ತಿರುಮಲದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ : ಟಿಟಿಡಿ ಹೇಳಿಕೆ


Team Udayavani, Apr 22, 2021, 7:30 AM IST

ತಿರುಮಲದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ : ಟಿಟಿಡಿ ಹೇಳಿಕೆ

ತಿರುಪತಿ : “ತಿರುಮಲದ ಅಕ್ಷ ಗಂಗಾ ಜಲಪಾತ ಸಮೀಪ ಇರುವ ಜಪಲಿ ತೀರ್ಥವೇ ಹನುಮಂತನ ಜನ್ಮಸ್ಥಳ’.
– ಹೀಗೆಂದು ತಿರುಮಲ ತಿರುಪತಿ ದೇವಸ್ಥಾನಮ್ಸ್‌ (ಟಿಟಿಡಿ) ಬುಧವಾರ ಹೇಳಿಕೊಂಡಿದೆ.

ಈ ಸಂಬಂಧ ತನ್ನ ಬಳಿ ಸಾಕ್ಷ್ಯಗಳೂ ಇವೆ ಎಂದು ಹೇಳಿರುವ ಅದು ಸಾರ್ವಜನಿಕರ ಮುಂದೆ ಬಹಿರಂಗಪಡಿಸಿದೆ. ಒಟ್ಟು 20 ಪುಟಗಳ ತೆಲುಗು ಪುಸ್ತಕವೊಂದನ್ನೂ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಕರ್ನಾಟಕದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟವೇ ಹನುಮಂತನ ಜನ್ಮಸ್ಥಳ ಎಂಬ ನಂಬಿಕೆಯನ್ನೇ ಅಳಿಸಲು ಹೊರಟಿದೆ. ಅಷ್ಟೇ ಅಲ್ಲ ತಿರುಮಲದ ಅಂಜನಾದ್ರಿ ಬೆಟ್ಟದಲ್ಲಿ ಹನುಮಂತ ಹುಟ್ಟಿದ್ದು ಎಂಬ ವಾದ ಪ್ರತಿಪಾದನೆಗಾಗಿ ಹಂಪಿಯನ್ನೇ ಬಳಸಿಕೊಂಡಿದೆ!

ಕಳೆದ ಡಿಸೆಂಬರ್‌ನಲ್ಲೇ ರಾಮಭಕ್ತ ಆಂಜನೇಯ ಹುಟ್ಟಿದ್ದು ತಿರುಪತಿಯಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಎಂಬ ನಿರ್ಧಾರಕ್ಕೆ ಬಂದಿದ್ದ ಟಿಟಿಡಿ, ಈ ಸಂಬಂಧ ಸಾಕ್ಷ್ಯಗಳನ್ನು ಕಲೆ ಹಾಕಲು ತಜ್ಞರ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿಯು ಕಳೆದ ಯುಗಾದಿಯಂದೇ ತನ್ನ ವರದಿ ನೀಡಬೇಕಾಗಿತ್ತು. ಆದರೆ ರಾಮ ನವಮಿಯ ಪುಣ್ಯ ದಿನದಂದು ಬಿಡುಗಡೆ ಮಾಡುವ ಯೋಚನೆಯೊಂದಿಗೆ ಮುಂದೂಡಿತ್ತು.

ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಮುರಳೀಧರ ಶರ್ಮಾ ನೇತೃತ್ವದ ಸಮಿತಿಯು “ಪುರಾಣಗಳಲ್ಲಿ ಉಲ್ಲೇಖಗೊಂಡ, ಹನುಮಂತನ ಜನ್ಮದಿನ ಸ್ಥಳದ ಬಗ್ಗೆ ಹಲವಾರು ಸಾಹಿತ್ಯಿಕ ಸಾಕ್ಷ್ಯಗಳು, ಹಲವಾರು ಶಿಲಾಶಾಸನಗಳಲ್ಲಿ ಉಲ್ಲೇಖಗೊಂಡ ಮತ್ತು ಭೌಗೋಳಿಕ ಅಂಶಗಳನ್ನು ಸಮಗ್ರವಾಗಿ ಅಧ್ಯಯನ ನಡೆಸಿ ತಿರುಮಲದ ಅಂಜನಾದ್ರಿ ಪರ್ವತದ ವ್ಯಾಪ್ತಿಯಲ್ಲಿರುವ ಅಕ್ಷಗಂಗಾ ಜಲಪಾತ ಸಮೀಪದ ಜಪಲಿ ತೀರ್ಥವೇ ಆಂಜನೇಯನ ಜನ್ಮಸ್ಥಳ ಎಂದು ತೀರ್ಮಾನಕ್ಕೆ ಬರಲಾಗಿದೆ’ ಹೇಳಿಕೊಂಡಿದೆ. ಐತಿಹಾಸಿಕ ದಾಖಲೆಗಳ ಜತೆಗೆ ಖಗೋಳಶಾಸ್ತ್ರದ ಅಧ್ಯಯನದಲ್ಲಿ ಕೂಡ ಅಂಜನಾದ್ರಿಯೇ ಜನ್ಮಸ್ಥಳ ಎಂದು ಕಂಡುಬಂದಿದೆ ಎಂದಿದೆ.

ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌, ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್‌. ಜವಾಹರ್‌ ರೆಡ್ಡಿ, ಹೆಚ್ಚುವರಿ ಕಾರ್ಯನಿರ್ವಹಣಾಧಿಕಾರಿ ಎ.ವಿ. ಧರ್ಮ ರೆಡ್ಡಿ ಸಮ್ಮುಖದಲ್ಲಿ ಟಿಟಿಡಿಯ “ಮಹತ್ವದ ವಾದ’ ದೃಢೀಕರಿಸಲಾಗಿದೆ.

19 ಹೆಸರುಗಳು
ಸಮಿತಿಯ ಮುಖ್ಯಸ್ಥ ಪ್ರೊ| ಶರ್ಮಾ ಹೇಳಿದ ಪ್ರಕಾರ ವೆಂಕಟಾಚಲಂ ಎನ್ನುವುದನ್ನು ಅಂಜನಾದ್ರಿ ಎಂದೂ ಕರೆಯಲಾಗುತ್ತದೆ. ಇದರ ಜತೆಗೆ 19 ಇತರ ಹೆಸರುಗಳೂ ಈ ಬೆಟ್ಟಕ್ಕೆ ಇವೆ ಎಂದು ಹೇಳಿದ ಅವರು, ತ್ರೇತಾಯುಗದಲ್ಲಿ ರಾಮ ಭಕ್ತ ಹನುಮಂತ ಅಂಜನಾದ್ರಿಯಲ್ಲಿ ಹುಟ್ಟಿದ್ದ ಎಂದು ಪ್ರಕಟಿಸಿದ್ದಾರೆ.

ಸ್ಕಂದ ಪುರಾಣ ಮತ್ತು ವೆಂಕಟಾಚಲ ಮಹಾತ್ಮೆಯಲ್ಲಿ ಹನುಮಂತನ ತಾಯಿ ಅಂಜನಾದೇವಿ ಅಗಸ್ತ್ಯ ಮಹರ್ಷಿಯನ್ನು ಭೇಟಿಯಾಗಿದ್ದಳು. ಈ ಸಂದರ್ಭದಲ್ಲಿ ತನಗೆ ಮಕ್ಕಳಾಗುವಂತೆ ಅನುಗ್ರಹಿಸಬೇಕು ಎಂದು ಕೋರಿಕೊಂಡಿದ್ದಳು. ಆಗ ಅಗಸ್ತ್ಯ ಮುನಿ ವೆಂಕಟಾಚಲಂನಲ್ಲಿ ತಪಸ್ಸನ್ನಾಚರಿಸುವಂತೆ ಸಲಹೆ ಮಾಡಿದ್ದರು. ಅದಕ್ಕನುಸಾರವಾಗಿ ಅಂಜನಾ ದೇವಿ ಅಲ್ಲಿ ತಪಸ್ಸು ಮಾಡಿ ಪುತ್ರನನ್ನು ಹಡೆದಳು. ಹೀಗಾಗಿ ಪರ್ವತಕ್ಕೆ ಅಂಜನಾದ್ರಿ ಎಂಬ ಹೆಸರು ಬಂತು ಎಂದು ಶರ್ಮಾ ಪ್ರತಿಪಾದಿಸಿದ್ದಾರೆ.

ಅಂಜನಾದ್ರಿಯೇ ಹನುಮನ ಜನ್ಮಸ್ಥಳ ಎಂಬುದನ್ನು ದೃಢಪಡಿಸಲು 12 ಪುರಾಣಗಳನ್ನು ಅಧ್ಯಯನ ನಡೆಸಿ, ಸಾಕ್ಷ್ಯ ಸಂಗ್ರಹಿಸಲಾಗಿದೆ. ಕಂಬ ರಾಮಾಯಣ ಮತ್ತು ಅನ್ನಮಾಚಾರ್ಯರ ಕೀರ್ತನೆಗಳಲ್ಲಿಯೂ ಈ ಅಂಶ ದೃಢಪಟ್ಟಿದೆ ಎಂದು
ಹೇಳಿದ್ದಾರೆ ಪ್ರೊ| ಶರ್ಮಾ. 12 ಮತ್ತು 13ನೇ ಶತಮಾನದ ಶಿಲಾ ಶಾಸನಗಳು ತಿರುಮಲ ದೇಗುಲದಲ್ಲಿವೆ. ಅದರಲ್ಲಿಯೂ ಹನುಮನ ಜನ್ಮಸ್ಥಳ ಉಲ್ಲೇಖಗೊಂಡಿದೆ.

ಹಂಪಿಯಲ್ಲಿ ಸಾಕ್ಷ್ಯಗಳಿಲ್ಲ
ಹಂಪಿಯಲ್ಲೇ ಆಂಜನೇಯ ಹುಟ್ಟಿದ್ದು ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಕನ್ನಡ ವಿಶ್ವವಿದ್ಯಾನಿಲಯದ ವಿದ್ವಾಂಸರು ಹೇಳಿದ್ದಾರೆ ಎಂದೂ ಟಿಟಿಡಿ ತನ್ನ ವೆಬ್‌ಸೈಟ್‌ನಲ್ಲಿ ಬರೆದುಕೊಂಡಿದೆ.

ಹಂಪಿಯೇ ಕಿಷ್ಕಿಂಧೆ!
ಆಂಜನೇಯ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಹುಟ್ಟಲಿಲ್ಲವೆಂದು ಹೇಳಿದರೂ, ತಜ್ಞರ ಸಮಿತಿ ಹಂಪಿಯೇ ಕಿಷ್ಕಿಂಧೆ ಎಂಬುದನ್ನು ಒಪ್ಪಿಕೊಂಡಿದೆ. ಇದಕ್ಕೆ ಪೂರಕವಾಗಿ ಕೆಲವೊಂದು ವಾದಗಳನ್ನೂ ಮಂಡಿಸಿದೆ. ತಿರುಮಲದ ಅಂಜನಾದ್ರಿ ಮತ್ತು ಹಂಪಿ ಹತ್ತಿರದಲ್ಲಿರುವುದರಿಂದ ಅಲ್ಲಿಗೆ ವಾನರ ಸೇನೆ ವಲಸೆ ಹೋಗಿದೆ. ಉಳಿದ ಪ್ರದೇಶಗಳು ದೂರ ಇರುವುದರಿಂದ ವಲಸೆ ಅಸಾಧ್ಯ.

– ಕರ್ನಾಟಕದ ಅಂಜನಾದ್ರಿ ಬೆಟ್ಟದಲ್ಲಿಯೇ ಹುಟ್ಟಿದ್ದರೆ ಸುಗ್ರೀವ ಮತ್ತು ಹನುಮಾನ್‌ ಅವರು ಕಿಷ್ಕಿಂಧೆಗೆ ವಾರನ ಸೇನೆ ಕರೆದುಕೊಂಡು ವಲಸೆ ಹೋಗುವ ಬಗ್ಗೆ ಮಾತನಾಡುತ್ತಿರಲಿಲ್ಲ.
– ಅಂಜನಾದ್ರಿಯಿಂದ ಕಿಷ್ಕಿಂಧೆಗೆ ವಾನರ ಸೇನೆ ವಲಸೆ ಹೋಗಿದೆ. ಆದರೆ, ವಲಸೆಯ ದೂರ ಕಡಿಮೆಯೇ ಇರಬೇಕು.
– ತಿರುಮಲದ ಅಂಜನಾದ್ರಿ ಬೆಟ್ಟದಿಂದ ಹಂಪಿಗೆ 363 ಕಿ.ಮೀ. ಈ ಎರಡು ಪ್ರದೇಶಗಳ ಪ್ರಯಾಣದ ಅವಧಿ ಕಡಿಮೆ
– ಝಾರ್ಖಂಡ್‌ನ‌ ಗುಮ್ಲಾ ದಲ್ಲಿರುವ ಅಂಜನ್‌ ಹಳ್ಳಿಯಿಂದ ಹಂಪಿಗೆ 1,240 ಕಿ.ಮೀ.
– ಹರ್ಯಾಣದ ಕೈಥಾಳ್‌ ನಿಂದ ಹಂಪಿಗೆ 1,626 ಕಿ.ಮೀ.
– ನಾಸಿಕ್‌ ಜಿಲ್ಲೆಯ ಅಂಜನೇರಿಯಿಂದ ಹಂಪಿಗೆ 616 ಕಿ.ಮೀ.

ನಾವು ನಂಬಿರುವ ಇತಿಹಾಸ, ಪರಂಪರೆ, ಕಲ್ಪನೆಯ ಪ್ರಕಾರ ಕೊಪ್ಪಳದ ಅಂಜನಾದ್ರಿ ಬೆಟ್ಟವೇ ಆಂಜನೇಯನ ಜನ್ಮಸ್ಥಳ. ಹೀಗಾಗಿ ಅದರ ಅಭಿವೃದ್ಧಿಗೆ ನೀಲನಕಾಶೆ ರೂಪಿಸಿದ್ದೇವೆ. ಟಿಟಿಡಿಯವರು ಯಾವ ಆಧಾರದಲ್ಲಿ ನಿರ್ಧರಿಸಿದ್ದಾರೋ ಗೊತ್ತಿಲ್ಲ.
– ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ ಸಚಿವ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.