ಮತ್ತೆ ರಾತ್ರಿ ಕರ್ಫ್ಯೂ ಜಪ : ಮುಂಬಯಿ, ಪುಣೆ ಬಳಿಕ ಮ.ಪ್ರದೇಶ, ಗುಜರಾತ್‌ನಲ್ಲೂ ಜಾರಿ


Team Udayavani, Mar 17, 2021, 8:00 AM IST

ಮತ್ತೆ ರಾತ್ರಿ ಕರ್ಫ್ಯೂ ಜಪ : ಮುಂಬಯಿ, ಪುಣೆ ಬಳಿಕ ಮ.ಪ್ರದೇಶ, ಗುಜರಾತ್‌ನಲ್ಲೂ ಜಾರಿ

ಹೊಸದಿಲ್ಲಿ: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ರಾತ್ರಿ ಕರ್ಫ್ಯೂ ಜಾರಿಯಾಗುತ್ತಿದೆ. ಮುಂಬಯಿ, ಪುಣೆ ಬೆನ್ನಲ್ಲೇ ಈಗ ಮಧ್ಯಪ್ರದೇಶ, ಗುಜರಾತ್‌ನ ಕೆಲವು ಜಿಲ್ಲೆಗಳು ಕಟ್ಟುನಿಟ್ಟಾಗಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿವೆ.
ಭೋಪಾಲ, ಇಂದೋರ್‌ಗಳಲ್ಲಿ ಮಾ. 17ರಿಂದ ಇದು ಜಾರಿಗೊಳ್ಳಲಿದೆ. ಜತೆಗೆ ಗ್ವಾಲಿಯರ್‌, ಜಬಲ್ಪುರ, ಉಜ್ಜಯಿನಿ, ರತ್ಲಾಮ್‌, ಛಿಂದ್ವಾರಾ, ಬುರ್ಹಾನ್‌ಪುರ, ಬೇತುಲ್‌, ಖಾರ್ಗಾಂವ್‌ಗಳಲ್ಲಿ ಬಿಗಿ ನಿಯಮ ಜಾರಿಗೊಂಡಿದೆ. ರಾತ್ರಿ 10ರ ಬಳಿಕ ಎಲ್ಲ ಅಂಗಡಿ ಮುಚ್ಚಲು ಸೂಚಿಸಲಾಗಿದೆ.

ಇನ್ನೊಂದೆಡೆ ಗುಜರಾತ್‌ನ 4 ನಗರಗಳಲ್ಲಿ ಕರ್ಫ್ಯೂ ಅವಧಿ ಹೆಚ್ಚಿಸಲಾಗಿದೆ. ಅಹ್ಮದಾಬಾದ್‌, ಸೂರತ್‌, ವಡೋದರ, ರಾಜ್‌ ಕೋಟ್‌ಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಇರಲಿದೆ.

24,492 ಹೊಸ ಪ್ರಕರಣ
ಸತತ 6ನೇ ದಿನ ದೇಶದಲ್ಲಿ ಸೋಂಕು ಸಂಖ್ಯೆ 20 ಸಾವಿರ ದಾಟಿದೆ. 24 ತಾಸುಗಳಲ್ಲಿ 24,492 ಮಂದಿಗೆ ಕೊರೊನಾ ದೃಢಪಟ್ಟಿದೆ.

ಒಂದೇ ದಿನ 30 ಲಕ್ಷ ಮಂದಿಗೆ ಲಸಿಕೆ
ಲಸಿಕೆ ನೀಡಿಕೆಯನ್ನೂ ಹೆಚ್ಚಿಸಲಾಗಿದ್ದು, ಸೋಮವಾರ ದೇಶದಲ್ಲಿ 30 ಲಕ್ಷಕ್ಕೂ ಅಧಿಕ ಮಂದಿ ಲಸಿಕೆ ಪಡೆದಿದ್ದಾರೆ.

ರಾಜ್ಯ ನಿರ್ಬಂಧ: ಇಂದು ನಿರ್ಧಾರ
ಬೆಂಗಳೂರು: ಪ್ರಧಾನಿ ಮೋದಿ ಮತ್ತು ಸಿಎಂಗಳ ಸಭೆಯ ಬಳಿಕ ರಾಜ್ಯದಲ್ಲಿ ಕಠಿನ ನಿಯಮ ಜಾರಿ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್‌ ತಿಳಿಸಿದರು. ಬುಧವಾರ ಕರ್ನಾಟಕ ಸಹಿತ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ.

ಸಾವಿರ ದಾಟಿದ ಸೋಂಕು
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮಂಗಳವಾರ ಮತ್ತೆ ಒಂದು ಸಾವಿರ ಗಡಿ ದಾಟಿದೆ. ಮಂಗಳವಾರ 1,135 ಮಂದಿಗೆ ಸೋಂಕು ತಗಲಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಡಿ. 25ರಂದು 1,005 ಪ್ರಕರಣಗಳು ವರದಿಯಾಗಿದ್ದವು.

ಆ ಬಳಿಕ ಪ್ರಕರಣಗಳು ಇಳಿಮುಖವಾಗುತ್ತ ಸಾಗಿ 200ರ ಆಸುಪಾಸಿಗೆ ತಲುಪಿದ್ದವು.

ಮಂಗಳವಾರ ಅತೀ ಹೆಚ್ಚು ಪ್ರಕರಣಗಳು ಬೆಂಗಳೂರಿನಲ್ಲಿ 710, ಮೈಸೂರು 58, ದಕ್ಷಿಣ ಕನ್ನಡದಲ್ಲಿ 50ರಷ್ಟು ದಾಖಲಾಗಿವೆ.

ಮಹಾರಾಷ್ಟ್ರಕ್ಕೆ ಕಠಿನ ಎಚ್ಚರಿಕೆ
ಮುಂಬಯಿ: ಕೊರೊನಾದ ಘೋರ ಸವಾಲು ಎದುರಿಸಲು ಸಜ್ಜಾಗುವಂತೆ ಮಹಾರಾಷ್ಟ್ರಕ್ಕೆ ಕೇಂದ್ರ ಸರಕಾರ ಕಠಿನ ಎಚ್ಚರಿಕೆ ನೀಡಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ಅವರು ಮಂಗಳವಾರ ಮಹಾರಾಷ್ಟ್ರ ಸರಕಾರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ಕಟು ಶಬ್ದಗಳಲ್ಲಿ ಪತ್ರ ಬರೆದಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾದ 2ನೇ ಅಲೆ ಆರಂಭ ಹಂತದಲ್ಲಿದೆ. ಆದರೂ ಅಲ್ಲಿ ಸೋಂಕುಪೀಡಿತರ ಪತ್ತೆ, ಪರೀಕ್ಷೆ, ಸಂಪರ್ಕ ತಡೆಗೆ ಸರಕಾರ ಹೆಚ್ಚು ಗಮನ ನೀಡುತ್ತಿಲ್ಲ. ನಗರ ಮತ್ತು ಗ್ರಾಮೀಣ- ಎರಡೂ ಭಾಗಗಳಲ್ಲೂ ಜನ ಕೊರೊನಾ ಮಾರ್ಗಸೂಚಿಗಳನ್ನು ಗಾಳಿಗೆ ತೂರುತ್ತಿದ್ದಾರೆ ಎಂದು ರಾಜೇಶ್‌ ಭೂಷಣ್‌ ಆರೋಪಿಸಿದ್ದಾರೆ.

ಕೇಂದ್ರ ತಂಡ ಮಾ. 7-11ರ ವರೆಗೆ ಮಹಾರಾಷ್ಟ್ರ ಪ್ರವಾಸ ಕೈಗೊಂಡಿತ್ತು. ಕೊರೊನಾ ಹೆಚ್ಚುತ್ತಿರುವ ಸೂಚನೆ ಇದ್ದರೂ ರಾಜ್ಯ ಸರಕಾರದ ನಿರ್ಲಕ್ಷ್ಯವನ್ನು ರಾಜೇಶ್‌ ಭೂಷಣ್‌ ಖಂಡಿಸಿದ್ದಾರೆ.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.