ಕೋವಿಡ್ 19 ಸೋಂಕು ಹೆಚ್ಚಳ: ಮುಂಬೈ ಬಳಿಕ ದೆಹಲಿಯಲ್ಲಿ ರಾತ್ರಿ ಕರ್ಫ್ಯೂ ಜಾರಿ
ಸದ್ಯ ಲಾಕ್ ಡೌನ್ ಹೇರುವ ಬಗ್ಗೆ ಯೋಚಿಸಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಟ್ವೀಟ್ ಮಾಡಿದ್ದರು.
Team Udayavani, Apr 6, 2021, 1:34 PM IST
ನವದೆಹಲಿ: ರಾಜಧಾನಿಯಲ್ಲಿ ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದಲೇ ರಾತ್ರಿ ಕರ್ಫ್ಯೂ ಜಾರಿಗೊಳಿಸುವುದಾಗಿ ದೆಹಲಿ ಸರ್ಕಾರ ಮಂಗಳವಾರ(ಏಪ್ರಿಲ್ 06) ಘೋಷಿಸಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾತ್ರಿ 10ರಿಂದ ಬೆಳಗ್ಗಿನ ಜಾವ 5ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು, ಇದು ಇಂದಿನಿಂದಲೇ ಅನುಷ್ಠಾನಗೊಳ್ಳಲಿದ್ದು, ಏಪ್ರಿಲ್ 30ರವರೆಗೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಕೋವಿಡ್ ಸೋಂಕು ಪ್ರಕರಣ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ಸೋಮವಾರ(ಏ.05) ದೆಹಲಿಯಲ್ಲಿ 3,548 ಪ್ರಕರಣ ವರದಿಯಾಗಿದ್ದು, 15 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದರು. ಸತತ ನಾಲ್ಕು ದಿನಗಳಿಂದ ದೆಹಲಿಯಲ್ಲಿ 3,500ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿದೆ.
ಭಾನುವಾರ 4,033 ಕೋವಿಡ್ ಪ್ರಕರಣ ಪತ್ತೆಯಾಗಿತ್ತು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ರಾತ್ರಿ ಕರ್ಫ್ಯೂ ವಿಧಿಸುವ ಪ್ರಸ್ತಾಪವನ್ನು ರವಾನಿಸಲಾಗಿದೆ ಎಂದು ವರದಿಯಾದ ನಂತರ ಈ ಘೋಷಣೆ ಹೊರಬಿದ್ದಿರುವುದಾಗಿ ವರದಿ ತಿಳಿಸಿದೆ.
ದೆಹಲಿಯಲ್ಲಿ ನಾಲ್ಕನೇ ಹಂತದ ಕೋವಿಡ್ ಅಲೆ ಹರಡುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಲಾಕ್ ಡೌನ್ ಹೇರುವ ಬಗ್ಗೆ ಯೋಚಿಸಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ