ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬಿಹಾರ ಸಿಎಂ ನಿತೀಶ್; ಆರ್ ಜೆಡಿ, ಜೆಡಿಯು ಸರ್ಕಾರ ರಚನೆ
ಭಾರತೀಯ ಜನತಾ ಪಕ್ಷ ಕೂಡಾ ಸಂಜೆ 5ಗಂಟೆಗೆ ಸಭೆ ಕರೆದಿರುವುದಾಗಿ ಮೂಲಗಳು ಹೇಳಿವೆ.
Team Udayavani, Aug 9, 2022, 3:58 PM IST
ಪಾಟ್ನಾ: ಬಿಹಾರದಲ್ಲಿನ ನಾಟಕೀಯ ರಾಜಕೀಯ ಬೆಳವಣಿಗೆಯ ನಡುವೆಯೇ ನಿತೀಶ್ ಕುಮಾರ್ ಮಂಗಳವಾರ (ಆಗಸ್ಟ್ 09) ಸಂಜೆ ರಾಜ್ಯಪಾಲ ಫಗು ಚೌಹಾಣ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಜೆಡಿಯು, ಬಿಜೆಪಿ ಮೈತ್ರಿ ಸರ್ಕಾರ ಪತನಗೊಂಡತಾಗಿದೆ.
ಇದನ್ನೂ ಓದಿ:ಚಾಮರಾಜನಗರ: ಜನ್ಮದಿನದಂದೇ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಕಾಲೇಜು ಉಪನ್ಯಾಸಕಿ
ಆರ್ ಜೆಡಿ ಶಾಸಕ ತೇಜಸ್ವಿ ಯಾದವ್ ಜತೆಗೂಡಿ ರಾಜಭವನಕ್ಕೆ ಆಗಮಿಸಿ ರಾಜೀನಾಮೆ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ. ಇಂದು ನಿತೀಶ್ ಕುಮಾರ್ ಪಕ್ಷದ ಶಾಸಕರ ಜತೆ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಜತೆಗಿನ ಮೈತ್ರಿಯನ್ನು ಕಡಿದುಕೊಳ್ಳಲು ನಿರ್ಧರಿಸಿರುವುದಾಗಿ ವರದಿ ವಿವರಿಸಿದೆ.
ಬಿಹಾರದಲ್ಲಿ 2017ರಲ್ಲಿಯೂ ಕೂಡಾ ಆರ್ ಜೆಡಿ ಸಖ್ಯ ತೊರೆದು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ರಾತ್ರೋರಾತ್ರಿ ಜೆಡಿಯು ಹೊಸ ಸರ್ಕಾರ ರಚಿಸಿತ್ತು. ಇದೀಗ ಮತ್ತೆ ಬಿಜೆಪಿ ಜತೆಗಿನ ಮೈತ್ರಿ ಕಡಿದುಕೊಂಡು ಮತ್ತೆ ಆರ್ ಜೆಡಿ ಜತೆ ಕೈಜೋಡಿಸಲು ಜೆಡಿಯು ಕೈಜೋಡಿಸಿದಂತಾಗಿದೆ.
ಬಿಹಾರದಲ್ಲಿನ ದಿಢೀರ್ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಕೂಡಾ ಸಂಜೆ 5ಗಂಟೆಗೆ ಸಭೆ ಕರೆದಿರುವುದಾಗಿ ಮೂಲಗಳು ಹೇಳಿವೆ. ಇಂದು ಬೆಳಗ್ಗೆ ಪಾಟ್ನಾದಲ್ಲಿ ಲಾಲೂ ಪ್ರಸಾದ್ ಯಾದವ್ ನಿವಾಸದಲ್ಲಿ ರಾಷ್ಟ್ರೀಯ ಜನತಾ ದಳದ ಶಾಸಕರು, ಪಕ್ಷದ ಮುಖಂಡರು ಭೇಟಿ ನೀಡಿ, ಮಾತುಕತೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
ED; ದಿಲ್ಲಿ ಲಿಕ್ಕರ್ ಕೇಸ್ ಡೀಲ್ಗೆ ಕೆಸಿಆರ್ ಪುತ್ರಿ ಕವಿತಾ ಸಂಚು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ