ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಗ್ಯಾಂಗ್ ಸ್ಟರ್ಸ್ ನಿವಾಸ, ಕಚೇರಿ ಸೇರಿ 60 ಕಡೆ NIA ದಾಳಿ
ಗ್ಯಾಂಗ್ ಸ್ಟರ್ಸ್ ಗಳ ಎಲ್ಲಾ ನೆಟ್ವರ್ಕ್ ಗಳನ್ನು ಪತ್ತೆ ಹಚ್ಚುವಂತೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿತ್ತು.
Team Udayavani, Sep 12, 2022, 11:15 AM IST
ನವದೆಹಲಿ:ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಭಯೋತ್ಪಾದಕ ಗ್ಯಾಂಗ್ ಗಳ ವಿರುದ್ಧ ಪಂಜಾಬ್, ಹರ್ಯಾಣ, ದೆಹಲಿ ಮತ್ತು ಎನ್ ಸಿಆರ್ ಸೇರಿದಂತೆ ಸುಮಾರು 60 ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಸೋಮವಾರ ದಾಳಿ ನಡೆಸಿದೆ.
ಇದನ್ನೂ ಓದಿ:ಮಳೆ-ಗಾಳಿಗೆ ಸಮುದ್ರ ಪ್ರಕ್ಷುಬ್ಧ : ಬಂದರಿನಲ್ಲಿ ಲಂಗರು ಹಾಕಿದ ಮೀನುಗಾರಿಕೆ ದೋಣಿಗಳು
ಗ್ಯಾಂಗ್ ಸ್ಟರ್ಸ್ ಗಳಾದ ಲಾರೆನ್ಸ್ ಬಿಷ್ಣೋಯಿ, ಕಾಲಾ ಜಥೇಡಿ, ಬಂಬಯ್ಯಾ ಮತ್ತು ಕೌಶಲ್ ಚೌಧರಿ ವಿರುದ್ಧ ಇತ್ತೀಚೆಗೆ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಈ ಗ್ಯಾಂಗ್ ನ ಸದಸ್ಯರು ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿರುವುದಾಗಿ ಅಧಿಕಾರಿಯೊಬ್ಬರು ಎಎನ್ ಐಗೆ ತಿಳಿಸಿರುವುದಾಗಿ ವರದಿಯಾಗಿದೆ. ದಾಳಿಗೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ಯಾವುದೇ ಸುಳಿವು ನೀಡಿರಲಿಲ್ಲವಾಗಿತ್ತು.
ದೊಡ್ಡ ಪಾತಕಿಗಳಾದ ಬಿಷ್ಣೋಯಿ, ಕಪಿಲ್ ಸಾಂಗ್ವಾನ್ ಮತ್ತು ನೀರಜ್ ಬಾವ್ನಾ ಮತ್ತು ಅವರ ಸಹಾಯಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಎನ್ ಐಎ ಸಿದ್ಧತೆ ನಡೆಸಿತ್ತು. ಭಯೋತ್ಪಾದಕರಂತೆ ಹತ್ಯೆ ನಡೆಸುತ್ತಿರುವ ಗ್ಯಾಂಗ್ ಸ್ಟರ್ಸ್ ಗಳ ಎಲ್ಲಾ ನೆಟ್ವರ್ಕ್ ಗಳನ್ನು ಪತ್ತೆ ಹಚ್ಚುವಂತೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು