ಬಿಹಾರ ವಿಧಾನಸಭೆ: ಬಹುಮತ ಸಾಬೀತುಪಡಿಸಿದ ನಿತೀಶ್ ಕುಮಾರ್, ಕಲಾಪ ಬಹಿಷ್ಕರಿಸಿದ ಬಿಜೆಪಿ
ಕಲಾಪ ಆರಂಭವಾದಾಗ ಬಿಜೆಪಿ ಮತದಾನಕ್ಕೂ ಮುನ್ನ ಕಲಾಪದಿಂದ ಹೊರನಡೆದಿತ್ತು.
Team Udayavani, Aug 24, 2022, 5:24 PM IST
ಪಾಟ್ನಾ: ಭಾರತೀಯ ಜನತಾ ಪಕ್ಷದ ಮೈತ್ರಿಕೂಟದಿಂದ ಹೊರಬಂದು ರಾಷ್ಟ್ರೀಯ ಜನತಾ ದಳ, ಕಾಂಗ್ರೆಸ್ ಸೇರಿದಂತೆ ಮಹಾಘಟಬಂಧನ್ ಜೊತೆ ಕೈಜೋಡಿಸುವ ಮೂಲಕ ನಿತೀಶ್ ಕುಮಾರ್ ನೂತನ ಸರ್ಕಾರ ರಚಿಸಿದ್ದು, ಬುಧವಾರ(ಆಗಸ್ಟ್ 24) ಬಿಹಾರ ವಿಧಾನಸಭೆಯಲ್ಲಿ ನಡೆದ ಬಹುಮತ ಪರೀಕ್ಷೆಯಲ್ಲಿ ಗೆಲುವು ಸಾಧಿಸಿದೆ.
ಇದನ್ನೂ ಓದಿ:ಮಣಿಪಾಲ: ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ದಾಳಿ; ಬಾಲಕಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು
ಬಿಹಾರ ವಿಧಾನಸಭೆಯ ಕಲಾಪ ದೀರ್ಘ ಸಮಯದವರೆಗೆ ಮುಂದೂಡಿದ್ದು, ನಂತರ ಕಲಾಪ ಆರಂಭವಾದಾಗ ಬಿಜೆಪಿ ಮತದಾನಕ್ಕೂ ಮುನ್ನ ಕಲಾಪದಿಂದ ಹೊರನಡೆದಿತ್ತು.
ವಿಶ್ವಾಸಮತ ಸಾಬೀತುಪಡಿಸುವ ಚರ್ಚೆಯಲ್ಲಿ ಮಾತನಾಡಿದ ಆರ್ ಜೆಡಿ ಮುಖಂಡ, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ನೂತನ ಮೈತ್ರಿಕೂಟ ಐತಿಹಾಸಿಕವಾಗಿದೆ ಎಂದು ಹೇಳಿದರು.
ಅಧಿವೇಶನ ಆರಂಭಕ್ಕೂ ಮೊದಲು ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಜನತಾ ದಳ (ಸಂಯುಕ್ತ)ದ ಉಪ ಸ್ಪೀಕರ್ ಮಹೇಶ್ವರ್ ಹಝಾರಿ ಅವರ ಅಧ್ಯಕ್ಷತೆಯಲ್ಲಿ ಬಹುಮತ ಪರೀಕ್ಷೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ