎಸೆತಗಳಿಂದ 72 ರನ್‌ ಹೊಡೆದರು. ಇದು ಅವರ ಐದನೇ ಅರ್ಧಶತಕವಾಗಿದೆ.
ಸಂಕ್ಷಿಪ್ತ ಸ್ಕೋರು: ಶ್ರೀಲಂಕಾ 355 ಮತ್ತು 3 ವಿಕೆಟಿಗೆ 83 (ಒಶಾದ ಫೆರ್ನಾಂಡೊ 28, ಮ್ಯಾಥ್ಯೂಸ್‌ 20 ಔಟಾಗದೆ, ಬ್ಲೇರ್‌ ಟಿಕ್ನರ್‌ 28ಕ್ಕೆ 3); ನ್ಯೂಜಿಲೆಂಡ್‌ 373 (ಟಾಮ್‌ ಲಾಥಮ್‌ 67, ಡ್ಯಾರಿಲ್‌ ಮಿಚೆಲ್‌ 102, ಮ್ಯಾಟ್‌ ಹೆನ್ರಿ 72, ಆಸಿತಾ ಫೆರ್ನಾಂಡಿಸ್‌ 85ಕ್ಕೆ 4, ಲಹಿರು ಕುಮಾರ 76ಕ್ಕೆ 3).

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.