23 ಉಗ್ರರ ವಿರುದ್ಧ NIA ವಾರೆಂಟ್
Team Udayavani, Apr 27, 2023, 7:57 AM IST
ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ ಜಿಲ್ಲೆಯಿಂದ ಪರಾರಿಯಾಗಿ ಉಗ್ರಸಂಘಟನೆಗಳಿಗೆ ಸೇರ್ಪಡೆಗೊಂಡು, ಗಡಿಯಾಚೆಗಿನ ಭಯೋತ್ಪಾದನೆಯಲ್ಲಿ ತೊಡಗಿರುವ 23 ಉಗ್ರರ ವಿರುದ್ಧ ವಿಶೇಷ ಎನ್ಐಎ ನ್ಯಾಯಾಲಯವು ಬುಧವಾರ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿರುವ ಈ ಉಗ್ರರ ವಿರುದ್ಧ ಕಣಿವೆ ಪೊಲೀಸರ ಮನವಿ ಮೇರೆಗೆ ಮಾರ್ಚ್ನಿಂದ ಇದು 2ನೇ ಬಾರಿಗೆ ಎನ್ಐಎ ವಿಶೇಷ ನ್ಯಾಯಾಲಯ ವಾರೆಂಟ್ ಹೊರಡಿಸಿದೆ. ಇದಕ್ಕೂ ಮುನ್ನ 13 ಉಗ್ರರ ವಿರುದ್ಧ ಜಾಮೀನುರಹಿತ ವಾರೆಂಟ್ ನೀಡಲಾಗಿತ್ತು.
ಕಿಶ್ತ್ವಾರ ಜಿಲ್ಲೆಯ ಕನಿಷ್ಠ 36 ನಿವಾಸಿಗಳು ಉಗ್ರಸಂಘಟನೆ ಸೇರ್ಪಡೆಗೊಂಡು, ಕಣಿವೆ ತೊರೆದಿದ್ದಾರೆ. ಅವರುಗಳ ವಿರುದ್ಧ ಈಗಾಗಲೇ 2 ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ, ತಲೆಮರೆಸಿಕೊಂಡಿರುವ ಉಗ್ರರನ್ನು ಬಂಧಿಸಲು ಎಲ್ಲ ತಯಾರಿಗಳನ್ನೂ ನಡೆಸಲಾಗಿದೆ. ಈಗಾಗಲೇ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವುದಕ್ಕೆ ಸಂಬಂಧಿಸಿದಂತೆ ಇಂಟರ್ಪೋಲ್ ಜತೆಗೂ ಮಾತುಕತೆ ನಡೆಸುತ್ತಿದ್ದೇವೆ ಎಂಬುದಾಗಿಯೂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ