ನೈಟ್‌ ವಾಚ್‌ಮನ್‌ ಈಗ ಐಐಎಂ ಅಸಿಸ್ಟೆಂಟ್‌ ಪ್ರೊಫೆಸರ್‌!


Team Udayavani, Apr 12, 2021, 7:20 AM IST

ನೈಟ್‌ ವಾಚ್‌ಮನ್‌ ಈಗ ಐಐಎಂ ಅಸಿಸ್ಟೆಂಟ್‌ ಪ್ರೊಫೆಸರ್‌!

ಕಾಸರಗೋಡು: ರಾತ್ರಿ ಕಾವ ಲುಗಾರನಾಗಿದ್ದ ಯುವಕ ಈಗ ಐಐಎಂ ರಾಂಚಿಯ ಅಸಿಸ್ಟೆಂಟ್‌ ಪ್ರೊಫೆಸರ್‌ ಆಗಿ ನೇಮಕಗೊಂಡಿದ್ದಾರೆ. ಅವರು ಫೇಸ್‌ಬುಕ್‌ನಲ್ಲಿ ಹಾಕಿದ್ದ ಪೋಸ್ಟ್‌ ಒಂದು ವೈರಲ್‌ ಆಗಿದೆ. ಇವರ ಈ ಪೋಸ್ಟ್‌ಗೆ 37,000ಕ್ಕೂ ಅಧಿಕ ಲೈಕ್‌ಗಳು ಬಂದಿವೆ.

ಐಐಎಂ ರಾಂಚಿಯ ಪ್ರೊಫೆಸರ್‌ ಆಗಿ ಆಯ್ಕೆಯಾಗಿರುವ ಕೇರಳದ ಕಾಸರಗೋಡಿನ ರಂಜಿತ್‌ ರಾಮಚಂದ್ರನ್‌ ಅವರು ತಾನು ಈ ಹುದ್ದೆಗೇರಲು ಪಟ್ಟ ಕಷ್ಟವನ್ನು ತಮ್ಮ ಪೋಸ್ಟ್‌ನಲ್ಲಿ ಬಿಚ್ಚಿಟ್ಟಿದ್ದಾರೆ. ತಾನು ಹುಟ್ಟಿ ಬೆಳೆದ ಕಾಸರಗೋಡಿನಿಂದ ಹೊರಗಡೆ ಎಂದೂ ಹೋಗಿರದ ಯುವಕ ಈಗ ಅಸಿಸ್ಟೆಂಟ್‌ ಪ್ರೊಫೆಸರ್‌. ತನ್ನಂತೆ ಕಷ್ಟ ಪಡುತ್ತಿರುವ ಯುವಜನರಿಗೆ ಇದು ಪ್ರೇರ ಣೆಯಾಗಲಿ ಎಂದು ತಮ್ಮ ಜೀವನದ ಪಯಣವನ್ನು ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಎಳೆಎಳೆಯಾಗಿ ವಿವರಿಸಿದ್ದಾರೆ. ರಾಜ್ಯದ ಹಣ ಕಾಸು ಸಚಿವ ಟಿ.ಎಂ.ಥಾಮಸ್‌ ಇಸಾಕ್‌ ಸಹಿತ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ರಂಜಿತ್‌ ಕಾಸರಗೋಡಿನ ಪಾಣತ್ತೂರಿ ನಲ್ಲಿ ಬಿಎಸ್‌ಎನ್‌ಎಲ್‌ ದೂರವಾಣಿ ವಿನಿಮಯ ಕೇಂದ್ರದಲ್ಲಿ ರಾತ್ರಿ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದರು. ಆ ಸಂದರ್ಭ ಅವರು ಅರ್ಥಶಾಸ್ತ್ರ ಪದವಿ ಪಡೆಯು ತ್ತಿದ್ದರು.”ಹಗಲು ಕಾಲೇಜಿಗೆ ಹೋಗಿ ರಾತ್ರಿ ದೂರವಾಣಿ ವಿನಿಮಯ ಕೇಂದ್ರದಲ್ಲಿ “ನೈಟ್‌ ವಾಚ್‌ಮನ್‌’ ಆಗಿ ಕೆಲಸ ಮಾಡು ತ್ತಿದ್ದೆ. ಪದವಿ ಪಡೆದ ಬಳಿಕ ಮದ್ರಾಸ್‌ ಐಐಟಿಗೆ ಸೇರಿದೆ. ಮಲಯಾಳ ಮಾತ್ರ ತಿಳಿದಿದ್ದರಿಂದ ಅಲ್ಲಿ ಅಧ್ಯಯನ ಮಾಡಲು ಕಷ್ಟವಾಯಿತು. ಇದರಿಂದ ನಿರಾಸೆಗೊಂಡು ಪಿಎಚ್‌.ಡಿ. ಅನ್ನು ತೊರೆಯಲು ನಿರ್ಧರಿಸಿದೆ. ಆದರೆ ಮಾರ್ಗದರ್ಶಿಯಾಗಿದ್ದ ಡಾ| ಸುಭಾಷ್‌ ಅವರು ಇದಕ್ಕೆ ಅವಕಾಶ ನೀಡಲಿಲ್ಲ. ಅವರ ಸಹಕಾರದಿಂದ ನಾನು ಅಧ್ಯಯನವನ್ನು ಮುಂದುವರಿಸಿ ಕಳೆದ ವರ್ಷ ಡಾಕ್ಟರೇಟ್‌ ಪದವಿಯನ್ನು ಪಡೆದೆ ಎಂದವರು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳುಗಳಿಂದ ಬೆಂಗಳೂ ರಿನ ಕ್ರೈಸ್ಟ್‌ ವಿಶ್ವವಿದ್ಯಾನಿಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸು ತ್ತಿದ್ದರು. ನನ್ನ ಜೀವನ ಕಥೆ ಕೆಲವರಿಗೆ ಸ್ಫೂರ್ತಿ ನೀಡುತ್ತದೆ ಎಂದು ಆಶಿಸಿದ್ದೇನೆ. ಪ್ರತಿ ಯೊಬ್ಬರೂ ಒಳ್ಳೆಯ ಕನಸು ಕಾಣ ಬೇಕು ಮತ್ತು ಅವರ ಕನಸುಗಳಿಗಾಗಿ ಹೋರಾಡಬೇಕೆಂದು ನಾನು ಬಯ ಸುತ್ತೇನೆ. ಇತರ ಜನರು ಇದರಿಂದ ಪ್ರೇರಿತ ರಾಗಿ ಯಶಸ್ಸನ್ನು ಕಂಡುಕೊಳ್ಳ ಬೇಕೆಂದು ನಾನು ಬಯಸುತ್ತೇನೆ ಎಂದು ಹೇಳಿದರು.

ಅವರ ತಂದೆ ಟೈಲರ್‌ ಆಗಿದ್ದು, ತಾಯಿ ಉದ್ಯೋಗ ಖಾತರಿ ಯೋಜನೆಯಡಿ ದೈನಂದಿನ ಕೂಲಿ ಕಾರ್ಮಿಕರಾಗಿದ್ದಾರೆ. ಇವರಿಗೆ ಮೂವರು ಮಕ್ಕಳಿದ್ದು, ರಂಜಿತ್‌ ಹಿರಿಯವನು. ಸೋರುವ ಮಾಡಿಗೆ ಪ್ಲಾಸ್ಟಿಕ್‌ ಮುಚ್ಚಿದ ಮನೆಯಲ್ಲಿ ಇವರು ಬದುಕು.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.